<p><strong>ಮೈಸೂರು</strong>: ಕ್ಯಾಟರಿಂಗ್ ಬಿಲ್ ಬಿಡುಗಡೆ ಮಾಡಲು ₹ 50 ಸಾವಿರ ಲಂಚ ಪಡೆಯುವಾಗ, ಇಲ್ಲಿನ ಮೇಟಗಳ್ಳಿ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಎಫ್ಡಿಎ ಮಹೇಶ ಎಂಬುವರು ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದರು.</p>.<p>ಕೇಂದ್ರದ ಶಿಬಿರಾರ್ಥಿಗಳಿಗೆ ಊಟೋಪಚಾರ ಒದಗಿಸಿದ್ದಕ್ಕೆ ‘ವಿನಾಯಕ ಕ್ಯಾಟರಿಂಗ್’ನ ಮಾಲೀಕ ಶಿವನಾಗ ಎಂಬುವರಿಗೆ ₹ 5.16 ಲಕ್ಷ ಬಿಲ್ ಬಿಡುಗಡೆ ಮಾಡಲಾಗಿತ್ತು. ಆರೋಪಿ ಮಹೇಶ್ ಅವರು, ಬಿಲ್ ಮಾಡಿಸಲು ಶ್ರಮ ವಹಿಸಿದ್ದಕ್ಕೆ ₹ 80 ಸಾವಿರ ಲಂಚ ನೀಡಬೇಕೆಂದು ಕೇಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಶಿವನಾಗ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದಾಗ ಆರೋಪಿ ಸಿಕ್ಕಿಬಿದ್ದಿದ್ದು, ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಎಸ್ಪಿ ವಿ.ಜೆ.ಸಜಿತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿ.ಕೃಷ್ಣಯ್ಯ, ಇನ್ಸ್ಪೆಕ್ಟರ್ಗಳಾದ ಜಯರತ್ನ, ಉಮೇಶ್ ಹಾಗೂ ಸಿಬ್ಬಂದಿ ಗೋಪಿ, ಕಾಂತರಾಜ್, ಪ್ರಕಾಶ್, ಮೋಹನ್ ಗೌಡ, ಶೇಖರ್, ಲೋಕೇಶ್, ಆಶಾ, ವೀಣಾ, ರಮೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕ್ಯಾಟರಿಂಗ್ ಬಿಲ್ ಬಿಡುಗಡೆ ಮಾಡಲು ₹ 50 ಸಾವಿರ ಲಂಚ ಪಡೆಯುವಾಗ, ಇಲ್ಲಿನ ಮೇಟಗಳ್ಳಿ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಎಫ್ಡಿಎ ಮಹೇಶ ಎಂಬುವರು ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದರು.</p>.<p>ಕೇಂದ್ರದ ಶಿಬಿರಾರ್ಥಿಗಳಿಗೆ ಊಟೋಪಚಾರ ಒದಗಿಸಿದ್ದಕ್ಕೆ ‘ವಿನಾಯಕ ಕ್ಯಾಟರಿಂಗ್’ನ ಮಾಲೀಕ ಶಿವನಾಗ ಎಂಬುವರಿಗೆ ₹ 5.16 ಲಕ್ಷ ಬಿಲ್ ಬಿಡುಗಡೆ ಮಾಡಲಾಗಿತ್ತು. ಆರೋಪಿ ಮಹೇಶ್ ಅವರು, ಬಿಲ್ ಮಾಡಿಸಲು ಶ್ರಮ ವಹಿಸಿದ್ದಕ್ಕೆ ₹ 80 ಸಾವಿರ ಲಂಚ ನೀಡಬೇಕೆಂದು ಕೇಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಶಿವನಾಗ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದಾಗ ಆರೋಪಿ ಸಿಕ್ಕಿಬಿದ್ದಿದ್ದು, ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಎಸ್ಪಿ ವಿ.ಜೆ.ಸಜಿತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿ.ಕೃಷ್ಣಯ್ಯ, ಇನ್ಸ್ಪೆಕ್ಟರ್ಗಳಾದ ಜಯರತ್ನ, ಉಮೇಶ್ ಹಾಗೂ ಸಿಬ್ಬಂದಿ ಗೋಪಿ, ಕಾಂತರಾಜ್, ಪ್ರಕಾಶ್, ಮೋಹನ್ ಗೌಡ, ಶೇಖರ್, ಲೋಕೇಶ್, ಆಶಾ, ವೀಣಾ, ರಮೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>