<p><strong>ಮೈಸೂರು:</strong> ‘ಫ್ಯಾಸಿಸಂ ಅನ್ನು ಆರಂಭದಲ್ಲಿಯೇ ಗುರುತಿಸಿ, ಪ್ರತಿರೋಧ ತೋರದಿದ್ದರೆ ಅದು ದೇಶ ಮತ್ತು ಜನರನ್ನು ನಾಶ ಮಾಡುತ್ತದೆ. ಪ್ರಜಾಪ್ರಭುತ್ವಕ್ಕೆ ಮಾದರಿಯಾಗಿದ್ದ ಭಾರತ ಮತ್ತು ಅಮೆರಿಕದಲ್ಲಿ ಕಾಣುತ್ತಿರುವುದು ಇದನ್ನೇ’ ಎಂದು ಪತ್ರಕರ್ತ ಸಿದ್ಧಾರ್ಥ ವರದರಾಜನ್ ಶನಿವಾರ ಇಲ್ಲಿ ಅಭಿಪ್ರಾಯಪಟ್ಟರು. </p><p>ರಂಗಾಯಣದಲ್ಲಿ ನಡೆಯುತ್ತಿರುವ ‘ಬಹುರೂಪಿ ಬಾಬಾಸಾಹೇಬ್’ ರಾಷ್ಟ್ರೀಯ ನಾಟಕೋತ್ಸವದಲ್ಲಿ ‘ರಾಷ್ಟ್ರೀಯ ವಿಚಾರಸಂಕಿರಣ’ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಜರ್ಮನಿ, ಇಟಲಿಗಳಲ್ಲಿ ಏನಾಯಿತು ಎಂಬ ಇತಿಹಾಸ ಕಣ್ಣ ಮುಂದಿದೆ. ಹೀಗಾಗಿ, ಫ್ಯಾಸಿಸಂ ವಿರುದ್ಧದ ಹೋರಾಟವನ್ನು ಮುಂದೂಡುವುದು ಸಲ್ಲದು. ಪ್ರಜಾಪ್ರಭುತ್ವ ನಿರಂಕುಶತ್ವಕ್ಕೆ ಹೊರಳುವ ಮೊದಲೇ ಪ್ರತಿರೋಧ ತೋರದಿದ್ದರೇ ನಾಳೆಗಳು ಕಠಿಣವಾಗಿರುತ್ತವೆ’ ಎಂದರು. </p><p>‘ಫ್ಯಾಸಿಸಂ ಎಂಬುದು ಎಂದಿಗೂ ದೊಡ್ಡ ಘೋಷಣೆಯೊಂದಿಗೆ ಬರುವುದಿಲ್ಲ. ಅಧಿಕಾರ ಹಿಡಿದ ನಂತರ ತನಗೆ ಬೇಕಾದ ಕಾನೂನು ಜಾರಿಗೊಳಿಸುತ್ತದೆ. ಭಾಷೆ, ಧರ್ಮ, ಸಂಸ್ಕೃತಿಯ ಹೆಸರಿನಲ್ಲಿ ಸಾಮಾಜಿಕ ಶ್ರೇಣೀಕರಣವನ್ನು ಜೀವಂತವಾಗಿ ಇರಿಸುತ್ತದೆ’ ಎಂದು ವ್ಯಾಖ್ಯಾನಿಸಿದರು. </p><h2>ಸಾಮಾನ್ಯ ಜನರೇ ಸಂತ್ರಸ್ತರು: </h2><p>‘ರಾಜಕೀಯದಲ್ಲಿ ಹಣಬಲವೇ ಪ್ರಧಾನ. ಭಾರತ ಮತ್ತು ಅಮೆರಿಕದಲ್ಲಿ ಅದನ್ನು ಕಾಣುತ್ತಿದ್ದೇವೆ. ವ್ಯವಹಾರಿಕ, ಹಣಕಾಸು ಹಿತಾಸಕ್ತಿಗಳು ಡೊನಾಲ್ಡ್ ಟ್ರಂಪ್ ಅವರ ಆಡಳಿತದ ನಿರ್ಧಾರ ರೂಪಿಸುತ್ತಿದೆ. ಭಾರತದಲ್ಲೂ ಬಿಜೆಪಿಗೆ ಶೇ 85ರಷ್ಟು ದೇಣಿಗೆ ಹರಿದು ಬಂದಿದೆ. ದೇಣಿಗೆ ಕೊಟ್ಟವರ ಹಿತಾಸಕ್ತಿಗಳೇ ಚುಕ್ಕಾಣಿ ಹಿಡಿದವರಿಗೆ ಮುಖ್ಯವಾಗಿದೆ. ಆದರೆ, ಸಾಮಾನ್ಯ ಜನರು ಸಂತ್ರಸ್ತರಾಗುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು. </p><p>‘ನಾಯಕ ಪ್ರಶ್ನಾತೀತನಾದಾಗ ಪ್ರಜಾಪ್ರಭುತ್ವ ಇಕ್ಕಟ್ಟಿಗೆ ಸಿಲುಕುತ್ತದೆ ಎಂದು ಎಚ್ಚರಿಸಿದ್ದ ಅಂಬೇಡ್ಕರ್ ಅವರು ವ್ಯಕ್ತಿಪೂಜೆ ವಿರೋಧಿಸಿದ್ದರು. ಈಗ ಪ್ರಶ್ನಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ರಂತೆ ಮನುಸ್ಮೃತಿ ಸುಟ್ಟ ಯುವತಿ ವಿರುದ್ಧವೇ ಪ್ರಕರಣ ದಾಖಲಿಸಲಾಗಿದೆ’ ಎಂದರು.</p><p>‘ಜಾಗತಿಕ ಪ್ರಜಾಪ್ರಭುತ್ವಕ್ಕೆ ಎದುರಾಗಿರುವ ಸಮಸ್ಯೆಗಳು’ ಕುರಿತು ಪ್ರೊ.ರವಿ ಭಂಡಾರಿ, ಪ್ರೊ.ಎಂ.ಜೆ.ವಿನೋದ್, ‘ಅಂಬೇಡ್ಕರ್ ಅವರ ಪರಿಕಲ್ಪನೆಯ ಪ್ರಜಾಪ್ರಭುತ್ವ ಒಂದು ಮುಖಾಮುಖಿ’ ಕುರಿತು ಚೆನ್ನೈನ ಚಿಂತಕ ಲಕ್ಷ್ಮಣನ್, ‘ಸಮಕಾಲೀನ ಭಾರತ ಮತ್ತು ಒಳಗೊಳ್ಳುವ ರಾಜಕಾರಣ’ ವಿಷಯದ ಬಗ್ಗೆ ರೇಖಾರಾಜ್, ‘ಜಾಗತಿಕ ಮತ್ತು ಸ್ಥಳೀಯ ಸಾಮಾಜಿಕ ಅಸಮಾನತೆಗಳ ನಿರ್ಮೂಲನೆ’ ವಿಶ್ವಸಂಸ್ಥೆಯ ಕೆ.ಪಿ.ಅಶ್ವಿನಿ, ‘ಫ್ಯಾಸಿಸಂ ವಿರುದ್ಧ ಪ್ರತಿರೋಧದ ಸಂಕೇತವಾದ ಸಂವಿಧಾನ’ ಕುರಿತು ಎಚ್.ವಿ.ವಾಸು ಮಾತನಾಡಿದರು.</p>.<div><blockquote>ಅಂಬೇಡ್ಕರ್ ಅವರನ್ನು ಹೊಗಳುವ ನಾಯಕರು, ಅವರ ಹೋರಾಟದ ಮಾದರಿಯಲ್ಲಿ ನಡೆದವರ ವಿರುದ್ಧವೇ ಪ್ರಕರಣವನ್ನು ದಾಖಲಿಸುವುದು ದ್ವಂದ್ವ ನಿಲುವಲ್ಲವೇ? </blockquote><span class="attribution">ಸಿದ್ಧಾರ್ಥ ವರದರಾಜನ್, ಪತ್ರಕರ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಫ್ಯಾಸಿಸಂ ಅನ್ನು ಆರಂಭದಲ್ಲಿಯೇ ಗುರುತಿಸಿ, ಪ್ರತಿರೋಧ ತೋರದಿದ್ದರೆ ಅದು ದೇಶ ಮತ್ತು ಜನರನ್ನು ನಾಶ ಮಾಡುತ್ತದೆ. ಪ್ರಜಾಪ್ರಭುತ್ವಕ್ಕೆ ಮಾದರಿಯಾಗಿದ್ದ ಭಾರತ ಮತ್ತು ಅಮೆರಿಕದಲ್ಲಿ ಕಾಣುತ್ತಿರುವುದು ಇದನ್ನೇ’ ಎಂದು ಪತ್ರಕರ್ತ ಸಿದ್ಧಾರ್ಥ ವರದರಾಜನ್ ಶನಿವಾರ ಇಲ್ಲಿ ಅಭಿಪ್ರಾಯಪಟ್ಟರು. </p><p>ರಂಗಾಯಣದಲ್ಲಿ ನಡೆಯುತ್ತಿರುವ ‘ಬಹುರೂಪಿ ಬಾಬಾಸಾಹೇಬ್’ ರಾಷ್ಟ್ರೀಯ ನಾಟಕೋತ್ಸವದಲ್ಲಿ ‘ರಾಷ್ಟ್ರೀಯ ವಿಚಾರಸಂಕಿರಣ’ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಜರ್ಮನಿ, ಇಟಲಿಗಳಲ್ಲಿ ಏನಾಯಿತು ಎಂಬ ಇತಿಹಾಸ ಕಣ್ಣ ಮುಂದಿದೆ. ಹೀಗಾಗಿ, ಫ್ಯಾಸಿಸಂ ವಿರುದ್ಧದ ಹೋರಾಟವನ್ನು ಮುಂದೂಡುವುದು ಸಲ್ಲದು. ಪ್ರಜಾಪ್ರಭುತ್ವ ನಿರಂಕುಶತ್ವಕ್ಕೆ ಹೊರಳುವ ಮೊದಲೇ ಪ್ರತಿರೋಧ ತೋರದಿದ್ದರೇ ನಾಳೆಗಳು ಕಠಿಣವಾಗಿರುತ್ತವೆ’ ಎಂದರು. </p><p>‘ಫ್ಯಾಸಿಸಂ ಎಂಬುದು ಎಂದಿಗೂ ದೊಡ್ಡ ಘೋಷಣೆಯೊಂದಿಗೆ ಬರುವುದಿಲ್ಲ. ಅಧಿಕಾರ ಹಿಡಿದ ನಂತರ ತನಗೆ ಬೇಕಾದ ಕಾನೂನು ಜಾರಿಗೊಳಿಸುತ್ತದೆ. ಭಾಷೆ, ಧರ್ಮ, ಸಂಸ್ಕೃತಿಯ ಹೆಸರಿನಲ್ಲಿ ಸಾಮಾಜಿಕ ಶ್ರೇಣೀಕರಣವನ್ನು ಜೀವಂತವಾಗಿ ಇರಿಸುತ್ತದೆ’ ಎಂದು ವ್ಯಾಖ್ಯಾನಿಸಿದರು. </p><h2>ಸಾಮಾನ್ಯ ಜನರೇ ಸಂತ್ರಸ್ತರು: </h2><p>‘ರಾಜಕೀಯದಲ್ಲಿ ಹಣಬಲವೇ ಪ್ರಧಾನ. ಭಾರತ ಮತ್ತು ಅಮೆರಿಕದಲ್ಲಿ ಅದನ್ನು ಕಾಣುತ್ತಿದ್ದೇವೆ. ವ್ಯವಹಾರಿಕ, ಹಣಕಾಸು ಹಿತಾಸಕ್ತಿಗಳು ಡೊನಾಲ್ಡ್ ಟ್ರಂಪ್ ಅವರ ಆಡಳಿತದ ನಿರ್ಧಾರ ರೂಪಿಸುತ್ತಿದೆ. ಭಾರತದಲ್ಲೂ ಬಿಜೆಪಿಗೆ ಶೇ 85ರಷ್ಟು ದೇಣಿಗೆ ಹರಿದು