<p><strong>ಮೈಸೂರು:</strong> ನಗರ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ‘ಸ್ಟಾಪ್ ವೋಟ್ ಚೋರಿ’ ಅಭಿಯಾನದ ಭಾಗವಾಗಿ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ಗಳಿಗೆ ‘ಸ್ಟಾಪ್ ಮತ ಕಳ್ಳತನ’ ಎಂಬ ಬರಹವುಳ್ಳ ಪೋಸ್ಟರ್ ಅಂಟಿಸಿದರು.</p>.<p>ಮಂಗಳವಾರ ಬೆಳಿಗ್ಗೆ ಬಸ್ ನಿಲ್ದಾಣದ ಮುಂಭಾಗ ಜಮಾಯಿಸಿದ ಸದಸ್ಯರು, ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು. ಹತ್ತಿರದಲ್ಲಿರುವ ಬಸ್, ಆಟೊಗಳಿಗೆ ಸ್ಟಿಕ್ಕರ್ ಅಂಟಿಸಿದರು.</p>.<p>ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಮಾತನಾಡಿ, ‘ಬಿಜೆಪಿಯು ದೇಶದಲ್ಲಿ ಮತ ಕಳ್ಳತನ ಮಾಡಿ 18 ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿಯ ತಂತ್ರ ಬಳಸಿ ಗೆದ್ದಿದ್ದಾರೆ. ಈ ಬಗ್ಗೆ ಮಹಾದೇವಪುರ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನದ ದಾಖಲೆಗಳನ್ನು ರಾಹುಲ್ ಗಾಂಧಿ ನೀಡಿದರೂ, ಅಫಿಡಾವಿತ್ ಮೂಲಕ ಸಲ್ಲಿಸಬೇಕು ಎಂದು ಚುನಾವಣಾ ಆಯೋಗ ತಿಳಿಸಿರುವುದು ದೇಶದ ದುರಂತ’ ಎಂದರು.</p>.<p>‘ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಬಿಜೆಪಿ ಪಕ್ಷದ ಏಜೆಂಟ್ರಂತೆ ವರ್ತಿಸುತ್ತಿದ್ದಾರೆ. ರಾಹುಲ್ ಗಾಂಧಿ ನೀಡಿದ ದೂರನ್ನು ಸ್ವೀಕರಿಸಿ ಸ್ವಯಂ ಪ್ರೇರಿತ ತನಿಖೆ ನಡೆಸಬೇಕಾದವರು, ಅನಗತ್ಯ ದಾಖಲೆ ಕೇಳುತ್ತಿದ್ದಾರೆ. ಜ್ಞಾನೇಶ್ ಕುಮಾರ್ ಅವರನ್ನು ಕಿತ್ತೊಗೆಯಬೇಕು’ ಎಂದು ಆಗ್ರಹಿಸಿದರು.</p>.<p>‘ಬೆಂಗಳೂರಿನ ಸಮಾವೇಶದಲ್ಲಿ ದಾಖಲೆ ಬಿಡುಗಡೆ ಮಾಡಿ ದೂರು ನೀಡಿದರೂ, ಚುನಾವಣಾ ಆಯೋಗ ಕ್ರಮವಹಿಸಿಲ್ಲ. ಈ ಬಗ್ಗೆ ರಾಹುಲ್ ಗಾಂಧಿ ಬಿಹಾರದಲ್ಲಿ ಯಾತ್ರೆ ಆರಂಭಿಸಿದ್ದು, ಅದನ್ನು ದೇಶದಾದ್ಯಂತ ಮುಂದುವರಿಸಬೇಕು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಸುಮೊಟೊ ದಾಖಲಿಸಿಕೊಂಡು ತನಿಖೆಗೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಮಹಾರಾಷ್ಟ್ರದ ಚುನಾವಣೆಯಲ್ಲಿ 5 ರಿಂದ 6 ಗಂಟೆ ಸಮಯದಲ್ಲಿ 90 ಸಾವಿರ ಮತದಾನ ಆಗುತ್ತದೆ. ಸಮೀಕ್ಷೆಗಳು ಕಾಂಗ್ರೆಸ್ ಗೆಲ್ಲುತ್ತದೆ ಎಂದು ತಿಳಿಸಿದರೂ, ಬಿಜೆಪಿ ಇವಿಯಂ ಕಳ್ಳತನ ಮಾಡಿ ಗೆಲುವು ಸಾಧಿಸಿದೆ. ಇದು ಜನಾಂದೋಲನವಾಗಿ ಮಾರ್ಪಡಬೇಕಿದೆ. ಇಲ್ಲದಿದ್ದರೆ ಬಿಜೆಪಿಯ ಸರ್ವಾಧಿಕಾರ ಮುಂದುವರೆಯುತ್ತದೆ’ ಎಂದರು.</p>.<p>‘ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು, ಕೊಡಗು ಕ್ಷೇತ್ರದಲ್ಲಿ ಬಿಜೆಪಿಯು 292 ಬೂತ್ನಲ್ಲಿ 1.45 ಲಕ್ಷ ಮತ ಕಳ್ಳತನ ಮಾಡಿದೆ. ಚಾಮರಾಜ, ಕೃಷ್ಣರಾಜ, ಮಡಿಕೇರಿ, ವಿರಾಜಪೇಟೆಯಲ್ಲಿ ಮತ ಕಳ್ಳತನವಾಗಿದ್ದು, 3 ತಿಂಗಳಲ್ಲಿ ಸಂಪೂರ್ಣ ಮಾಹಿತಿ ಜನರ ಮುಂದಿಡುತ್ತೇವೆ’ ಎಂದು ಹೇಳಿದರು.</p>.<p>ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ರಾರ್, ಪದಾಧಿಕಾರಿಗಳಾದ ಮಲ್ಲೇಶ್, ಹೇಮಂತ್, ಶಶಿಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ‘ಸ್ಟಾಪ್ ವೋಟ್ ಚೋರಿ’ ಅಭಿಯಾನದ ಭಾಗವಾಗಿ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ಗಳಿಗೆ ‘ಸ್ಟಾಪ್ ಮತ ಕಳ್ಳತನ’ ಎಂಬ ಬರಹವುಳ್ಳ ಪೋಸ್ಟರ್ ಅಂಟಿಸಿದರು.</p>.<p>ಮಂಗಳವಾರ ಬೆಳಿಗ್ಗೆ ಬಸ್ ನಿಲ್ದಾಣದ ಮುಂಭಾಗ ಜಮಾಯಿಸಿದ ಸದಸ್ಯರು, ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು. ಹತ್ತಿರದಲ್ಲಿರುವ ಬಸ್, ಆಟೊಗಳಿಗೆ ಸ್ಟಿಕ್ಕರ್ ಅಂಟಿಸಿದರು.</p>.<p>ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಮಾತನಾಡಿ, ‘ಬಿಜೆಪಿಯು ದೇಶದಲ್ಲಿ ಮತ ಕಳ್ಳತನ ಮಾಡಿ 18 ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿಯ ತಂತ್ರ ಬಳಸಿ ಗೆದ್ದಿದ್ದಾರೆ. ಈ ಬಗ್ಗೆ ಮಹಾದೇವಪುರ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನದ ದಾಖಲೆಗಳನ್ನು ರಾಹುಲ್ ಗಾಂಧಿ ನೀಡಿದರೂ, ಅಫಿಡಾವಿತ್ ಮೂಲಕ ಸಲ್ಲಿಸಬೇಕು ಎಂದು ಚುನಾವಣಾ ಆಯೋಗ ತಿಳಿಸಿರುವುದು ದೇಶದ ದುರಂತ’ ಎಂದರು.