‘ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ನಂದಿ ಧ್ವಜ ಕಂಬ ತಯಾರಿಕೆಯಲ್ಲಿ ಕಳೆದ 55 ವರ್ಷಗಳಿಂದ ತೊಡಗಿಸಿಕೊಂಡಿದ್ದರೂ ಯೋಗೇಶ್ ಅವರ ಸೇವೆಯನ್ನು ಸರ್ಕಾರ ಪರಿಗಣಿಸಿಲ್ಲ. ಅರ್ಹ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಬೇಕು’ ಎಂದು ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.