<p><strong>ಕೆ.ಆರ್.ನಗರ:</strong> ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಕೆ.ಚಿನ್ನಸ್ವಾಮಿ (94) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು.</p>.<p>ಅವರಿಗೆ ಮೂವರು ಪುತ್ರರಿದ್ದಾರೆ. ಈಚೆಗೆ ಮನೆಯಲ್ಲಿ ಕಾಲುಜಾರಿ ಬಿದ್ದಿದ್ದ ಅವರ ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿನ ಕಂಠೇನಹಳ್ಳಿ ಸಾರ್ವಜನಿಕ ಸ್ಮಶಾನದಲ್ಲಿ ಶುಕ್ರವಾರ ಅಂತ್ಯಸಂಸ್ಕಾರ ನಡೆಯಿತು.</p>.<p>ಕೊಡಗು ಜಿಲ್ಲೆಯ ತೊರೆನೂರು ಗ್ರಾಮದವರಾದ ಅವರು, ಕೆ.ಆರ್.ನಗರ ತಾಲ್ಲೂಕಿನ ಮಳಲಿ ಗ್ರಾಮದ ಸೋದರ ಮಾವನ ಮನೆಯಲ್ಲಿದ್ದುಕೊಂಡೇ ಶಿಕ್ಷಣ ಪೂರೈಸಿದ್ದರು. ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಾಗಿ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿದ್ದರು.</p>.<p>ನಿವೃತ್ತಿ ನಂತರ 1988ರಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಪರಿಷತ್ ಗೆ ಮೊದಲ ಬಾರಿ ಆಯ್ಕೆಯಾಗಿದ್ದರು.</p>.<p>ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ಎಡತೊರೆ ಬಲಿಜ (ಬಣಜಿಗ) ಸಂಘದ ಮಹಾ ಪೋಷಕರಾಗಿ, ಇಲ್ಲಿನ ಮಹಾತ್ಮ ಗಾಂಧಿ ಉದ್ಯಾನವನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ನಗರ:</strong> ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಕೆ.ಚಿನ್ನಸ್ವಾಮಿ (94) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು.</p>.<p>ಅವರಿಗೆ ಮೂವರು ಪುತ್ರರಿದ್ದಾರೆ. ಈಚೆಗೆ ಮನೆಯಲ್ಲಿ ಕಾಲುಜಾರಿ ಬಿದ್ದಿದ್ದ ಅವರ ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿನ ಕಂಠೇನಹಳ್ಳಿ ಸಾರ್ವಜನಿಕ ಸ್ಮಶಾನದಲ್ಲಿ ಶುಕ್ರವಾರ ಅಂತ್ಯಸಂಸ್ಕಾರ ನಡೆಯಿತು.</p>.<p>ಕೊಡಗು ಜಿಲ್ಲೆಯ ತೊರೆನೂರು ಗ್ರಾಮದವರಾದ ಅವರು, ಕೆ.ಆರ್.ನಗರ ತಾಲ್ಲೂಕಿನ ಮಳಲಿ ಗ್ರಾಮದ ಸೋದರ ಮಾವನ ಮನೆಯಲ್ಲಿದ್ದುಕೊಂಡೇ ಶಿಕ್ಷಣ ಪೂರೈಸಿದ್ದರು. ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಾಗಿ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿದ್ದರು.</p>.<p>ನಿವೃತ್ತಿ ನಂತರ 1988ರಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಪರಿಷತ್ ಗೆ ಮೊದಲ ಬಾರಿ ಆಯ್ಕೆಯಾಗಿದ್ದರು.</p>.<p>ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ಎಡತೊರೆ ಬಲಿಜ (ಬಣಜಿಗ) ಸಂಘದ ಮಹಾ ಪೋಷಕರಾಗಿ, ಇಲ್ಲಿನ ಮಹಾತ್ಮ ಗಾಂಧಿ ಉದ್ಯಾನವನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>