<p><strong>ಮೈಸೂರು:</strong> ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಈಚೆಗೆ ಪ್ರತಿಭಟನೆ ಸಮಯದಲ್ಲಿ ‘ಫ್ರೀ ಕಾಶ್ಮೀರ’ ಫಲಕ ಹಿಡಿದ ಯುವತಿ ಬಿ.ನಳಿನಿ ಪರವಾಗಿ ವಕೀಲರು ವಕಾಲತ್ತು ವಹಿಸಬಾರದು ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸಭೆ ಮಂಗಳವಾರ ನಿರ್ಣಯ ಕೈಗೊಂಡಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಂಘದ ಕಾರ್ಯದರ್ಶಿ ಶಿವಪ್ಪ, ‘ಇದೊಂದು ದೇಶದ್ರೋಹದ ಪ್ರಕರಣ. ರಾಷ್ಟ್ರೀಯ ಏಕತೆಗೆ ಧಕ್ಕೆ ತರುವಂತಹ ಕೆಲಸ. ಇಂತಹ ಕೃತ್ಯದ ಪರವಾಗಿ ವಕಾಲತ್ತು ವಹಿಸುವುದು ಸರಿಯಲ್ಲ. ಹೀಗಾಗಿ, ಬಹುಮತದ ಆಧಾರದ ಮೇಲೆ ಸಭೆಯು ಈ ನಿರ್ಣಯ ಕೈಗೊಂಡಿದೆ’ ಎಂದು ತಿಳಿಸಿದ್ದಾರೆ.</p>.<p>ಇದಕ್ಕೂ ಮುನ್ನ ಕೆಲವು ವಕೀಲರು ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಳ್ಳಬೇಕು ಎಂದು ಸಂಘಕ್ಕೆ ಮನವಿ ಪತ್ರ ಕೊಟ್ಟಿದ್ದರು. ಈ ಹಿಂದೆ ವಕಾಲತ್ತು ವಹಿಸಿದ್ದ ವಕೀಲ ಪೃಥ್ವಿ ಸಹ ವೈಯಕ್ತಿಕ ಕಾರಣಗಳನ್ನು ನೀಡಿ ಪ್ರಕರಣದಿಂದ ಹಿಂದೆ ಸರಿದಿದ್ದರು. </p>.<p>ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವುದಕ್ಕೆ ಪೊಲೀಸರು ಮಂಗಳವಾರ ಆಕ್ಷೇಪಣೆ ಸಲ್ಲಿಸಬೇಕಿದೆ. ಪ್ರಕರಣ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಈಚೆಗೆ ಪ್ರತಿಭಟನೆ ಸಮಯದಲ್ಲಿ ‘ಫ್ರೀ ಕಾಶ್ಮೀರ’ ಫಲಕ ಹಿಡಿದ ಯುವತಿ ಬಿ.ನಳಿನಿ ಪರವಾಗಿ ವಕೀಲರು ವಕಾಲತ್ತು ವಹಿಸಬಾರದು ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸಭೆ ಮಂಗಳವಾರ ನಿರ್ಣಯ ಕೈಗೊಂಡಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಂಘದ ಕಾರ್ಯದರ್ಶಿ ಶಿವಪ್ಪ, ‘ಇದೊಂದು ದೇಶದ್ರೋಹದ ಪ್ರಕರಣ. ರಾಷ್ಟ್ರೀಯ ಏಕತೆಗೆ ಧಕ್ಕೆ ತರುವಂತಹ ಕೆಲಸ. ಇಂತಹ ಕೃತ್ಯದ ಪರವಾಗಿ ವಕಾಲತ್ತು ವಹಿಸುವುದು ಸರಿಯಲ್ಲ. ಹೀಗಾಗಿ, ಬಹುಮತದ ಆಧಾರದ ಮೇಲೆ ಸಭೆಯು ಈ ನಿರ್ಣಯ ಕೈಗೊಂಡಿದೆ’ ಎಂದು ತಿಳಿಸಿದ್ದಾರೆ.</p>.<p>ಇದಕ್ಕೂ ಮುನ್ನ ಕೆಲವು ವಕೀಲರು ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಳ್ಳಬೇಕು ಎಂದು ಸಂಘಕ್ಕೆ ಮನವಿ ಪತ್ರ ಕೊಟ್ಟಿದ್ದರು. ಈ ಹಿಂದೆ ವಕಾಲತ್ತು ವಹಿಸಿದ್ದ ವಕೀಲ ಪೃಥ್ವಿ ಸಹ ವೈಯಕ್ತಿಕ ಕಾರಣಗಳನ್ನು ನೀಡಿ ಪ್ರಕರಣದಿಂದ ಹಿಂದೆ ಸರಿದಿದ್ದರು. </p>.<p>ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವುದಕ್ಕೆ ಪೊಲೀಸರು ಮಂಗಳವಾರ ಆಕ್ಷೇಪಣೆ ಸಲ್ಲಿಸಬೇಕಿದೆ. ಪ್ರಕರಣ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>