‘ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಸಿದ್ಧತೆ ಮಾಡಿಕೊಂಡಿದ್ದೇವೆ. ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಿದ್ದೇವೆ. ಪ್ರವಾಸಿಗರ ತಪಾಸಣೆಗೆ ಮೊದಲ ಆದ್ಯತೆ ನೀಡಿದ್ದೇವೆ. ಸ್ಯಾನಿಟೈಸರ್ ಹಾಕಲಾಗುವುದು. ಬೇರೆ ಕಡೆಯಿಂದ ಬರುವವರು ಆರೋಗ್ಯ ಕ್ಷಮತೆ ಕುರಿತು ಸ್ವಯಂ ದೃಢೀಕರಣ ಪತ್ರ ನೀಡಬೇಕು’ ಎಂದು ವಿಮಾನ ನಿಲ್ದಾಣ ನಿರ್ದೇಶಕ ಆರ್.ಮಂಜುನಾಥ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.