ನಂತರ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಬಹಳಷ್ಟು ವಿಚಾರಗಳಿಗೆ ಆದ್ಯತೆ ನೀಡಿದ್ದಾರೆ. ಆ ಪೈಕಿ ಕೃಷಿಗೆ ಮೊದಲ ಸ್ಥಾನ ಕೊಡಲಾಗಿದೆ. ಮೂಲಸೌಕರ್ಯ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ರಾಜ್ಯದಲ್ಲಿ ನೇತ್ರಜ್ಯೋತಿ ಕಾರ್ಯಕ್ರಮ ನೀಡಿದ್ದಾರೆ. ಅದರ ಯಶಸ್ವಿ ಅನುಷ್ಠಾನ ನಮ್ಮ ಕ್ಷೇತ್ರದಲ್ಲಿ ಆಗಿದೆ’ ಎಂದು ಹೇಳಿದರು.