ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ: ಭಗೀರಥ ಉಪ್ಪಾರ ಸಂಘ

Published 17 ಮೇ 2023, 13:29 IST
Last Updated 17 ಮೇ 2023, 13:29 IST
ಅಕ್ಷರ ಗಾತ್ರ

ಮೈಸೂರು: ‘ಚಾಮರಾಜನಗರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಎಸ್.ಯೋಗೀಶ ಉಪ್ಪಾರ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಾದ್ಯಂತ ಸುಮಾರು 30 ಲಕ್ಷ ಮತದಾರರಿರುವ ಉಪ್ಪಾರ ಸಮುದಾಯವು ಸಾಮಾಜಿಕವಾಗಿ ತೀರಾ ಹಿಂದುಳಿದಿದೆ. ಸಮಾಜದ ಏಕೈಕ ಶಾಸಕರಾಗಿ ಪುಟ್ಟರಂಗಶೆಟ್ಟಿ ಆಯ್ಕೆಯಾಗಿದ್ದು, ಸೂಕ್ತ ಸ್ಥಾನಮಾನ ನೀಡಬೇಕು’ ಎಂದು ಆಗ್ರಹಿಸಿದರು.

‘ಬಿಜೆಪಿ ಮತ್ತು ಜೆಡಿಎಸ್ ಉಪ್ಪಾರ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ನೀಡಲಿಲ್ಲ. ನಾವೆಲ್ಲರೂ ಒಮ್ಮತದಿಂದ ಸಿದ್ದರಾಮಯ್ಯ ಅವರ ನೇತೃತ್ವ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇವೆ. ಸಮಾಜದ ಮುಂಚೂಣಿ ನಾಯಕರನ್ನು ಗುರುತಿಸಿ ವಿಧಾನ ಪರಿಷತ್ ಸದಸ್ಯ ಸ್ಥಾನ ಹಾಗೂ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಬೇಕು’ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯಾಧ್ಯಕ್ಷ ಕನಕನಗರ ಮಹದೇವು, ಉಪಾಧ್ಯಕ್ಷ ಕರಳಾಪುರ ನಾಗರಾಜು, ಗೌರವ ಸಲಹೆಗಾರ ಚಂದ್ರಪ್ಪ, ನಿರ್ದೇಶಕರಾದ ಕುಡ್ಲಾಪುರ ಎಂ.ರಾಜು, ಮಲ್ಲೇಶ್, ಮುಖಂಡ ಸೋಮಶಂಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT