<p><strong>ಮೈಸೂರು</strong>: ಕೃಷಿ ವಿಜ್ಞಾನಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ನಿವೃತ್ತ ನಿರ್ದೇಶಕ, ‘ಪದ್ಮಶ್ರೀ’ ಪುರಸ್ಕೃತ ಪ್ರೊ.ಸುಬ್ಬಣ್ಣ ಅಯ್ಯಪ್ಪನ್ (70) ಅವರ ಅಂತ್ಯಕ್ರಿಯೆ ಇಲ್ಲಿನ ಬಂಬೂಬಜಾರ್ ಬಳಿಯ ಜೋಡಿ ತೆಂಗಿನಮರ ಮುಕ್ತಿಧಾಮದಲ್ಲಿ ಭಾನುವಾರ ಸಂಜೆ ನಡೆಯಿತು.</p>.<p>ಕೆ.ಆರ್.ಆಸ್ಪತ್ರೆಯಲ್ಲಿ ಮುಂಜಾನೆ 9ರರ ಸುಮಾರಿಗೆ ಮರಣೋತ್ತರ ಪರೀಕ್ಷೆ ಮುಗಿಸಿ, ವಿಶ್ವೇಶ್ವರನಗರದ ಅಕ್ಕಮಹಾದೇವಿ ರಸ್ತೆಯಲ್ಲಿನ ಮನೆಗೆ (ಸಂಕಲ್ಪ ಬಸಂತ್ ಅಪಾರ್ಟ್ಮೆಂಟ್) ಪಾರ್ಥಿವ ಶರೀರವನ್ನು ತರಲಾಯಿತು. ಅಲ್ಲಿ ಸಾರ್ವಜನಿಕ ದರ್ಶಕ್ಕೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಮಧ್ಯಾಹ್ನ 1.15ಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ತ್ರಿವರ್ಣಧ್ವಜವನ್ನು ಹೊದಿಸಿ, ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು, ನಿವೃತ್ತ ಕುಲಪತಿಗಳು, ಮೀನುಗಾರಿಕೆ ವಿಜ್ಞಾನ ಸಂಸ್ಥೆಗಳ ನಿರ್ದೇಶಕರು, ಕೃಷಿ, ಪಶುಸಂಗೋಪನೆ ಸಂಸ್ಥೆಗಳ ಪ್ರಮುಖರು, ವಿಜ್ಞಾನಿಗಳು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು. ಪತ್ನಿ, ಪುತ್ರಿಯರು, ಅಳಿಯಂದಿರು ಉಪಸ್ಥಿತರಿದ್ದರು.</p>.<p>ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿ ಕಾವೇರಿ ನದಿಯಲ್ಲಿ ಶನಿವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿತ್ತು. ಮೇ 7ರಂದು ಮನೆಯಿಂದ ತೆರಳಿದ್ದ ಅವರು ಕಾಣೆಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅವರ ನಿಗೂಢ ಸಾವು ಕುಟುಂಬದವರು ಹಾಗೂ ಪರಿಚಯದವರಿಗೆ ಅಚ್ಚರಿ–ಆಘಾತ ತಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕೃಷಿ ವಿಜ್ಞಾನಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ನಿವೃತ್ತ ನಿರ್ದೇಶಕ, ‘ಪದ್ಮಶ್ರೀ’ ಪುರಸ್ಕೃತ ಪ್ರೊ.ಸುಬ್ಬಣ್ಣ ಅಯ್ಯಪ್ಪನ್ (70) ಅವರ ಅಂತ್ಯಕ್ರಿಯೆ ಇಲ್ಲಿನ ಬಂಬೂಬಜಾರ್ ಬಳಿಯ ಜೋಡಿ ತೆಂಗಿನಮರ ಮುಕ್ತಿಧಾಮದಲ್ಲಿ ಭಾನುವಾರ ಸಂಜೆ ನಡೆಯಿತು.</p>.<p>ಕೆ.ಆರ್.ಆಸ್ಪತ್ರೆಯಲ್ಲಿ ಮುಂಜಾನೆ 9ರರ ಸುಮಾರಿಗೆ ಮರಣೋತ್ತರ ಪರೀಕ್ಷೆ ಮುಗಿಸಿ, ವಿಶ್ವೇಶ್ವರನಗರದ ಅಕ್ಕಮಹಾದೇವಿ ರಸ್ತೆಯಲ್ಲಿನ ಮನೆಗೆ (ಸಂಕಲ್ಪ ಬಸಂತ್ ಅಪಾರ್ಟ್ಮೆಂಟ್) ಪಾರ್ಥಿವ ಶರೀರವನ್ನು ತರಲಾಯಿತು. ಅಲ್ಲಿ ಸಾರ್ವಜನಿಕ ದರ್ಶಕ್ಕೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಮಧ್ಯಾಹ್ನ 1.15ಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ತ್ರಿವರ್ಣಧ್ವಜವನ್ನು ಹೊದಿಸಿ, ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು, ನಿವೃತ್ತ ಕುಲಪತಿಗಳು, ಮೀನುಗಾರಿಕೆ ವಿಜ್ಞಾನ ಸಂಸ್ಥೆಗಳ ನಿರ್ದೇಶಕರು, ಕೃಷಿ, ಪಶುಸಂಗೋಪನೆ ಸಂಸ್ಥೆಗಳ ಪ್ರಮುಖರು, ವಿಜ್ಞಾನಿಗಳು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು. ಪತ್ನಿ, ಪುತ್ರಿಯರು, ಅಳಿಯಂದಿರು ಉಪಸ್ಥಿತರಿದ್ದರು.</p>.<p>ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿ ಕಾವೇರಿ ನದಿಯಲ್ಲಿ ಶನಿವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿತ್ತು. ಮೇ 7ರಂದು ಮನೆಯಿಂದ ತೆರಳಿದ್ದ ಅವರು ಕಾಣೆಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅವರ ನಿಗೂಢ ಸಾವು ಕುಟುಂಬದವರು ಹಾಗೂ ಪರಿಚಯದವರಿಗೆ ಅಚ್ಚರಿ–ಆಘಾತ ತಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>