‘ನಾನು ಈ ಹಿಂದೆ ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆಯಾಗಿ ರಾಜ್ಯಪಾಲರಿಂದ ನಾಮನಿರ್ದೇಶನಗೊಂಡಿದ್ದೆ. ಈಗಿನ ಸರ್ಕಾರವು ಕ್ರೀಡಾ ಮತ್ತು ಶೈಕ್ಷಣಿಕ ಶೈಕ್ಷಣಿಕ ಕ್ಷೇತ್ರದ ಸಾಧನೆ ಆಧರಿಸಿ ಕೆಎಸ್ಒಯು ವ್ಯವಸ್ಥಾಪನ ಮಂಡಳಿ ಸದಸ್ಯರಾಗಿ ನಾಮನಿರ್ದೇಶನ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವಂತೆ ನಾನು ಬಿಜೆಪಿಯವಳಲ್ಲ. ನನ್ನ ತೇಜೋವಧೆ ನಿಲ್ಲಿಸಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ತಿಳಿಸಿದ್ದಾರೆ.