ದಸರಾ ಉದ್ಘಾಟನೆಗಾಗಿ ಶುಕ್ರವಾರ ಮೈಸೂರಿಗೆ ಬಂದಿರುವ ಅವರು ಮಾಧ್ಯಮದವರ ಜತೆ ಮಾತನಾಡಿ, ‘ನೆರೆ ಹಾವಳಿಗೆ ಒಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ್ದೇನೆ. 5-6 ಜಿಲ್ಲೆಗಳಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಹಾನಿಯಾಗಿದೆ. ನಷ್ಟದ ಬಗ್ಗೆ ಅಂದಾಜು ಮಾಡಿ ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ’ ಎಂದರು.