<p><strong>ಮೈಸೂರು:</strong> ‘ದಸರಾ ನಂದಿ ಧ್ವಜ ಕಂಬ ತಯಾರಿಸುವ ಯೋಗೇಶ್ ಶಿಲ್ಪಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು’ ಎಂದು ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ರಾಜ್ಯಾಧ್ಯಕ್ಷ ಗಿರೀಶ್ ಶಿವಾರ್ಚಕ ಆಗ್ರಹಿಸಿದರು.</p>.<p>‘ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ನಂದಿ ಧ್ವಜ ಕಂಬ ತಯಾರಿಕೆಯಲ್ಲಿ ಕಳೆದ 55 ವರ್ಷಗಳಿಂದ ತೊಡಗಿಸಿಕೊಂಡಿದ್ದರೂ ಯೋಗೇಶ್ ಅವರ ಸೇವೆಯನ್ನು ಸರ್ಕಾರ ಪರಿಗಣಿಸಿಲ್ಲ. ಅರ್ಹ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಬೇಕು’ ಎಂದು ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.</p>.<p>‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಖಾಸಗಿ ದಸರಾ ಆಚರಿಸಿ ಪರಂಪರೆಯ ಮುಂದುವರಿಕೆಗೆ ಕಾರಣರಾದ ಕನ್ನಡ ಕ್ರಾಂತಿದಳ ಸಂಸ್ಥಾಪಕ ನಾ.ನಾಗಲಿಂಗಸ್ವಾಮಿ ಕುಟುಂಬವನ್ನು ಎಲ್ಲ ದಸರೆಯಲ್ಲೂಜಿಲ್ಲಾಡಳಿತವು ವಿಶೇಷವಾಗಿ ಆಹ್ವಾನ ನೀಡಬೇಕು’ ಎಂದೂ ಅವರು ಒತ್ತಾಯಿಸಿದರು.</p>.<p>‘ಕೋವಿಡ್ ಸಂದರ್ಭದಲ್ಲಿ ಕಲಾವಿದರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ. ಭರವಸೆಯನ್ನಷ್ಟೇ ನೀಡಿದೆ. ಪ್ರಶಸ್ತಿ ಆಯ್ಕೆಯಲ್ಲೂ ಅರ್ಹರನ್ನು ಪರಿಗಣಿಸುತ್ತಿಲ್ಲ’ ಎಂದು ಸಂಘಟನೆಯ ಮುಖಂಡ ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.</p>.<p>ಸಂಘಟನೆಯ ಪ್ರಕಾಶ್ಗೌಡ, ಲೋಕೇಶ್, ಚೇತನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ದಸರಾ ನಂದಿ ಧ್ವಜ ಕಂಬ ತಯಾರಿಸುವ ಯೋಗೇಶ್ ಶಿಲ್ಪಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು’ ಎಂದು ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ರಾಜ್ಯಾಧ್ಯಕ್ಷ ಗಿರೀಶ್ ಶಿವಾರ್ಚಕ ಆಗ್ರಹಿಸಿದರು.</p>.<p>‘ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ನಂದಿ ಧ್ವಜ ಕಂಬ ತಯಾರಿಕೆಯಲ್ಲಿ ಕಳೆದ 55 ವರ್ಷಗಳಿಂದ ತೊಡಗಿಸಿಕೊಂಡಿದ್ದರೂ ಯೋಗೇಶ್ ಅವರ ಸೇವೆಯನ್ನು ಸರ್ಕಾರ ಪರಿಗಣಿಸಿಲ್ಲ. ಅರ್ಹ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಬೇಕು’ ಎಂದು ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.</p>.<p>‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಖಾಸಗಿ ದಸರಾ ಆಚರಿಸಿ ಪರಂಪರೆಯ ಮುಂದುವರಿಕೆಗೆ ಕಾರಣರಾದ ಕನ್ನಡ ಕ್ರಾಂತಿದಳ ಸಂಸ್ಥಾಪಕ ನಾ.ನಾಗಲಿಂಗಸ್ವಾಮಿ ಕುಟುಂಬವನ್ನು ಎಲ್ಲ ದಸರೆಯಲ್ಲೂಜಿಲ್ಲಾಡಳಿತವು ವಿಶೇಷವಾಗಿ ಆಹ್ವಾನ ನೀಡಬೇಕು’ ಎಂದೂ ಅವರು ಒತ್ತಾಯಿಸಿದರು.</p>.<p>‘ಕೋವಿಡ್ ಸಂದರ್ಭದಲ್ಲಿ ಕಲಾವಿದರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ. ಭರವಸೆಯನ್ನಷ್ಟೇ ನೀಡಿದೆ. ಪ್ರಶಸ್ತಿ ಆಯ್ಕೆಯಲ್ಲೂ ಅರ್ಹರನ್ನು ಪರಿಗಣಿಸುತ್ತಿಲ್ಲ’ ಎಂದು ಸಂಘಟನೆಯ ಮುಖಂಡ ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.</p>.<p>ಸಂಘಟನೆಯ ಪ್ರಕಾಶ್ಗೌಡ, ಲೋಕೇಶ್, ಚೇತನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>