‘ಕಟ್ಟಡ ಕಾರ್ಮಿಕರು, ಸಂಘಟನೆ ಬಗ್ಗೆ ಕೆಲವು ವರ್ಷಗಳ ಹಿಂದೆ ಯಾರೊಬ್ಬರಿಗೂ ಗೊತ್ತಿರಲಿಲ್ಲ. ಇದೀಗ ರಾಜ್ಯದ 20 ಜಿಲ್ಲೆಯಲ್ಲಿ ಸಂಘಟನೆಯಿದೆ. 25 ಸಾವಿರ ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ. ಕೋವಿಡ್ನಿಂದ ಸಂಘಟನೆಗೆ ಕೊಂಚ ಹಿನ್ನಡೆಯಾಗಿತ್ತು. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮದ ಹಂತದಲ್ಲೂ ಸಂಘಟನೆಯ ಕೆಲಸಗಳನ್ನು ಚುರುಕುಗೊಳಿಸಲಿದ್ದೇವೆ. 60 ಸಾವಿರ ಕಾರ್ಮಿಕರನ್ನು ನೋಂದಾಯಿಸುವ ಗುರಿ ಹೊಂದಿದ್ದೇವೆ’ ಎಂದು ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷ ಚಿಂತಾಮಣಿ ಕೋಡಹಳ್ಳಿ ತಿಳಿಸಿದರು.