ಮೈಸೂರು: ಒಲೆ ಹೊತ್ತಿಸಲು ಹೋದಾಗ ಬೆಂಕಿ ಅವಘಡ ಸಂಭವಿಸಿರುವ ಘಟನೆ ಇಲ್ಲಿನ ಕೆ.ಆರ್.ನಗರದ ಈಶ್ವರನಗರ ಬಡಾವಣೆಯಲ್ಲಿ ಗುರುವಾರ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ರೇಣುಕಾ ಸ್ವಾಮಿ(46)ಪತ್ನಿ ಪುಷ್ಪಲತಾ(35) ಹಾಗೂ ಪುತ್ರ ತೇಜಸ್(14) ಎಂಬುವರಿಗೆ ಗಂಭೀರ ಗಾಯಗಳಾಗಿವೆ. ರೇಣುಕಾ ಸ್ವಾಮಿಪೊಲೀಸ್ ಇಲಾಖೆಯಲ್ಲಿ ಮುಖ್ಯಪೇದೆಯಾಗಿದ್ದು, ಇವರ ಪತ್ನಿಬೆಳಿಗ್ಗೆ ನೀರು ಒಲೆ ಹಚ್ಚುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಗಳುಗಳನ್ನು ಮೈಸೂರಿನಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ವಿಭಾಗದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.