<p><strong>ಹುಣಸೂರು:</strong> ‘ಪ್ರಾಕೃತಿಕ ವಿಕೋಪದಲ್ಲಿ ಸಂತ್ರಸ್ತರಾದವರಿಗೆ,ನಾಲ್ಕು ತಿಂಗಳಾದರೂ ಪರಿಹಾರ ನೀಡದ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದು, ಸತ್ತಂತಿದೆ’ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಇಲ್ಲಿ ಕಿಡಿಕಾರಿದರು.</p>.<p>‘ಆಗಸ್ಟ್ನಲ್ಲಿ ನಡೆದ ಕಲಾಪದಲ್ಲಿ, ಸರ್ಕಾರ ಜನರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತಾದರೂ ಇದುವರೆಗೂ ಪರಿಹಾರ ನೀಡಿಲ್ಲ. ಈ ರೀತಿ ವರ್ತಿಸುವ ಸರ್ಕಾರ, ಜೀವಂತವಾಗಿ ಉಳಿದಿದೆ ಎನ್ನಲು ಸಾಧ್ಯವೆ?’ ಎಂದು ಕುಟುಕಿದರು.</p>.<p>‘ಪ್ರಾಕೃತಿಕ ವಿಕೋಪದಲ್ಲಿ ನೊಂದವರಿಗೆ ಸ್ಪಂದಿಸುವ ವಿಷಯದಲ್ಲಿ ಸರ್ಕಾರ ನಿದ್ರೆಗೆ ಜಾರಿದೆ. ಈ ಹಂತದಲ್ಲಿ, ಜನರ ನೋವನ್ನು ಮುಖ್ಯಮಂತ್ರಿಗಳಿಗೆ ತಲುಪಿಸುವುದಾದರೂ ಹೇಗೆ’ ಎಂದು ಪ್ರಶ್ನಿಸಿದರು.</p>.<p>‘ಆಗಸ್ಟ್ ತಿಂಗಳಲ್ಲಿ ನಡೆದ ಕಲಾಪದಲ್ಲಿ ಸರ್ಕಾರ ಜನರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತಾದರೂ ನಾಲ್ಕು ತಿಂಗಳಾಗಿದ್ದರೂ ಪರಿಹಾರ ನೀಡಿಲ್ಲ. ಈ ರೀತಿ ವರ್ತಿಸುವ ಸರ್ಕಾರ ಜೀವಂತವಾಗಿ ಉಳಿದಿದೆ ಎನ್ನಲು ಸಾಧ್ಯವೆ?’ ಎಂದು ಕುಟುಕಿದರು.</p>.<p class="Subhead"><strong>ತಂಬಾಕು: </strong>ರಾಜ್ಯದಲ್ಲಿ ಕೋವಿಡ್ ಆತಂಕದಲ್ಲೂ ರೈತರು ತಂಬಾಕು ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ದರ ಇಲ್ಲ ಎಂದು ಕಾಂಗ್ರೆಸ್ ಶಾಸಕರು ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿಗಳು ದರ ನಿಗದಿಗೆ ಸಂಬಂಧಿಸಿದಂತೆ ಕಂಪನಿ ಹಾಗೂ ಮಾರುಕಟ್ಟೆ ಅಧಿಕಾರಿಗಳ ಸಭೆ ನಡೆಸಬೇಕು ಎಂದರು.</p>.<p>‘ತಂಬಾಕು ವಹಿವಾಟು ಕೇಂದ್ರ ಸರ್ಕಾರದ ಹಿಡಿತದಲ್ಲಿದ್ದು ಸಂಸದರು ಈ ಸಂಬಂಧ ವಾಣಿಜ್ಯ ಸಚಿವರೊಂದಿಗೆ ಚರ್ಚಿಸಿ ದರ ಕೊಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಬೇಕಾಗಿದೆ. ನೆರೆಯ ಆಂಧ್ರಪ್ರದೇಶದಲ್ಲಿ ಸರ್ಕಾರ ವಿಶೇಷ ಅನುದಾನದಲ್ಲಿ ರೈತನಿಂದ ತಂಬಾಕು ಖರೀದಿಸಿ ಸರಾಸರಿ ದರ ಸ್ಥಿರತೆ ಕಾದುಕೊಳ್ಳುವ ಪ್ರಯತ್ನದಲ್ಲಿ ಯಶಸ್ವಿಯಾಗಿದೆ. ಈ ಸಂಬಂಧ ಈಗಾಗಲೇ ಎರಡು ಪತ್ರ ಬರೆದು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲೂ ತಂಬಾಕು ಬೆಳೆಗಾರರ ನೋವಿಗೆ ಸ್ಪಂದಿಸುವಂತೆ ಮನವಿ ಮಾಡುತ್ತೇನೆ’ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ತಿಳಿಸಿದರು.</p>.<p>‘ನಗರಸಭೆಗೆ ಎರಡು ವರ್ಷದಿಂದ ಆಯುಕ್ತರಿಲ್ಲದೆ ಸಾರ್ವಜನಿಕರಿಗೆ ಸಮಸ್ಯೆ ಎದುರಾಗಿರುವ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ. ಹಾಲಿ ಸರ್ಕಾರ ಯಾವ ರೀತಿ ಆಡಳಿತ ನಡೆಸಿದೆ ಎನ್ನಲು ಇದೇ ಸಾಕ್ಷಿ’ ಎಂದರು.</p>.<p>‘ಉಪಚುನಾವಣೆಗಳು ಆಡಳಿತದ ಸರ್ಕಾರಕ್ಕೆ ಫಲಿತಾಂಶ ಸಿಗುವುದು ಸಾಮಾನ್ಯ. ಈ ಚುನಾವಣೆಯಲ್ಲಿ ಶಿರಾ ಮತ್ತು ಆರ್.ಆರ್. ಕ್ಷೇತ್ರದಲ್ಲಿ ಬಿಜೆಪಿ ಹಣದ ಹೊಳೆ ಹಾಗೂ ಅಧಿಕಾರ ದುರುಪಯೋಗ ಮಾಡಿಕೊಂಡು ಕ್ಷೇತ್ರ ಗೆದ್ದಿದೆ’ ಎಂದು ಆರೋಪಿಸಿದರು.</p>.<p>ಶಾಸಕ ಮಂಜುನಾಥ್, ಮಾಜಿ ಶಾಸಕ ವೆಂಕಟೇಶ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಜಿ.ಪಂ. ಉಪಾಧ್ಯಕ್ಷ ಗೌರಮ್ಮ ಸೋಮಶೇಖರ್, ನಗರಸಭೆ ಅಧ್ಯಕ್ಷ ಅನುಷಾ ರಾಘು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ‘ಪ್ರಾಕೃತಿಕ ವಿಕೋಪದಲ್ಲಿ ಸಂತ್ರಸ್ತರಾದವರಿಗೆ,ನಾಲ್ಕು ತಿಂಗಳಾದರೂ ಪರಿಹಾರ ನೀಡದ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದು, ಸತ್ತಂತಿದೆ’ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಇಲ್ಲಿ ಕಿಡಿಕಾರಿದರು.</p>.<p>‘ಆಗಸ್ಟ್ನಲ್ಲಿ ನಡೆದ ಕಲಾಪದಲ್ಲಿ, ಸರ್ಕಾರ ಜನರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತಾದರೂ ಇದುವರೆಗೂ ಪರಿಹಾರ ನೀಡಿಲ್ಲ. ಈ ರೀತಿ ವರ್ತಿಸುವ ಸರ್ಕಾರ, ಜೀವಂತವಾಗಿ ಉಳಿದಿದೆ ಎನ್ನಲು ಸಾಧ್ಯವೆ?’ ಎಂದು ಕುಟುಕಿದರು.</p>.<p>‘ಪ್ರಾಕೃತಿಕ ವಿಕೋಪದಲ್ಲಿ ನೊಂದವರಿಗೆ ಸ್ಪಂದಿಸುವ ವಿಷಯದಲ್ಲಿ ಸರ್ಕಾರ ನಿದ್ರೆಗೆ ಜಾರಿದೆ. ಈ ಹಂತದಲ್ಲಿ, ಜನರ ನೋವನ್ನು ಮುಖ್ಯಮಂತ್ರಿಗಳಿಗೆ ತಲುಪಿಸುವುದಾದರೂ ಹೇಗೆ’ ಎಂದು ಪ್ರಶ್ನಿಸಿದರು.</p>.<p>‘ಆಗಸ್ಟ್ ತಿಂಗಳಲ್ಲಿ ನಡೆದ ಕಲಾಪದಲ್ಲಿ ಸರ್ಕಾರ ಜನರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತಾದರೂ ನಾಲ್ಕು ತಿಂಗಳಾಗಿದ್ದರೂ ಪರಿಹಾರ ನೀಡಿಲ್ಲ. ಈ ರೀತಿ ವರ್ತಿಸುವ ಸರ್ಕಾರ ಜೀವಂತವಾಗಿ ಉಳಿದಿದೆ ಎನ್ನಲು ಸಾಧ್ಯವೆ?’ ಎಂದು ಕುಟುಕಿದರು.</p>.<p class="Subhead"><strong>ತಂಬಾಕು: </strong>ರಾಜ್ಯದಲ್ಲಿ ಕೋವಿಡ್ ಆತಂಕದಲ್ಲೂ ರೈತರು ತಂಬಾಕು ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ದರ ಇಲ್ಲ ಎಂದು ಕಾಂಗ್ರೆಸ್ ಶಾಸಕರು ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿಗಳು ದರ ನಿಗದಿಗೆ ಸಂಬಂಧಿಸಿದಂತೆ ಕಂಪನಿ ಹಾಗೂ ಮಾರುಕಟ್ಟೆ ಅಧಿಕಾರಿಗಳ ಸಭೆ ನಡೆಸಬೇಕು ಎಂದರು.</p>.<p>‘ತಂಬಾಕು ವಹಿವಾಟು ಕೇಂದ್ರ ಸರ್ಕಾರದ ಹಿಡಿತದಲ್ಲಿದ್ದು ಸಂಸದರು ಈ ಸಂಬಂಧ ವಾಣಿಜ್ಯ ಸಚಿವರೊಂದಿಗೆ ಚರ್ಚಿಸಿ ದರ ಕೊಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಬೇಕಾಗಿದೆ. ನೆರೆಯ ಆಂಧ್ರಪ್ರದೇಶದಲ್ಲಿ ಸರ್ಕಾರ ವಿಶೇಷ ಅನುದಾನದಲ್ಲಿ ರೈತನಿಂದ ತಂಬಾಕು ಖರೀದಿಸಿ ಸರಾಸರಿ ದರ ಸ್ಥಿರತೆ ಕಾದುಕೊಳ್ಳುವ ಪ್ರಯತ್ನದಲ್ಲಿ ಯಶಸ್ವಿಯಾಗಿದೆ. ಈ ಸಂಬಂಧ ಈಗಾಗಲೇ ಎರಡು ಪತ್ರ ಬರೆದು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲೂ ತಂಬಾಕು ಬೆಳೆಗಾರರ ನೋವಿಗೆ ಸ್ಪಂದಿಸುವಂತೆ ಮನವಿ ಮಾಡುತ್ತೇನೆ’ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ತಿಳಿಸಿದರು.</p>.<p>‘ನಗರಸಭೆಗೆ ಎರಡು ವರ್ಷದಿಂದ ಆಯುಕ್ತರಿಲ್ಲದೆ ಸಾರ್ವಜನಿಕರಿಗೆ ಸಮಸ್ಯೆ ಎದುರಾಗಿರುವ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ. ಹಾಲಿ ಸರ್ಕಾರ ಯಾವ ರೀತಿ ಆಡಳಿತ ನಡೆಸಿದೆ ಎನ್ನಲು ಇದೇ ಸಾಕ್ಷಿ’ ಎಂದರು.</p>.<p>‘ಉಪಚುನಾವಣೆಗಳು ಆಡಳಿತದ ಸರ್ಕಾರಕ್ಕೆ ಫಲಿತಾಂಶ ಸಿಗುವುದು ಸಾಮಾನ್ಯ. ಈ ಚುನಾವಣೆಯಲ್ಲಿ ಶಿರಾ ಮತ್ತು ಆರ್.ಆರ್. ಕ್ಷೇತ್ರದಲ್ಲಿ ಬಿಜೆಪಿ ಹಣದ ಹೊಳೆ ಹಾಗೂ ಅಧಿಕಾರ ದುರುಪಯೋಗ ಮಾಡಿಕೊಂಡು ಕ್ಷೇತ್ರ ಗೆದ್ದಿದೆ’ ಎಂದು ಆರೋಪಿಸಿದರು.</p>.<p>ಶಾಸಕ ಮಂಜುನಾಥ್, ಮಾಜಿ ಶಾಸಕ ವೆಂಕಟೇಶ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಜಿ.ಪಂ. ಉಪಾಧ್ಯಕ್ಷ ಗೌರಮ್ಮ ಸೋಮಶೇಖರ್, ನಗರಸಭೆ ಅಧ್ಯಕ್ಷ ಅನುಷಾ ರಾಘು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>