ಮೈಸೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆಸಿದ ಶಾಂತಿ ಸಭೆಯಲ್ಲಿ ಧಾರ್ಮಿಕ ಮುಖಂಡರು ಭಾಗವಹಿಸಿದ್ದರು
ಹಬ್ಬದಲ್ಲಿ ಮೈಸೂರಿನಲ್ಲಿ ಗಲಭೆ ನಡೆದಿಲ್ಲ. ಆ ಪರಂಪರೆ ಮುಂದುವರಿಸುತ್ತೇವೆ. ಸಾರ್ವಜನಿಕ ಗಣೇಶೋತ್ಸವ ಮೆರವಣಿಗೆಯಲ್ಲಿ ಚರ್ಚ್ ಮಸೀದಿ ಮುಖಂಡರೂ ನಮ್ಮನ್ನು ಸ್ವಾಗತಿಸುತ್ತಾರೆ
ಸಿ.ಕೆ.ರುದ್ರಮೂರ್ತಿ ಮಾಧವ ಕೃಪಾ ಗಣೇಶೋತ್ಸವ ಸಮಿತಿ ಸಂಚಾಲಕ
ಸಾಮಾಜಿಕ ಮಾಧ್ಯಮಗಳ ಮೇಲೆ ಹದ್ದಿನ ಕಣ್ಣು
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ಪೋಸ್ಟ್ಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಟ್ಟಿದೆ. ಈಗಾಗಲೇ ಅದಕ್ಕಾಗಿ ಪ್ರತ್ಯೇಕ ಸಿಬ್ಬಂದಿಯಿದ್ದು ಹಬ್ಬದ ಸಮಯದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುವ ಸೂಕ್ಷ್ಮ ವಿಚಾರಗಳ ಬಗ್ಗೆ ಗಮನಹರಿಸಲಿದ್ದಾರೆ. ಅನ್ಯ ಧರ್ಮೀಯರ ಭಾವನೆಗೆ ಧಕ್ಕೆ ತರುವ ಪೋಸ್ಟ್ಗಳು ಕಂಡುಬಂದರೆ ಅವರ ವಿರುದ್ಧ ಇಲಾಖೆ ಕ್ರಮವಹಿಸಲಿದೆ.