<p><strong>ಬೆಟ್ಟದಪುರ</strong>: ಸಮೀಪದ ಬೆಟ್ಟದತುಂಗ ಕೆಳಗಿನಕೊಪ್ಪಲು ಗ್ರಾಮದಲ್ಲಿ ಹರೀಶ್ ಮತ್ತು ಯೋಗೇಶ್ ಸಹೋದರರಿಗೆ ಸೇರಿದ ಹುಲ್ಲಿನ ಬಣವೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಹುಲ್ಲಿನ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.</p>.<p>ಬೆಂಕಿ ಅವಘಡದಿಂದ ಇವರಿಗೆ ಸುಮಾರು ₹1.50 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬಣವೆ ಸಮೀಪ ವಾಸದ ಮನೆಗಳು ಇದ್ದುದರಿಂದ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಿಯಂತ್ರಿಸಿದರು.</p>.<p>ಗ್ರಾಮದ ಮುಖಂಡ ಕೃಷ್ಣೇಗೌಡ ಮಾತನಾಡಿ, ‘ವ್ಯವಸಾಯ ಮತ್ತು ಜಾನುವಾರು ಅವಲಂಬಿಸಿ ಜೀವನ ನಡೆಸುತ್ತಿರುವ ಈ ಕುಟುಂಬಕ್ಕೆ ನಷ್ಟವಾಗಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳ ಬೆಟ್ಟದಪುರದಲ್ಲಿ ಅಗ್ನಿಶಾಮಕ ದಳದ ಘಟಕವಿದ್ದರೆ ಹೆಚ್ಚಿನ ಅನಾಹುತ ತಪ್ಪಿಸಬಹುದಿತ್ತು. ಪಿರಿಯಾಪಟ್ಟಣದಿಂದ ವಾಹನ ಆಗಮಿಸುವಷ್ಟರಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಬೆಟ್ಟದಪುರದಲ್ಲಿ ಅಗ್ನಿಶಾಮಕ ದಳದ ಘಟಕ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟದಪುರ</strong>: ಸಮೀಪದ ಬೆಟ್ಟದತುಂಗ ಕೆಳಗಿನಕೊಪ್ಪಲು ಗ್ರಾಮದಲ್ಲಿ ಹರೀಶ್ ಮತ್ತು ಯೋಗೇಶ್ ಸಹೋದರರಿಗೆ ಸೇರಿದ ಹುಲ್ಲಿನ ಬಣವೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಹುಲ್ಲಿನ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.</p>.<p>ಬೆಂಕಿ ಅವಘಡದಿಂದ ಇವರಿಗೆ ಸುಮಾರು ₹1.50 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬಣವೆ ಸಮೀಪ ವಾಸದ ಮನೆಗಳು ಇದ್ದುದರಿಂದ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಿಯಂತ್ರಿಸಿದರು.</p>.<p>ಗ್ರಾಮದ ಮುಖಂಡ ಕೃಷ್ಣೇಗೌಡ ಮಾತನಾಡಿ, ‘ವ್ಯವಸಾಯ ಮತ್ತು ಜಾನುವಾರು ಅವಲಂಬಿಸಿ ಜೀವನ ನಡೆಸುತ್ತಿರುವ ಈ ಕುಟುಂಬಕ್ಕೆ ನಷ್ಟವಾಗಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳ ಬೆಟ್ಟದಪುರದಲ್ಲಿ ಅಗ್ನಿಶಾಮಕ ದಳದ ಘಟಕವಿದ್ದರೆ ಹೆಚ್ಚಿನ ಅನಾಹುತ ತಪ್ಪಿಸಬಹುದಿತ್ತು. ಪಿರಿಯಾಪಟ್ಟಣದಿಂದ ವಾಹನ ಆಗಮಿಸುವಷ್ಟರಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಬೆಟ್ಟದಪುರದಲ್ಲಿ ಅಗ್ನಿಶಾಮಕ ದಳದ ಘಟಕ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>