ಕೆ.ಸಾಲುಂಡಿ ಹಾಗೂ ನಂಜರಾಜಯ್ಯನ ಹುಂಡಿಯ 92 ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡಿತ್ತು, ಇದರಲ್ಲಿ 37 ಜನರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಶುಕ್ರವಾರವೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ, ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಓಆರ್ಎಸ್ ಪ್ಯಾಕೇಟ್ ಹಾಗೂ ಎಲೋಜಿನ್ ಮಾತ್ರೆ ವಿತರಿಸಿದರು. ಕಳೆದ ನಾಲ್ಕೈದು ದಿನದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಿತ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾತ್ರಿ ಪಾಳಿಯಲ್ಲೂ ಸೇವೆ ನೀಡುತ್ತಿದ್ದಾರೆ.