<p><strong>ಮೈಸೂರು:</strong> ಜಮೀನೊಂದರಲ್ಲಿ ಕೇರಳದಿಂದ ಕೆಲಸಗಾರರನ್ನು ಕರೆತಂದು ಕೆಲಸ ಮಾಡಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹರಡಿದ ನಂಜನಗೂಡು ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಜಯಶಂಕರ್ (21) ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಈತ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಶುಂಠಿ ಬೇಸಾಯದ ಕೆಲಸಕ್ಕಾಗಿ ನೂರಾರು ಮಂದಿ ಕಾರ್ಮಿಕರನ್ನು ಕೇರಳದಿಂದ ಕರೆದುಕೊಂಡು ಬಂದಿದ್ದಾರೆ ಎಂದು ಸುಳ್ಳುಸುದ್ದಿಯನ್ನು ಹಬ್ಬಿಸಿದ್ದ. ನಂತರ, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಕೇರಳದಿಂದ ಕಾರ್ಮಿಕರು ಬಂದಿರಲಿಲ್ಲ ಎಂಬುದು ಗೊತ್ತಾಯಿತು.</p>.<p>ಸುಳ್ಳು ಸುದ್ದಿ ಹಬ್ಬಿಸಿದ ಜಯಶಂಕರ್ ವಿರುದ್ಧ ಐಪಿಸಿ ಸೆಕ್ಷನ್ 505 (ಸಾರ್ವಜನಿಕರಲ್ಲಿ ಭೀತಿ ಅಥವಾ ಆತಂಕಕ್ಕೆ ಕಾರಣವಾಗಬಲ್ಲ ವಿಷಯಗಳು/ಗಾಳಿ ಸುದ್ದಿ ಹಬ್ಬುವುದು) ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ ಕಾಲಂ 54ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಮೀನೊಂದರಲ್ಲಿ ಕೇರಳದಿಂದ ಕೆಲಸಗಾರರನ್ನು ಕರೆತಂದು ಕೆಲಸ ಮಾಡಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹರಡಿದ ನಂಜನಗೂಡು ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಜಯಶಂಕರ್ (21) ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಈತ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಶುಂಠಿ ಬೇಸಾಯದ ಕೆಲಸಕ್ಕಾಗಿ ನೂರಾರು ಮಂದಿ ಕಾರ್ಮಿಕರನ್ನು ಕೇರಳದಿಂದ ಕರೆದುಕೊಂಡು ಬಂದಿದ್ದಾರೆ ಎಂದು ಸುಳ್ಳುಸುದ್ದಿಯನ್ನು ಹಬ್ಬಿಸಿದ್ದ. ನಂತರ, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಕೇರಳದಿಂದ ಕಾರ್ಮಿಕರು ಬಂದಿರಲಿಲ್ಲ ಎಂಬುದು ಗೊತ್ತಾಯಿತು.</p>.<p>ಸುಳ್ಳು ಸುದ್ದಿ ಹಬ್ಬಿಸಿದ ಜಯಶಂಕರ್ ವಿರುದ್ಧ ಐಪಿಸಿ ಸೆಕ್ಷನ್ 505 (ಸಾರ್ವಜನಿಕರಲ್ಲಿ ಭೀತಿ ಅಥವಾ ಆತಂಕಕ್ಕೆ ಕಾರಣವಾಗಬಲ್ಲ ವಿಷಯಗಳು/ಗಾಳಿ ಸುದ್ದಿ ಹಬ್ಬುವುದು) ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ ಕಾಲಂ 54ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>