<p><strong>ಮೈಸೂರು</strong>: ‘ದೇಶದ ಸಾಂಸ್ಕೃತಿಕ ಕಲೆಗಳಲ್ಲಿ ಕಾವ್ಯ ಮತ್ತು ಗಾಯನವನ್ನು ಒಳಗೊಂಡ ಗಮಕ ಕಲೆಗೆ ವಿಶೇಷ ಸ್ಥಾನಮಾನವಿದ್ದು, ಈ ಕ್ಷೇತ್ರದಲ್ಲಿ ಕೃಷ್ಣಗಿರಿ ರಾಮಚಂದ್ರ ಅವರ ಸಾಧನೆ ಗಣನೀಯ’ ಎಂದು ಸಂಸ್ಕೃತ ವಿದ್ವಾಂಸ ಎಚ್.ವಿ.ನಾಗರಾಜರಾವ್ ಹೇಳಿದರು.</p>.<p>ಮೈಸೂರಿನ ಪರಂಪರೆ ಸಂಸ್ಥೆ ವತಿಯಿಂದ ನಾದಬ್ರಹ್ಮ ಸಂಗೀತ ಸಭಾದಲ್ಲಿ ಮಂಗಳವಾರ ನಡೆದ ರಾಜ್ಯ ಸರ್ಕಾರದಿಂದ ಕುಮಾರವ್ಯಾಸ ಪ್ರಶಸ್ತಿಗೆ ಭಾಜನರಾದ ಗಮಕ ವಾಚಕ ಹಾಗೂ ವ್ಯಾಖ್ಯಾನಕಾರ ಕೃ.ರಾಮಚಂದ್ರ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಮೈಸೂರಿನಲ್ಲಿ ಗಮಕ ಕಲೆಯನ್ನು ದೇಶದಾದ್ಯಂತ ಪಸರಿಸಿದ ಕೀರ್ತಿ ಕೃಷ್ಣಗಿರಿ ಕೃಷ್ಣರಾಯರಿಗೆ ಸಲ್ಲುತ್ತದೆ. ಅವರ ಪುತ್ರರಾಗಿ ರಾಮಚಂದ್ರ ಅವರು ಕೂಡ ಕಲೆಯನ್ನು ಉಳಿಸುವ ಕೈಂಕರ್ಯ ಮಾಡಿದ್ದಾರೆ. ಅವರ ಸಾಂಸ್ಕೃತಿಕ ಕಲಾ ಸೇವೆಗೆ ಕುಮಾರವ್ಯಾಸ ಪ್ರಶಸ್ತಿ ಸಂದಿರುವುದು ಅಭಿನಂದನಾರ್ಹ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಕನ್ನಡ ವಿದ್ವಾಂಸ ಟಿ.ವಿ.ವೆಂಕಟಾಚಲ ಶಾಸ್ತ್ರಿ ಅವರು ಕೃ.ರಾಮಚಂದ್ರ ಅವರೊಂದಿಗೆ ಪತ್ನಿ ವಿದುಷಿ ತುಳಸಿ ರಾಮಚಂದ್ರ ಅವರನ್ನು ಸನ್ಮಾನಿಸಿದರು. ಪರಂಪರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ದೇಶದ ಸಾಂಸ್ಕೃತಿಕ ಕಲೆಗಳಲ್ಲಿ ಕಾವ್ಯ ಮತ್ತು ಗಾಯನವನ್ನು ಒಳಗೊಂಡ ಗಮಕ ಕಲೆಗೆ ವಿಶೇಷ ಸ್ಥಾನಮಾನವಿದ್ದು, ಈ ಕ್ಷೇತ್ರದಲ್ಲಿ ಕೃಷ್ಣಗಿರಿ ರಾಮಚಂದ್ರ ಅವರ ಸಾಧನೆ ಗಣನೀಯ’ ಎಂದು ಸಂಸ್ಕೃತ ವಿದ್ವಾಂಸ ಎಚ್.ವಿ.ನಾಗರಾಜರಾವ್ ಹೇಳಿದರು.</p>.<p>ಮೈಸೂರಿನ ಪರಂಪರೆ ಸಂಸ್ಥೆ ವತಿಯಿಂದ ನಾದಬ್ರಹ್ಮ ಸಂಗೀತ ಸಭಾದಲ್ಲಿ ಮಂಗಳವಾರ ನಡೆದ ರಾಜ್ಯ ಸರ್ಕಾರದಿಂದ ಕುಮಾರವ್ಯಾಸ ಪ್ರಶಸ್ತಿಗೆ ಭಾಜನರಾದ ಗಮಕ ವಾಚಕ ಹಾಗೂ ವ್ಯಾಖ್ಯಾನಕಾರ ಕೃ.ರಾಮಚಂದ್ರ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಮೈಸೂರಿನಲ್ಲಿ ಗಮಕ ಕಲೆಯನ್ನು ದೇಶದಾದ್ಯಂತ ಪಸರಿಸಿದ ಕೀರ್ತಿ ಕೃಷ್ಣಗಿರಿ ಕೃಷ್ಣರಾಯರಿಗೆ ಸಲ್ಲುತ್ತದೆ. ಅವರ ಪುತ್ರರಾಗಿ ರಾಮಚಂದ್ರ ಅವರು ಕೂಡ ಕಲೆಯನ್ನು ಉಳಿಸುವ ಕೈಂಕರ್ಯ ಮಾಡಿದ್ದಾರೆ. ಅವರ ಸಾಂಸ್ಕೃತಿಕ ಕಲಾ ಸೇವೆಗೆ ಕುಮಾರವ್ಯಾಸ ಪ್ರಶಸ್ತಿ ಸಂದಿರುವುದು ಅಭಿನಂದನಾರ್ಹ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಕನ್ನಡ ವಿದ್ವಾಂಸ ಟಿ.ವಿ.ವೆಂಕಟಾಚಲ ಶಾಸ್ತ್ರಿ ಅವರು ಕೃ.ರಾಮಚಂದ್ರ ಅವರೊಂದಿಗೆ ಪತ್ನಿ ವಿದುಷಿ ತುಳಸಿ ರಾಮಚಂದ್ರ ಅವರನ್ನು ಸನ್ಮಾನಿಸಿದರು. ಪರಂಪರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>