<p><strong>ಮೈಸೂರು:</strong> ‘ಧಾರವಾಡ–ಹುಬ್ಬಳ್ಳಿಯಲ್ಲಿ 2008ರಲ್ಲಿ ಎಂಟು ಸದಸ್ಯರಿಂದ ಆರಂಭಗೊಂಡ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ, ಇದೀಗ 22 ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿದೆ’ ಎಂದು ಅಖಿಲ ಭಾರತ ಕನ್ಸ್ಟ್ರಕ್ಷನ್ ಮಜ್ದೂರ್ ಮಹಾಸಂಘದ ಅಧ್ಯಕ್ಷ ಸಿ.ಟಿ.ಪಾಟೀಲ ಹೇಳಿದರು.</p>.<p>ನಗರದ ಮಾಧವ ಕೃಪದಲ್ಲಿ ಭಾನುವಾರ ಸಂಜೆ ನಡೆದ ದತ್ತೋಪಂತ್ ರೇಂಗಡಿ ಜನ್ಮ ಶತಾಬ್ದಿ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಮತ್ತು ನಗರ ಘಟಕದ ವತಿಯಿಂದ 2021ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಭಾರತೀಯ ಮಜ್ದೂರ್ ಸಂಘಟನೆಯಡಿ (ಬಿಎಂಎಸ್) ಸಂಘ ಕಾರ್ಯಾಚರಿಸುತ್ತಿದ್ದು, ಕರ್ನಾಟಕದಲ್ಲಿ ಇದೂವರೆಗೂ ನಮ್ಮ ಸಂಘಟನೆಯಿಂದ ₹ 70 ಕೋಟಿ ಕ್ಲೇಮು ಪರಿಹಾರ ಹಾಗೂ ವಿವಿಧ ಯೋಜನೆಯಡಿಯ ಸೌಲಭ್ಯವನ್ನು ಕಟ್ಟಡ ಕಾರ್ಮಿಕರಿಗೆ ಕೊಡಿಸಿದ್ದೇವೆ’ ಎಂದು ತಿಳಿಸಿದರು.</p>.<p>‘ಅಸಂಘಟಿತ ಕಾರ್ಮಿಕರ ಕ್ಷೇತ್ರದಲ್ಲಿ ಕಾರ್ಮಿಕರನ್ನು ಸಂಘಟಿಸಿ, ಅವರ ಶ್ರೇಯೋಭಿವೃದ್ಧಿಗಾಗಿ ದುಡಿಯಬೇಕು ಎಂದು ದತ್ತೋಪಂತ್ ರೇಂಗಡಿ ಈ ಹಿಂದೆಯೇ ಹೇಳಿದ್ದರು. ಅದರಂತೆ ಬಿಎಂಎಸ್ ಕಾರ್ಯಾಚರಿಸುತ್ತಿದೆ. ಎಲ್ಲೆಡೆ ಸಂಘಟನೆಯನ್ನು ವಿಸ್ತರಿಸುತ್ತಿದೆ’ ಎಂದು ಪಾಟೀಲ ಹೇಳಿದರು.</p>.<p>‘ಕಟ್ಟಡ ಕಾರ್ಮಿಕರು, ಸಂಘಟನೆ ಬಗ್ಗೆ ಕೆಲವು ವರ್ಷಗಳ ಹಿಂದೆ ಯಾರೊಬ್ಬರಿಗೂ ಗೊತ್ತಿರಲಿಲ್ಲ. ಇದೀಗ ರಾಜ್ಯದ 20 ಜಿಲ್ಲೆಯಲ್ಲಿ ಸಂಘಟನೆಯಿದೆ. 25 ಸಾವಿರ ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ. ಕೋವಿಡ್ನಿಂದ ಸಂಘಟನೆಗೆ ಕೊಂಚ ಹಿನ್ನಡೆಯಾಗಿತ್ತು. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮದ ಹಂತದಲ್ಲೂ ಸಂಘಟನೆಯ ಕೆಲಸಗಳನ್ನು ಚುರುಕುಗೊಳಿಸಲಿದ್ದೇವೆ. 60 ಸಾವಿರ ಕಾರ್ಮಿಕರನ್ನು ನೋಂದಾಯಿಸುವ ಗುರಿ ಹೊಂದಿದ್ದೇವೆ’ ಎಂದು ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷ ಚಿಂತಾಮಣಿ ಕೋಡಹಳ್ಳಿ ತಿಳಿಸಿದರು.</p>.<p>ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಎನ್.ಚಂದ್ರು ಮಾತನಾಡಿ ‘ಜಿಲ್ಲಾ ಸಂಘಕ್ಕೆ ಕಟ್ಟಡ ನಿರ್ಮಿಸಬೇಕಿದೆ. ಸಂಘಟನೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಸದಸ್ಯರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಕುಟುಂಬ ಪ್ರಭೋದನ ಸಂಯೋಜಕ ಎಸ್.ಎಲ್.ರಂಗರಾಜು ಮಾತನಾಡಿದರು. ಗೌರವ ಅಧ್ಯಕ್ಷ ಸಿದ್ದರಾಜು ಉಪಸ್ಥಿತರಿದ್ದರು.</p>.<p>ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ಕೆ.