ಕೋಮುವಾದಿ ರಾಜಕಾರಣವನ್ನು ಸೋಲಿಸಿ ಸಾಮಾಜಿಕ ಸೌಹಾರ್ದ, ಸಾಮರಸ್ಯ ಕಾಪಾಡಲು ಮುಂದಾಗಬೇಕು. ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಕೋವಿಡ್ನಿಂದಾಗಿ ಶೇ 67ರಷ್ಟು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ಮುಚ್ಚಿದ್ದು, ಈ ಪೈಕಿ ಶೇ 40ರಷ್ಟು ಕಾರ್ಖಾನೆಗಳು ಮತ್ತೆ ಆರಂಭವಾಗುವುದಿಲ್ಲ ಎಂದು ಸರ್ಕಾರವೇ ತಿಳಿಸಿದೆ. ಕೆಲಸ ಕಳೆದುಕೊಂಡಿರುವವರಿಗೆ ಉದ್ಯೋಗ ನೀಡಬೇಕು. 29 ಕಾರ್ಮಿಕ ಕಾಯ್ದೆಗಳ ಸಂಹಿತೆಯನ್ನು ಹಿಂಪಡೆಯಬೇಕು. ಸಾರ್ವಜನಿಕ ಉದ್ದಿಮೆಗಳಾದ ಹಟ್ಟಿ ಚಿನ್ನದ ಗಣಿ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ, ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್, ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮ ಮತ್ತು ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಶೇ 24ರಷ್ಟು ಷೇರುಗಳ ಮಾರಾಟಕ್ಕೆ ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ತೀರ್ಮಾನಿಸಲಾಗಿದೆ.