<p><strong>ಮೈಸೂರು:</strong> ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಕಾನೂನು ತೊಡಕು ಪರಿಹರಿಸುವಲ್ಲಿ ‘ಉಚಿತ ಕಾನೂನು ನೆರವು ಕೇಂದ್ರ’ ಸಹಕಾರಿ ಎಂದು ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಹೇಳಿದರು.</p>.<p>ನಗರದ ಜಿಲ್ಲಾ ಸೈನಿಕ್ ಭವನದಲ್ಲಿ ಭಾನುವಾರ ರಾಷ್ಟ್ರೀಯ ಕಾನೂನು ಸೇವಾ ಸಮಿತಿಯ ‘ವೀರ್ ಪರಿವಾರ್ ಸಹಾಯತ’ ಯೋಜನೆ-2025ರ ಅಡಿಯಲ್ಲಿ ಕಾನೂನು ಸೇವಾ ಸಮಿತಿಯ ‘ಉಚಿತ ಕಾನೂನು ನೆರವು ಕೇಂದ್ರ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಾನೂನು ಸೇವೆ ಮೂಲಕ ಬೆಂಬಲ ಒದಗಿಸುವುದು ಕಾನೂನು ನೆರವು ಕೇಂದ್ರದ ಮುಖ್ಯ ಉದ್ದೇಶ. ದೇಶಕ್ಕಾಗಿ ತಮ್ಮ ಜೀವನ ಮುಡಿಪಾಗಿಡುವ ಸೈನಿಕರ ಬದುಕಿನಲ್ಲಿ ಯಾವುದೇ ಕಾನೂನು ತೊಡಕು ಉಂಟಾದಲ್ಲಿ ಈ ಕೇಂದ್ರವು ಸಹಕಾರಿಯಾಗಲಿದೆ’ ಎಂದರು.</p>.<p>‘ರಾಜ್ಯದಲ್ಲಿನ 11ನೇ ಕಾನೂನು ನೆರವು ಕೇಂದ್ರ ಇದಾಗಿದೆ. ಸೈನಿಕರ ಕುಟುಂಬಗಳಿಗೆ ಒಂದು ಪ್ರಮುಖ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದ್ದು, ಆರ್ಥಿಕ ಹೊರೆಯಿಲ್ಲದೆ ಕಾನೂನು ಮಾರ್ಗದರ್ಶನ ನೀಡುತ್ತದೆ. ಸೈನಿಕರು, ಮಾಜಿ ಸೈನಿಕರು, ಕುಟುಂಬಸ್ಥರು, ಮಾರ್ಷಲ್ಗಳು ಕಾನೂನು ಸೇವೆಗಳನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.</p>.<p>ಜಿಲ್ಲಾ ನ್ಯಾಯಾಧೀಶ ಎಚ್.ಶಶಿಧರ್ ಶೆಟ್ಟಿ ಮಾತನಾಡಿ, ‘ಸೈನಿಕರಿಗೆ ಸಂಬಂಧಪಟ್ಟ ಪ್ರಕರಣಗಳು ಕೋರ್ಟ್ನಲ್ಲಿದ್ದರೆ ಲೋಕ ಅದಾಲತ್ನಲ್ಲಿ ಯಾವುದೇ ಖರ್ಚಿಲ್ಲದೆ ಶೀಘ್ರವಾಗಿ ಇತ್ಯರ್ಥಗೊಳಿಸಿ, ಬಗೆಹರಿಸಲಾಗುವುದು. ಸಂಬಂಧಿಕರ ಕೇಸ್ಗಳಿದ್ದರೂ ಸಂಪರ್ಕಿಸಬಹುದು. ಈ ಉಚಿತ ಕಾನೂನು ಸೇವಾ ಕೇಂದ್ರದ ಸದುಪಯೋಗ ಎಲ್ಲರು ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಉಷಾರಾಣಿ, ಉಚಿತ ಕಾನೂನು ನೆರವು ಕೇಂದ್ರದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.</p>.<p>ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಎಂ.ಎಸ್.ಲೋಲಾಕ್ಷ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಕೆ.ಅಮರನಾಥ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ.ಜೆ.ಆರ್.ಬಾಲಸುಬ್ರಹ್ಮಣ್ಯಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಕಾನೂನು ತೊಡಕು ಪರಿಹರಿಸುವಲ್ಲಿ ‘ಉಚಿತ ಕಾನೂನು ನೆರವು ಕೇಂದ್ರ’ ಸಹಕಾರಿ ಎಂದು ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಹೇಳಿದರು.</p>.<p>ನಗರದ ಜಿಲ್ಲಾ ಸೈನಿಕ್ ಭವನದಲ್ಲಿ ಭಾನುವಾರ ರಾಷ್ಟ್ರೀಯ ಕಾನೂನು ಸೇವಾ ಸಮಿತಿಯ ‘ವೀರ್ ಪರಿವಾರ್ ಸಹಾಯತ’ ಯೋಜನೆ-2025ರ ಅಡಿಯಲ್ಲಿ ಕಾನೂನು ಸೇವಾ ಸಮಿತಿಯ ‘ಉಚಿತ ಕಾನೂನು ನೆರವು ಕೇಂದ್ರ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಾನೂನು ಸೇವೆ ಮೂಲಕ ಬೆಂಬಲ ಒದಗಿಸುವುದು ಕಾನೂನು ನೆರವು ಕೇಂದ್ರದ ಮುಖ್ಯ ಉದ್ದೇಶ. ದೇಶಕ್ಕಾಗಿ ತಮ್ಮ ಜೀವನ ಮುಡಿಪಾಗಿಡುವ ಸೈನಿಕರ ಬದುಕಿನಲ್ಲಿ ಯಾವುದೇ ಕಾನೂನು ತೊಡಕು ಉಂಟಾದಲ್ಲಿ ಈ ಕೇಂದ್ರವು ಸಹಕಾರಿಯಾಗಲಿದೆ’ ಎಂದರು.</p>.<p>‘ರಾಜ್ಯದಲ್ಲಿನ 11ನೇ ಕಾನೂನು ನೆರವು ಕೇಂದ್ರ ಇದಾಗಿದೆ. ಸೈನಿಕರ ಕುಟುಂಬಗಳಿಗೆ ಒಂದು ಪ್ರಮುಖ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದ್ದು, ಆರ್ಥಿಕ ಹೊರೆಯಿಲ್ಲದೆ ಕಾನೂನು ಮಾರ್ಗದರ್ಶನ ನೀಡುತ್ತದೆ. ಸೈನಿಕರು, ಮಾಜಿ ಸೈನಿಕರು, ಕುಟುಂಬಸ್ಥರು, ಮಾರ್ಷಲ್ಗಳು ಕಾನೂನು ಸೇವೆಗಳನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.</p>.<p>ಜಿಲ್ಲಾ ನ್ಯಾಯಾಧೀಶ ಎಚ್.ಶಶಿಧರ್ ಶೆಟ್ಟಿ ಮಾತನಾಡಿ, ‘ಸೈನಿಕರಿಗೆ ಸಂಬಂಧಪಟ್ಟ ಪ್ರಕರಣಗಳು ಕೋರ್ಟ್ನಲ್ಲಿದ್ದರೆ ಲೋಕ ಅದಾಲತ್ನಲ್ಲಿ ಯಾವುದೇ ಖರ್ಚಿಲ್ಲದೆ ಶೀಘ್ರವಾಗಿ ಇತ್ಯರ್ಥಗೊಳಿಸಿ, ಬಗೆಹರಿಸಲಾಗುವುದು. ಸಂಬಂಧಿಕರ ಕೇಸ್ಗಳಿದ್ದರೂ ಸಂಪರ್ಕಿಸಬಹುದು. ಈ ಉಚಿತ ಕಾನೂನು ಸೇವಾ ಕೇಂದ್ರದ ಸದುಪಯೋಗ ಎಲ್ಲರು ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಉಷಾರಾಣಿ, ಉಚಿತ ಕಾನೂನು ನೆರವು ಕೇಂದ್ರದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.</p>.<p>ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಎಂ.ಎಸ್.ಲೋಲಾಕ್ಷ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಕೆ.ಅಮರನಾಥ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ.ಜೆ.ಆರ್.ಬಾಲಸುಬ್ರಹ್ಮಣ್ಯಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>