<p><strong>ಮೈಸೂರು</strong>: ಹೆಣ್ಣು ಭ್ರೂಣಹತ್ಯೆ ಜಾಲ ಪ್ರಕರಣ ಬೆಳಕಿಗೆ ಬಂದ ಬಳಿಕ ನಗರದಲ್ಲಿ ಈ ಕುರಿತು ಈವರೆಗೆ ಯಾವುದೇ ದೂರು ಅಥವಾ ಪ್ರಕರಣ ದಾಖಲಾಗಿಲ್ಲ. ‘ಸ್ಥಳೀಯ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುವ ಅವಕಾಶವಿದೆ. ಆದರೆ ಪ್ರಯತ್ನ ಇನ್ನೂ ನಡೆದಿಲ್ಲ’ ಎಂಬ ಅಸಮಾಧಾನ ಸಾರ್ವಜನಿಕರಲ್ಲಿ ಮೂಡಿದೆ.</p>.<p>‘ಭ್ರೂಣಹತ್ಯೆ ಪ್ರಕರಣಗಳು ಆರೋಗ್ಯ ಇಲಾಖೆಯಲ್ಲಿರುವವರಿಗೆ ಗೊತ್ತಿಲ್ಲದ ವಿಚಾರವೇನಲ್ಲ. ಮೈಸೂರಿನ ಇನ್ನೂ ಕೆಲವು ಆಸ್ಪತ್ರೆಗಳಲ್ಲಿ ಭ್ರೂಣಹತ್ಯೆ ಪ್ರಕರಣಗಳು ನಡೆದಿವೆ. ಇದು ಗೊತ್ತಿದ್ದೂ ಇಲಾಖೆ ಸುಮ್ಮನಿದೆ’ ಎಂಬ ಆರೋಪವೂ ಕೇಳಿಬಂದಿದೆ.</p>.<p>ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಅಲ್ಲಿನ ಅಧಿಕಾರಿಗಳೇ ತನಿಖೆ ನಡೆಸುತ್ತಿದ್ದಾರೆ. ಮೈಸೂರು, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈ ಜಾಲ ಹಬ್ಬಿರುವ ಕಾರಣ ಏಕೀಕೃತ ವ್ಯವಸ್ಥೆ ಅಡಿ ತನಿಖೆಯನ್ನು ನಿರ್ವಹಿಸಲಾಗುತ್ತಿದೆ.</p>.<p>‘ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಸ್ಥಳೀಯವಾಗಿ ದೂರು ದಾಖಲಾಗದ ಹೊರತು ನಾವು ತನಿಖೆ ಆರಂಭಿಸಲು ಆಗದು. ಈ ಹಿಂದೆಯೂ ಈ ವಿಚಾರವಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಭ್ರೂಣಹತ್ಯೆ ಬಹಳ ಗುಟ್ಟಾಗಿ ನಡೆಯುತ್ತಿತ್ತು. ಆರೋಗ್ಯ ಇಲಾಖೆಗೆ ಸಾರ್ವಜನಿಕರಿಂದ ಲಿಖಿತವಾಗಿ ದೂರು ಬಂದಿರಲಿಲ್ಲ. ಮಾಧ್ಯಮಗಳ ವರದಿ ಆಧರಿಸಿ ಆರೋಪಿಯ ಆಸ್ಪತ್ರೆಗೆ ತೆರಳಿ ನೋಟಿಸ್ ಅಂಟಿಸಿದ್ದೆವು. ಇದೀಗ ಹಿರಿಯ ಅಧಿಕಾರಿಗಳೇ ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ’ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಹೆಣ್ಣು ಭ್ರೂಣಹತ್ಯೆ ಜಾಲ ಪ್ರಕರಣ ಬೆಳಕಿಗೆ ಬಂದ ಬಳಿಕ ನಗರದಲ್ಲಿ ಈ ಕುರಿತು ಈವರೆಗೆ ಯಾವುದೇ ದೂರು ಅಥವಾ ಪ್ರಕರಣ ದಾಖಲಾಗಿಲ್ಲ. ‘ಸ್ಥಳೀಯ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುವ ಅವಕಾಶವಿದೆ. ಆದರೆ ಪ್ರಯತ್ನ ಇನ್ನೂ ನಡೆದಿಲ್ಲ’ ಎಂಬ ಅಸಮಾಧಾನ ಸಾರ್ವಜನಿಕರಲ್ಲಿ ಮೂಡಿದೆ.</p>.<p>‘ಭ್ರೂಣಹತ್ಯೆ ಪ್ರಕರಣಗಳು ಆರೋಗ್ಯ ಇಲಾಖೆಯಲ್ಲಿರುವವರಿಗೆ ಗೊತ್ತಿಲ್ಲದ ವಿಚಾರವೇನಲ್ಲ. ಮೈಸೂರಿನ ಇನ್ನೂ ಕೆಲವು ಆಸ್ಪತ್ರೆಗಳಲ್ಲಿ ಭ್ರೂಣಹತ್ಯೆ ಪ್ರಕರಣಗಳು ನಡೆದಿವೆ. ಇದು ಗೊತ್ತಿದ್ದೂ ಇಲಾಖೆ ಸುಮ್ಮನಿದೆ’ ಎಂಬ ಆರೋಪವೂ ಕೇಳಿಬಂದಿದೆ.</p>.<p>ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಅಲ್ಲಿನ ಅಧಿಕಾರಿಗಳೇ ತನಿಖೆ ನಡೆಸುತ್ತಿದ್ದಾರೆ. ಮೈಸೂರು, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈ ಜಾಲ ಹಬ್ಬಿರುವ ಕಾರಣ ಏಕೀಕೃತ ವ್ಯವಸ್ಥೆ ಅಡಿ ತನಿಖೆಯನ್ನು ನಿರ್ವಹಿಸಲಾಗುತ್ತಿದೆ.</p>.<p>‘ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಸ್ಥಳೀಯವಾಗಿ ದೂರು ದಾಖಲಾಗದ ಹೊರತು ನಾವು ತನಿಖೆ ಆರಂಭಿಸಲು ಆಗದು. ಈ ಹಿಂದೆಯೂ ಈ ವಿಚಾರವಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಭ್ರೂಣಹತ್ಯೆ ಬಹಳ ಗುಟ್ಟಾಗಿ ನಡೆಯುತ್ತಿತ್ತು. ಆರೋಗ್ಯ ಇಲಾಖೆಗೆ ಸಾರ್ವಜನಿಕರಿಂದ ಲಿಖಿತವಾಗಿ ದೂರು ಬಂದಿರಲಿಲ್ಲ. ಮಾಧ್ಯಮಗಳ ವರದಿ ಆಧರಿಸಿ ಆರೋಪಿಯ ಆಸ್ಪತ್ರೆಗೆ ತೆರಳಿ ನೋಟಿಸ್ ಅಂಟಿಸಿದ್ದೆವು. ಇದೀಗ ಹಿರಿಯ ಅಧಿಕಾರಿಗಳೇ ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ’ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>