</p>.<p>‘ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಬಿಜೆಪಿ ಪಕ್ಷದ ಏಜೆಂಟ್ರಂತೆ ವರ್ತಿಸುತ್ತಿದ್ದಾರೆ. ರಾಹುಲ್ ಗಾಂಧಿ ನೀಡಿದ ದೂರನ್ನು ಸ್ವೀಕರಿಸಿ ಸ್ವಯಂ ಪ್ರೇರಿತ ತನಿಖೆ ನಡೆಸಬೇಕಾದವರು, ಅನಗತ್ಯ ದಾಖಲೆ ಕೇಳುತ್ತಿದ್ದಾರೆ. ಜ್ಞಾನೇಶ್ ಕುಮಾರ್ ಅವರನ್ನು ಕಿತ್ತೊಗೆಯಬೇಕು’ ಎಂದು ಆಗ್ರಹಿಸಿದರು.</p>.<p>‘ಬೆಂಗಳೂರಿನ ಸಮಾವೇಶದಲ್ಲಿ ದಾಖಲೆ ಬಿಡುಗಡೆ ಮಾಡಿ ದೂರು ನೀಡಿದರೂ, ಚುನಾವಣಾ ಆಯೋಗ ಕ್ರಮವಹಿಸಿಲ್ಲ. ಈ ಬಗ್ಗೆ ರಾಹುಲ್ ಗಾಂಧಿ ಬಿಹಾರದಲ್ಲಿ ಯಾತ್ರೆ ಆರಂಭಿಸಿದ್ದು, ಅದನ್ನು ದೇಶದಾದ್ಯಂತ ಮುಂದುವರಿಸಬೇಕು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಸುಮೊಟೊ ದಾಖಲಿಸಿಕೊಂಡು ತನಿಖೆಗೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಮಹಾರಾಷ್ಟ್ರದ ಚುನಾವಣೆಯಲ್ಲಿ 5 ರಿಂದ 6 ಗಂಟೆ ಸಮಯದಲ್ಲಿ 90 ಸಾವಿರ ಮತದಾನ ಆಗುತ್ತದೆ. ಸಮೀಕ್ಷೆಗಳು ಕಾಂಗ್ರೆಸ್ ಗೆಲ್ಲುತ್ತದೆ ಎಂದು ತಿಳಿಸಿದರೂ, ಬಿಜೆಪಿ ಇವಿಯಂ ಕಳ್ಳತನ ಮಾಡಿ ಗೆಲುವು ಸಾಧಿಸಿದೆ. ಇದು ಜನಾಂದೋಲನವಾಗಿ ಮಾರ್ಪಡಬೇಕಿದೆ. ಇಲ್ಲದಿದ್ದರೆ ಬಿಜೆಪಿಯ ಸರ್ವಾಧಿಕಾರ ಮುಂದುವರೆಯುತ್ತದೆ’ ಎಂದರು.</p>.<p>‘ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು, ಕೊಡಗು ಕ್ಷೇತ್ರದಲ್ಲಿ ಬಿಜೆಪಿಯು 292 ಬೂತ್ನಲ್ಲಿ 1.45 ಲಕ್ಷ ಮತ ಕಳ್ಳತನ ಮಾಡಿದೆ. ಚಾಮರಾಜ, ಕೃಷ್ಣರಾಜ, ಮಡಿಕೇರಿ, ವಿರಾಜಪೇಟೆಯಲ್ಲಿ ಮತ ಕಳ್ಳತನವಾಗಿದ್ದು, 3 ತಿಂಗಳಲ್ಲಿ ಸಂಪೂರ್ಣ ಮಾಹಿತಿ ಜನರ ಮುಂದಿಡುತ್ತೇವೆ’ ಎಂದು ಹೇಳಿದರು.</p>.<p>ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ರಾರ್, ಪದಾಧಿಕಾರಿಗಳಾದ ಮಲ್ಲೇಶ್, ಹೇಮಂತ್, ಶಶಿಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>