<p><strong>ಎಚ್.ಡಿ.ಕೋಟೆ:</strong> ರೈತರ ದಿನ ಮತ್ತು ರೈತರ ಹುತಾತ್ಮ ದಿನವನ್ನು ಸರ್ಕಾರದಿಂದಲೇ ಮಾಡುವ ಕುರಿತು ಕೃಷಿ ಸಚಿವರ ಜೊತೆ ಮಾತನಾಡಲಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.</p>.<p>ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಕ್ರಾಂತಿಕಾರಿ ಕಿಶನ್ ಸೇನೆ ಆಯೋಜಿಸಿದ್ದ 45ನೇ ವರ್ಷದ ರೈತರ ಹುತಾತ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ನಾನೂ ಸಹ ಕೃಷಿ ಕುಟುಂಬದಿಂದ ಬಂದಿದ್ದೇನೆ. ನನ್ನ ತಂದೆಯವರು ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದರು. ಅವರಂತೆ ರೈತರಿಗೆ ಪೂರಕವಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.</p>.<p>ರೈತರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ವರ್ಷದ ಬಜೆಟ್ನಲ್ಲೆ ₹52 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.</p>.<p>ಸರಗೂರು ಭಾಗದಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆ ನೀಗಿಸಲು ಮುಳ್ಳೂರು ಪಡುಕೋಟೆ ಚೆಕ್ಕೋಡ್ನಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಉಪಘಟಕ ತೆರೆಯಲಾಗುತ್ತದೆ. ತಾಲ್ಲೂಕಿನಲ್ಲಿ 220 ವಿದ್ಯುತ್ ಘಟಕ ಸ್ಥಾವರ ಸ್ಥಾಪಿಸಲು 80 ಎಕರೆ ಜಮೀನಿನ ಅವಶ್ಯಕತೆ ಇದೆ ಎಂದರು.</p>.<p>ಗದ್ದಿಗೆ ವೃತ್ತದ ಬಳಿ ಭಾರತೀಯ ಕ್ರಾಂತಿಕಾರಿ ಕಿಶನ್ ಸೇನೆಯು ರೈತರ ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ, ಮಹಿಳೆಯರಿಗೆ ಟೈಲರಿಂಗ್ ತರಬೇತಿ ಕೇಂದ್ರ ಉದ್ಘಾಟಿಸಲಾಯಿತು.</p>.<p>ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ತಾಲ್ಲೂಕು ಅಧ್ಯಕ್ಷ ಬೂದನೂರು ಮಹದೇವ, ರಾಜ್ಯ ಯುವ ಘಟಕ ಅಧ್ಯಕ್ಷ ರಫಿಉಲ್ಲಾ, ಜಿಲ್ಲಾಧ್ಯಕ್ಷ ಗಂಗಾಧರ್, ಶಶಿಕುಮಾರ್, ಗೋವಿಂದ್ ರಾಜ್, ಯಶೋಧಾ, ಈವನ್ ರಾಜ್, ತಸ್ಲೀಮ್, ವೆಂಕಟಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ರೈತರ ದಿನ ಮತ್ತು ರೈತರ ಹುತಾತ್ಮ ದಿನವನ್ನು ಸರ್ಕಾರದಿಂದಲೇ ಮಾಡುವ ಕುರಿತು ಕೃಷಿ ಸಚಿವರ ಜೊತೆ ಮಾತನಾಡಲಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.</p>.<p>ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಕ್ರಾಂತಿಕಾರಿ ಕಿಶನ್ ಸೇನೆ ಆಯೋಜಿಸಿದ್ದ 45ನೇ ವರ್ಷದ ರೈತರ ಹುತಾತ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ನಾನೂ ಸಹ ಕೃಷಿ ಕುಟುಂಬದಿಂದ ಬಂದಿದ್ದೇನೆ. ನನ್ನ ತಂದೆಯವರು ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದರು. ಅವರಂತೆ ರೈತರಿಗೆ ಪೂರಕವಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.</p>.<p>ರೈತರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ವರ್ಷದ ಬಜೆಟ್ನಲ್ಲೆ ₹52 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.</p>.<p>ಸರಗೂರು ಭಾಗದಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆ ನೀಗಿಸಲು ಮುಳ್ಳೂರು ಪಡುಕೋಟೆ ಚೆಕ್ಕೋಡ್ನಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಉಪಘಟಕ ತೆರೆಯಲಾಗುತ್ತದೆ. ತಾಲ್ಲೂಕಿನಲ್ಲಿ 220 ವಿದ್ಯುತ್ ಘಟಕ ಸ್ಥಾವರ ಸ್ಥಾಪಿಸಲು 80 ಎಕರೆ ಜಮೀನಿನ ಅವಶ್ಯಕತೆ ಇದೆ ಎಂದರು.</p>.<p>ಗದ್ದಿಗೆ ವೃತ್ತದ ಬಳಿ ಭಾರತೀಯ ಕ್ರಾಂತಿಕಾರಿ ಕಿಶನ್ ಸೇನೆಯು ರೈತರ ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ, ಮಹಿಳೆಯರಿಗೆ ಟೈಲರಿಂಗ್ ತರಬೇತಿ ಕೇಂದ್ರ ಉದ್ಘಾಟಿಸಲಾಯಿತು.</p>.<p>ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ತಾಲ್ಲೂಕು ಅಧ್ಯಕ್ಷ ಬೂದನೂರು ಮಹದೇವ, ರಾಜ್ಯ ಯುವ ಘಟಕ ಅಧ್ಯಕ್ಷ ರಫಿಉಲ್ಲಾ, ಜಿಲ್ಲಾಧ್ಯಕ್ಷ ಗಂಗಾಧರ್, ಶಶಿಕುಮಾರ್, ಗೋವಿಂದ್ ರಾಜ್, ಯಶೋಧಾ, ಈವನ್ ರಾಜ್, ತಸ್ಲೀಮ್, ವೆಂಕಟಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>