<p><strong>ಮೈಸೂರು</strong>: ‘ಕರ್ನಾಟಕ ‘ಉಡ್ತಾ ಪಂಜಾಬ್’ ಆಗಲು ಬಿಡುವುದಿಲ್ಲ. ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಈಗಾಗಲೇ ಕಠಿಣಕ್ರಮ ಕೈಗೊಳ್ಳುತ್ತಿದೆ’ ಎಂದು ಗೃಹ ಸಚಿವ ಡಾ. ಡಾ.ಜಿ.ಪರಮೇಶ್ವರ ಹೇಳಿದರು.</p>.<p>ಶನಿವಾರ ಇಲ್ಲಿನ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ‘ಡ್ರಗ್ಸ್ ವಿರುದ್ಧ ಸರ್ಕಾರ ಈಗಾಗಲೇ ಸಮರ ಸಾರಿದೆ.ಗೊಂಡಿರುವ ಕ್ರಮಗಳ ಕುರಿತು ಬಹಿರಂಗವಾಗಿ ಹೇಳಲಾಗದು’ ಎಂದರು.</p>.<p>‘ಮಹಾರಾಷ್ಟ್ರ, ಗುಜರಾತ್ನಲ್ಲಿ ಡ್ರಗ್ಸ್ ಉತ್ಪಾದನಾ ಘಟಕಗಳು ಪತ್ತೆಯಾಗಿವೆ. ಆದರೆ ಮೈಸೂರಿನಲ್ಲಿ ಯಾವುದೇ ಡ್ರಗ್ಸ್ ಸಿಕ್ಕಿಲ್ಲ. ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮಾಹಿತಿಯಲ್ಲಿ ಡ್ರಗ್ಸ್ ಸಿಕ್ಕಿಲ್ಲ ಎಂದಿದೆ. ಆದರೆ ಪತ್ರಿಕಾ ಹೇಳಿಕೆಯಲ್ಲಿ, ಮೈಸೂರಿನಲ್ಲಿ ₹10 ಕೋಟಿ ಡ್ರಗ್ಸ್ ಸಿಕ್ಕಿದೆ ಎಂದು ಹೇಳಿದೆ. ದಾಳಿ ನಡೆಯುವಾಗ ನಮ್ಮ ಅಧಿಕಾರಿಗಳೂ ಜೊತೆಗಿದ್ದರು. ಯಾಕೆ ಈ ರೀತಿ ದ್ವಂದ್ವ ಹೇಳಿಕೆ ನೀಡಿದೆಯೋ ಗೊತ್ತಿಲ್ಲ’ ಎಂದರು.</p>.<p>‘ಮುನ್ನೆಚ್ಚರಿಕೆ ಕ್ರಮವಾಗಿ, ರಾಜ್ಯದ ಪ್ರತಿ ಕೆಮಿಕಲ್ ಕಾರ್ಖಾನೆಯನ್ನು 15 ದಿನಕ್ಕೊಮ್ಮೆ ತಪಾಸಣೆಗೆ ಸೂಚಿಸಿದ್ದೇನೆ. ಮಾದಕವಸ್ತು ಸಿಕ್ಕರೆ ಸ್ಥಳೀಯ ಠಾಣೆಯ ಪೊಲೀಸರೇ ಹೊಣೆ’ ಎಂದು ಎಚ್ಚರಿಸಿದರು.</p>.<p><strong>ಅಕ್ರಮವಾಸಿಗಳ ವಿರುದ್ಧ ಕ್ರಮ:</strong> ‘ಬಾಂಗ್ಲಾದೇಶಿಯರು ಸೇರಿ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆಗೆ ಸೂಚಿಸಲಾಗಿದೆ. ಮನೆ, ಕಾಫಿ ತೋಟ, ಕಟ್ಟಡ ಸೇರಿ ಎಲ್ಲ ಕಡೆ ಪರಿಶೀಲನೆ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕರ್ನಾಟಕ ‘ಉಡ್ತಾ ಪಂಜಾಬ್’ ಆಗಲು ಬಿಡುವುದಿಲ್ಲ. ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಈಗಾಗಲೇ ಕಠಿಣಕ್ರಮ ಕೈಗೊಳ್ಳುತ್ತಿದೆ’ ಎಂದು ಗೃಹ ಸಚಿವ ಡಾ. ಡಾ.ಜಿ.ಪರಮೇಶ್ವರ ಹೇಳಿದರು.</p>.<p>ಶನಿವಾರ ಇಲ್ಲಿನ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ‘ಡ್ರಗ್ಸ್ ವಿರುದ್ಧ ಸರ್ಕಾರ ಈಗಾಗಲೇ ಸಮರ ಸಾರಿದೆ.ಗೊಂಡಿರುವ ಕ್ರಮಗಳ ಕುರಿತು ಬಹಿರಂಗವಾಗಿ ಹೇಳಲಾಗದು’ ಎಂದರು.</p>.<p>‘ಮಹಾರಾಷ್ಟ್ರ, ಗುಜರಾತ್ನಲ್ಲಿ ಡ್ರಗ್ಸ್ ಉತ್ಪಾದನಾ ಘಟಕಗಳು ಪತ್ತೆಯಾಗಿವೆ. ಆದರೆ ಮೈಸೂರಿನಲ್ಲಿ ಯಾವುದೇ ಡ್ರಗ್ಸ್ ಸಿಕ್ಕಿಲ್ಲ. ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮಾಹಿತಿಯಲ್ಲಿ ಡ್ರಗ್ಸ್ ಸಿಕ್ಕಿಲ್ಲ ಎಂದಿದೆ. ಆದರೆ ಪತ್ರಿಕಾ ಹೇಳಿಕೆಯಲ್ಲಿ, ಮೈಸೂರಿನಲ್ಲಿ ₹10 ಕೋಟಿ ಡ್ರಗ್ಸ್ ಸಿಕ್ಕಿದೆ ಎಂದು ಹೇಳಿದೆ. ದಾಳಿ ನಡೆಯುವಾಗ ನಮ್ಮ ಅಧಿಕಾರಿಗಳೂ ಜೊತೆಗಿದ್ದರು. ಯಾಕೆ ಈ ರೀತಿ ದ್ವಂದ್ವ ಹೇಳಿಕೆ ನೀಡಿದೆಯೋ ಗೊತ್ತಿಲ್ಲ’ ಎಂದರು.</p>.<p>‘ಮುನ್ನೆಚ್ಚರಿಕೆ ಕ್ರಮವಾಗಿ, ರಾಜ್ಯದ ಪ್ರತಿ ಕೆಮಿಕಲ್ ಕಾರ್ಖಾನೆಯನ್ನು 15 ದಿನಕ್ಕೊಮ್ಮೆ ತಪಾಸಣೆಗೆ ಸೂಚಿಸಿದ್ದೇನೆ. ಮಾದಕವಸ್ತು ಸಿಕ್ಕರೆ ಸ್ಥಳೀಯ ಠಾಣೆಯ ಪೊಲೀಸರೇ ಹೊಣೆ’ ಎಂದು ಎಚ್ಚರಿಸಿದರು.</p>.<p><strong>ಅಕ್ರಮವಾಸಿಗಳ ವಿರುದ್ಧ ಕ್ರಮ:</strong> ‘ಬಾಂಗ್ಲಾದೇಶಿಯರು ಸೇರಿ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆಗೆ ಸೂಚಿಸಲಾಗಿದೆ. ಮನೆ, ಕಾಫಿ ತೋಟ, ಕಟ್ಟಡ ಸೇರಿ ಎಲ್ಲ ಕಡೆ ಪರಿಶೀಲನೆ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>