ಬಂದಿದೆ. ದೇಣಿಗೆ ಕೊಟ್ಟವರ ಹಿತಾಸಕ್ತಿಗಳೇ ಚುಕ್ಕಾಣಿ ಹಿಡಿದವರಿಗೆ ಮುಖ್ಯವಾಗಿದೆ. ಆದರೆ, ಸಾಮಾನ್ಯ ಜನರು ಸಂತ್ರಸ್ತರಾಗುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು. </p><p>‘ನಾಯಕ ಪ್ರಶ್ನಾತೀತನಾದಾಗ ಪ್ರಜಾಪ್ರಭುತ್ವ ಇಕ್ಕಟ್ಟಿಗೆ ಸಿಲುಕುತ್ತದೆ ಎಂದು ಎಚ್ಚರಿಸಿದ್ದ ಅಂಬೇಡ್ಕರ್ ಅವರು ವ್ಯಕ್ತಿಪೂಜೆ ವಿರೋಧಿಸಿದ್ದರು. ಈಗ ಪ್ರಶ್ನಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ರಂತೆ ಮನುಸ್ಮೃತಿ ಸುಟ್ಟ ಯುವತಿ ವಿರುದ್ಧವೇ ಪ್ರಕರಣ ದಾಖಲಿಸಲಾಗಿದೆ’ ಎಂದರು.</p><p>‘ಜಾಗತಿಕ ಪ್ರಜಾಪ್ರಭುತ್ವಕ್ಕೆ ಎದುರಾಗಿರುವ ಸಮಸ್ಯೆಗಳು’ ಕುರಿತು ಪ್ರೊ.ರವಿ ಭಂಡಾರಿ, ಪ್ರೊ.ಎಂ.ಜೆ.ವಿನೋದ್, ‘ಅಂಬೇಡ್ಕರ್ ಅವರ ಪರಿಕಲ್ಪನೆಯ ಪ್ರಜಾಪ್ರಭುತ್ವ ಒಂದು ಮುಖಾಮುಖಿ’ ಕುರಿತು ಚೆನ್ನೈನ ಚಿಂತಕ ಲಕ್ಷ್ಮಣನ್, ‘ಸಮಕಾಲೀನ ಭಾರತ ಮತ್ತು ಒಳಗೊಳ್ಳುವ ರಾಜಕಾರಣ’ ವಿಷಯದ ಬಗ್ಗೆ ರೇಖಾರಾಜ್, ‘ಜಾಗತಿಕ ಮತ್ತು ಸ್ಥಳೀಯ ಸಾಮಾಜಿಕ ಅಸಮಾನತೆಗಳ ನಿರ್ಮೂಲನೆ’ ವಿಶ್ವಸಂಸ್ಥೆಯ ಕೆ.ಪಿ.ಅಶ್ವಿನಿ, ‘ಫ್ಯಾಸಿಸಂ ವಿರುದ್ಧ ಪ್ರತಿರೋಧದ ಸಂಕೇತವಾದ ಸಂವಿಧಾನ’ ಕುರಿತು ಎಚ್.ವಿ.ವಾಸು ಮಾತನಾಡಿದರು.</p>.<div><blockquote>ಅಂಬೇಡ್ಕರ್ ಅವರನ್ನು ಹೊಗಳುವ ನಾಯಕರು, ಅವರ ಹೋರಾಟದ ಮಾದರಿಯಲ್ಲಿ ನಡೆದವರ ವಿರುದ್ಧವೇ ಪ್ರಕರಣವನ್ನು ದಾಖಲಿಸುವುದು ದ್ವಂದ್ವ ನಿಲುವಲ್ಲವೇ? </blockquote><span class="attribution">ಸಿದ್ಧಾರ್ಥ ವರದರಾಜನ್, ಪತ್ರಕರ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>