<p><strong>ಮೈಸೂರು</strong>: ನಗರವನ್ನು ಆರೋಗ್ಯಕರ, ಸ್ವಚ್ಛ, ಹಸಿರು ಹಾಗೂ ಸುರಕ್ಷಿತ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ 2026ರ ಜನವರಿ 11ರಂದು ಫಿಟ್ ಮೈಸೂರು ವಾಕಥಾನ್ ಆಯೋಜಿಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಎನ್. ಲೋಕನಾಥ್ ತಿಳಿಸಿದರು.</p>.<p>‘ಜಿಎಸ್ಎಸ್ ಸಮೂಹ ಸಂಸ್ಥೆಗಳು, ಮೈಸೂರು ಜಿಮ್ ಅಸೋಸಿಯೇಷನ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 6ಕ್ಕೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಚಾಲನೆ ದೊರೆಯಲಿದ್ದು, 5 ಕಿ.ಮೀ. ನಡಿಗೆ ಇರಲಿದೆ. 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್, ಉಷಾ ಹೆಗಡೆ ಪಾಲ್ಗೊಳ್ಳಲಿದ್ದಾರೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಇದೇ ಸಂದರ್ಭದಲ್ಲಿ ವಾಕಥಾನ್ ಪೋಸ್ಟರ್ಗಳನ್ನು ಬಿಡುಗಡೆ ಹಾಗೂ ಕ್ಯುಆರ್ ಕೋಡ್ ಆಧಾರಿತ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.</p>.<p>ಜಿಎಸ್ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಶ್ರೀಹರಿ ದ್ವಾರಕನಾಥ್, ಜಿಮ್ ಅಸೋಸಿಯೇಷನ್ನ ಹರ್ಷ, ಚಿರಾಗ್ ಆಡ್ಸ್ನ ವಿವೇಕ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ನಗರವನ್ನು ಆರೋಗ್ಯಕರ, ಸ್ವಚ್ಛ, ಹಸಿರು ಹಾಗೂ ಸುರಕ್ಷಿತ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ 2026ರ ಜನವರಿ 11ರಂದು ಫಿಟ್ ಮೈಸೂರು ವಾಕಥಾನ್ ಆಯೋಜಿಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಎನ್. ಲೋಕನಾಥ್ ತಿಳಿಸಿದರು.</p>.<p>‘ಜಿಎಸ್ಎಸ್ ಸಮೂಹ ಸಂಸ್ಥೆಗಳು, ಮೈಸೂರು ಜಿಮ್ ಅಸೋಸಿಯೇಷನ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 6ಕ್ಕೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಚಾಲನೆ ದೊರೆಯಲಿದ್ದು, 5 ಕಿ.ಮೀ. ನಡಿಗೆ ಇರಲಿದೆ. 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್, ಉಷಾ ಹೆಗಡೆ ಪಾಲ್ಗೊಳ್ಳಲಿದ್ದಾರೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಇದೇ ಸಂದರ್ಭದಲ್ಲಿ ವಾಕಥಾನ್ ಪೋಸ್ಟರ್ಗಳನ್ನು ಬಿಡುಗಡೆ ಹಾಗೂ ಕ್ಯುಆರ್ ಕೋಡ್ ಆಧಾರಿತ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.</p>.<p>ಜಿಎಸ್ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಶ್ರೀಹರಿ ದ್ವಾರಕನಾಥ್, ಜಿಮ್ ಅಸೋಸಿಯೇಷನ್ನ ಹರ್ಷ, ಚಿರಾಗ್ ಆಡ್ಸ್ನ ವಿವೇಕ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>