<p><strong>ನಂಜನಗೂಡು:</strong> ಇಲ್ಲಿಯ ವಿದ್ಯಾನಗರ ಬಡಾವಣೆಯಲ್ಲಿ ಮಾಲೀಕರು ಊರಿಗೆ ಹೋಗಿದ್ದನ್ನು ಕಂಡ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಮನೆ ಬಾಗಿಲು ಮೀಟಿ ಚಿನ್ನಾಭರಣ ದೋಚಿದ್ದಾರೆ.</p>.<p>ಧರಣಿಕುಮಾರ್ ಎಂಬುವವರ ಮನೆಯಲ್ಲಿ ದರೋಡೆ ನಡೆದಿದ್ದು, ಅಂದಾಜು ₹ 4 ಲಕ್ಷ ಮೌಲ್ಯದ 75 ಗ್ರಾಂ ಚಿನ್ನ, 300 ಗ್ರಾಂ ಬೆಳ್ಳಿ ಹಾಗೂ ₹ 15 ಸಾವಿರ ನಗದು ದೋಚಿದ್ದಾರೆ.</p>.<p>ವಿವಿಧ ಕಂಪನಿಯ ಉತ್ಪನ್ನಗಳ ಮಾರಾಟ ಏಜೆನ್ಸಿ ನಡೆಸುವ ಧರಣಿಕುಮಾರ್ ಕುಟುಂಬದೊಂದಿಗೆ ಬೆಂಗಳೂರಿಗೆ ತೆರಳಿದ್ದರು. ಆಗ ಕಳ್ಳತನ ನಡೆದಿದೆ. ಶಬ್ದ ಕೇಳಿ ನೆರೆಹೊರೆಯವರು ಎಚ್ಚರವಾಗಿದ್ದನ್ನು ಕಂಡು ಮಾಲೀಕನ ಬೈಕ್ ಬಳಸಿ ಪರಾರಿಯಾಗಿದ್ದು, ಬೈಕ್ನ್ನು ಮಲ್ಲನಮೂಲೆ ಮಠದ ಬಳಿ ಬಿಟ್ಟು ಹೋಗಿದ್ದಾರೆ.</p>.<p>ಸ್ಥಳಕ್ಕೆ ಬಂದ ಡಿ.ವೈ.ಎಸ್.ಪಿ. ಪ್ರಭಾಕರ್ ರಾವ್ ಶಿಂಧೆ, ಸಿ.ಪಿ.ಐ ಲಕ್ಷ್ಮಿಕಾಂತ ತಳವಾರ್, ಪಿ.ಎಸ್.ಐ ಸತೀಶ್ ಪರಿಶೀಲಿಸಿದರು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ತಪಾಸಣೆ ನಡೆಸಿದರು.</p>.<p>ಈ ಕುರಿತು ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು:</strong> ಇಲ್ಲಿಯ ವಿದ್ಯಾನಗರ ಬಡಾವಣೆಯಲ್ಲಿ ಮಾಲೀಕರು ಊರಿಗೆ ಹೋಗಿದ್ದನ್ನು ಕಂಡ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಮನೆ ಬಾಗಿಲು ಮೀಟಿ ಚಿನ್ನಾಭರಣ ದೋಚಿದ್ದಾರೆ.</p>.<p>ಧರಣಿಕುಮಾರ್ ಎಂಬುವವರ ಮನೆಯಲ್ಲಿ ದರೋಡೆ ನಡೆದಿದ್ದು, ಅಂದಾಜು ₹ 4 ಲಕ್ಷ ಮೌಲ್ಯದ 75 ಗ್ರಾಂ ಚಿನ್ನ, 300 ಗ್ರಾಂ ಬೆಳ್ಳಿ ಹಾಗೂ ₹ 15 ಸಾವಿರ ನಗದು ದೋಚಿದ್ದಾರೆ.</p>.<p>ವಿವಿಧ ಕಂಪನಿಯ ಉತ್ಪನ್ನಗಳ ಮಾರಾಟ ಏಜೆನ್ಸಿ ನಡೆಸುವ ಧರಣಿಕುಮಾರ್ ಕುಟುಂಬದೊಂದಿಗೆ ಬೆಂಗಳೂರಿಗೆ ತೆರಳಿದ್ದರು. ಆಗ ಕಳ್ಳತನ ನಡೆದಿದೆ. ಶಬ್ದ ಕೇಳಿ ನೆರೆಹೊರೆಯವರು ಎಚ್ಚರವಾಗಿದ್ದನ್ನು ಕಂಡು ಮಾಲೀಕನ ಬೈಕ್ ಬಳಸಿ ಪರಾರಿಯಾಗಿದ್ದು, ಬೈಕ್ನ್ನು ಮಲ್ಲನಮೂಲೆ ಮಠದ ಬಳಿ ಬಿಟ್ಟು ಹೋಗಿದ್ದಾರೆ.</p>.<p>ಸ್ಥಳಕ್ಕೆ ಬಂದ ಡಿ.ವೈ.ಎಸ್.ಪಿ. ಪ್ರಭಾಕರ್ ರಾವ್ ಶಿಂಧೆ, ಸಿ.ಪಿ.ಐ ಲಕ್ಷ್ಮಿಕಾಂತ ತಳವಾರ್, ಪಿ.ಎಸ್.ಐ ಸತೀಶ್ ಪರಿಶೀಲಿಸಿದರು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ತಪಾಸಣೆ ನಡೆಸಿದರು.</p>.<p>ಈ ಕುರಿತು ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>