‘ಸ್ವಾಭಿಮಾನದ ಹೆಸರಿನಲ್ಲಿ ಗೆದ್ದ ಸಂಸದೆ ಸುಮಲತಾ, ಹುಣಸೂರು, ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಪರ ಅವರು ಪ್ರಚಾರಕ್ಕೆಂದು ಹುಣಸೂರಿಗೆ ಬಂದರೆ, ಕಪ್ಪು ಬಾವುಟ ಪ್ರದರ್ಶಿಸುವ ಜತೆಯಲ್ಲೇ ಗೋ ಬ್ಯಾಕ್ ಸುಮಲತಾ ಘೋಷಣೆಗಳನ್ನು ಮೊಳಗಿಸಬೇಕಾಗುತ್ತದೆ’ ಎಂದು ಪುಟ್ಟಸಿದ್ಧಶೆಟ್ಟಿ ಎಚ್ಚರಿಕೆ ನೀಡಿದರು.