‘ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ದೇಶ ಹಾಗೂ ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸಮಾಲೋಚನೆ ಮಾಡಿದ್ದರು. ದೇಶದ ಹಿತಕ್ಕಾಗಿ ಜೆಡಿಎಸ್ ಎನ್ಡಿಎ ಭಾಗವಾಗಬೇಕೆಂದು ಅವರು ಕೋರಿದ್ದರ ಪರಿಣಾಮವಾಗಿ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸುದೀರ್ಘ ಸಮಾಲೋಚಿಸಿ ನಿರ್ಧರಿಸಿರುವುದು ಒಳ್ಳೆಯ ನಡೆಯಾಗಿದೆ’ ಎಂದಿದ್ದಾರೆ.