<p><strong>ಎಚ್.ಡಿ.ಕೋಟೆ:</strong> ಪಟ್ಟಣದ ಹೆಬ್ಬಾಳ ಜಲಾಶಯದಲ್ಲಿ ನೀರಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ (55), ಪತ್ನಿ ಮಂಜುಳಾ (42), ಪುತ್ರಿ ಹರ್ಷಿತಾ ಮೃತಪಟ್ಟವರು.</p><p>ಶನಿವಾರ ಮುಂಜಾನೆ ಜಲಾಶಯಕ್ಕೆ ಆಗಮಿಸಿದ ಮೂವರೂ ಡೆತ್ ನೋಟ್ ಬರೆದು, ದಡದಲ್ಲಿ ಬೈಕ್ ನಿಲ್ಲಿಸಿ, ನೀರಿಗೆ ಹಾರಿದ್ದಾರೆ. ಗ್ರಾಮಸ್ಥರು ಆ ಮಾರ್ಗವಾಗಿ ಸಂಚರಿಸುವಾಗ ಬೈಕ್ ನಿಲ್ಲಿಸಿರುವುದನ್ನು ಗಮನಿಸಿ, ಚಪ್ಪಲಿಗಳೂ ದಡದಲ್ಲಿ ಬಿಟ್ಟಿರುವುದನ್ನು ನೋಡಿ ಪರಿಶೀಲಿಸಿದಾಗ ಬೈಕ್ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ನಂತರ ಅವರು ಪೊಲೀಸರಿಗೆ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು.</p><p>‘ಈಚೆಗೆ ಮಹದೇವಸ್ವಾಮಿ ದಂಪತಿಯ ಮೊದಲನೇ ಮಗಳು ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಡೆತ್ ನೋಟ್ ಪರಿಶೀಲನೆ ಮಾಡಿದ ಬಳಿಕ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದರು.</p>.ಕೋಟಾದಲ್ಲಿ ಆತ್ಮಹತ್ಯೆ: ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ.ದಲಿತ ಯುವಕನ ಆತ್ಮಹತ್ಯೆ ಪ್ರಕರಣದ ತನಿಖೆಯಾಗಲಿ: ಕೃಷ್ಣಮೂರ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ಪಟ್ಟಣದ ಹೆಬ್ಬಾಳ ಜಲಾಶಯದಲ್ಲಿ ನೀರಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ (55), ಪತ್ನಿ ಮಂಜುಳಾ (42), ಪುತ್ರಿ ಹರ್ಷಿತಾ ಮೃತಪಟ್ಟವರು.</p><p>ಶನಿವಾರ ಮುಂಜಾನೆ ಜಲಾಶಯಕ್ಕೆ ಆಗಮಿಸಿದ ಮೂವರೂ ಡೆತ್ ನೋಟ್ ಬರೆದು, ದಡದಲ್ಲಿ ಬೈಕ್ ನಿಲ್ಲಿಸಿ, ನೀರಿಗೆ ಹಾರಿದ್ದಾರೆ. ಗ್ರಾಮಸ್ಥರು ಆ ಮಾರ್ಗವಾಗಿ ಸಂಚರಿಸುವಾಗ ಬೈಕ್ ನಿಲ್ಲಿಸಿರುವುದನ್ನು ಗಮನಿಸಿ, ಚಪ್ಪಲಿಗಳೂ ದಡದಲ್ಲಿ ಬಿಟ್ಟಿರುವುದನ್ನು ನೋಡಿ ಪರಿಶೀಲಿಸಿದಾಗ ಬೈಕ್ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ನಂತರ ಅವರು ಪೊಲೀಸರಿಗೆ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು.</p><p>‘ಈಚೆಗೆ ಮಹದೇವಸ್ವಾಮಿ ದಂಪತಿಯ ಮೊದಲನೇ ಮಗಳು ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಡೆತ್ ನೋಟ್ ಪರಿಶೀಲನೆ ಮಾಡಿದ ಬಳಿಕ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದರು.</p>.ಕೋಟಾದಲ್ಲಿ ಆತ್ಮಹತ್ಯೆ: ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ.ದಲಿತ ಯುವಕನ ಆತ್ಮಹತ್ಯೆ ಪ್ರಕರಣದ ತನಿಖೆಯಾಗಲಿ: ಕೃಷ್ಣಮೂರ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>