ನಾಗೇಶ್ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಧಾರವಾಡ–ಹುಬ್ಬಳ್ಳಿಯಲ್ಲಿ 2008ರಲ್ಲಿ ಎಂಟು ಸದಸ್ಯರಿಂದ ಆರಂಭಗೊಂಡ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ, ಇದೀಗ 22 ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿದೆ’ ಎಂದು ಅಖಿಲ ಭಾರತ ಕನ್ಸ್ಟ್ರಕ್ಷನ್ ಮಜ್ದೂರ್ ಮಹಾಸಂಘದ ಅಧ್ಯಕ್ಷ ಸಿ.ಟಿ.ಪಾಟೀಲ ಹೇಳಿದರು.</p>.<p>ನಗರದ ಮಾಧವ ಕೃಪದಲ್ಲಿ ಭಾನುವಾರ ಸಂಜೆ ನಡೆದ ದತ್ತೋಪಂತ್ ರೇಂಗಡಿ ಜನ್ಮ ಶತಾಬ್ದಿ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಮತ್ತು ನಗರ ಘಟಕದ ವತಿಯಿಂದ 2021ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಭಾರತೀಯ ಮಜ್ದೂರ್ ಸಂಘಟನೆಯಡಿ (ಬಿಎಂಎಸ್) ಸಂಘ ಕಾರ್ಯಾಚರಿಸುತ್ತಿದ್ದು, ಕರ್ನಾಟಕದಲ್ಲಿ ಇದೂವರೆಗೂ ನಮ್ಮ ಸಂಘಟನೆಯಿಂದ ₹ 70 ಕೋಟಿ ಕ್ಲೇಮು ಪರಿಹಾರ ಹಾಗೂ ವಿವಿಧ ಯೋಜನೆಯಡಿಯ ಸೌಲಭ್ಯವನ್ನು ಕಟ್ಟಡ ಕಾರ್ಮಿಕರಿಗೆ ಕೊಡಿಸಿದ್ದೇವೆ’ ಎಂದು ತಿಳಿಸಿದರು.</p>.<p>‘ಅಸಂಘಟಿತ ಕಾರ್ಮಿಕರ ಕ್ಷೇತ್ರದಲ್ಲಿ ಕಾರ್ಮಿಕರನ್ನು ಸಂಘಟಿಸಿ, ಅವರ ಶ್ರೇಯೋಭಿವೃದ್ಧಿಗಾಗಿ ದುಡಿಯಬೇಕು ಎಂದು ದತ್ತೋಪಂತ್ ರೇಂಗಡಿ ಈ ಹಿಂದೆಯೇ ಹೇಳಿದ್ದರು. ಅದರಂತೆ ಬಿಎಂಎಸ್ ಕಾರ್ಯಾಚರಿಸುತ್ತಿದೆ. ಎಲ್ಲೆಡೆ ಸಂಘಟನೆಯನ್ನು ವಿಸ್ತರಿಸುತ್ತಿದೆ’ ಎಂದು ಪಾಟೀಲ ಹೇಳಿದರು.</p>.<p>‘ಕಟ್ಟಡ ಕಾರ್ಮಿಕರು, ಸಂಘಟನೆ ಬಗ್ಗೆ ಕೆಲವು ವರ್ಷಗಳ ಹಿಂದೆ ಯಾರೊಬ್ಬರಿಗೂ ಗೊತ್ತಿರಲಿಲ್ಲ. ಇದೀಗ ರಾಜ್ಯದ 20 ಜಿಲ್ಲೆಯಲ್ಲಿ ಸಂಘಟನೆಯಿದೆ. 25 ಸಾವಿರ ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ. ಕೋವಿಡ್ನಿಂದ ಸಂಘಟನೆಗೆ ಕೊಂಚ ಹಿನ್ನಡೆಯಾಗಿತ್ತು. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮದ ಹಂತದಲ್ಲೂ ಸಂಘಟನೆಯ ಕೆಲಸಗಳನ್ನು ಚುರುಕುಗೊಳಿಸಲಿದ್ದೇವೆ. 60 ಸಾವಿರ ಕಾರ್ಮಿಕರನ್ನು ನೋಂದಾಯಿಸುವ ಗುರಿ ಹೊಂದಿದ್ದೇವೆ’ ಎಂದು ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷ ಚಿಂತಾಮಣಿ ಕೋಡಹಳ್ಳಿ ತಿಳಿಸಿದರು.</p>.<p>ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಎನ್.ಚಂದ್ರು ಮಾತನಾಡಿ ‘ಜಿಲ್ಲಾ ಸಂಘಕ್ಕೆ ಕಟ್ಟಡ ನಿರ್ಮಿಸಬೇಕಿದೆ. ಸಂಘಟನೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಸದಸ್ಯರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಕುಟುಂಬ ಪ್ರಭೋದನ ಸಂಯೋಜಕ ಎಸ್.ಎಲ್.ರಂಗರಾಜು ಮಾತನಾಡಿದರು. ಗೌರವ ಅಧ್ಯಕ್ಷ ಸಿದ್ದರಾಜು ಉಪಸ್ಥಿತರಿದ್ದರು.</p>.<p>ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ಕೆ.ನಾಗೇಶ್ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>