<p><strong>ಮೈಸೂರು: ‘</strong>ತೋರಿಕೆಗಷ್ಟೇ ಸಮಾಜದ ಏಳಿಗೆಗೆ ಶ್ರಮಿಸುತ್ತೇವೆಂದು ಬಿಜೆಪಿ ಮುಖಂಡರು ಹೇಳುತ್ತಾರೆ. ಆದರೆ, ಬಡವರ ವಿರುದ್ಧವಾಗಿಯೇ ನಡೆದುಕೊಳ್ಳುತ್ತಾರೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಕಳೆದ ಎರಡು ವರ್ಷಗಳಿಂದ ನೀಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ದೂರಿದರು.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,‘ಸದನದಲ್ಲೂ ಈ ಬಗ್ಗೆ ಪ್ರಶ್ನೆ ಎತ್ತಿದ್ದರೂ ಬಿಡುಗಡೆಗೆ ಮುಂದಾಗಿಲ್ಲ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮವಹಿಸಿಲ್ಲ. ಜನರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.</p>.<p>‘ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಜನರ ಮತದಾನದ ಹಕ್ಕನ್ನು ಕಸಿಯಲು ಬಿಜೆಪಿ ಮುಂದಾಗಿದೆ. 224 ಕ್ಷೇತ್ರದಲ್ಲೂ ಕಾಂಗ್ರೆಸ್ ಮತಗಟ್ಟೆ ಏಜೆಂಟ್ ನೇಮಕ ಮಾಡಿದ್ದು, ಮತದಾರರಲ್ಲಿ ಜಾಗೃತಿ ಹಾಗೂ ಪಟ್ಟಿಯಲ್ಲಿ ಕೈಬಿಡಲಾಗಿರುವ ಹೆಸರುಗಳ ಪತ್ತೆ ಕೆಲಸವನ್ನು ಕಾರ್ಯಕರ್ತರು ಮಾಡುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಬೆಂಗಳೂರಿನಲ್ಲಿ ಬಿಜೆಪಿ ಮತಗಳಿಗೆ ಕನ್ನ ಹಾಕಿದ್ದರಿಂದ ಚುನಾವಣಾ ಆಯೋಗ ಕ್ರಮ ತೆಗೆದುಕೊಂಡಿದೆ. ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಮಾಡಿದೆ. ಹಲವರು ಜೈಲಿನಲ್ಲಿದ್ದಾರೆ’ ಎಂದು ತಿಳಿಸಿದರು.</p>.<p>‘ಭಾರತ್ ಜೋಡೊ, ಮೇಕೆದಾಟು ಪಾದಯಾತ್ರೆ, ಸಿದ್ದರಾಮಯ್ಯ ಜನ್ಮದಿನೋತ್ಸವದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ. ಅದೇ ಮಾದರಿಯಲ್ಲಿ 2023ರಲ್ಲೂ ಜನರು ಕಾಂಗ್ರೆಸ್ ಬೆಂಬಲಿಸಲಿದ್ದಾರೆ. ಪಕ್ಷ ಸಂಘಟನೆ ಸಂಬಂಧ ಜನವರಿ ಮೊದಲ ವಾರಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿರಥಯಾತ್ರೆ ಆರಂಭವಾಗಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ತೋರಿಕೆಗಷ್ಟೇ ಸಮಾಜದ ಏಳಿಗೆಗೆ ಶ್ರಮಿಸುತ್ತೇವೆಂದು ಬಿಜೆಪಿ ಮುಖಂಡರು ಹೇಳುತ್ತಾರೆ. ಆದರೆ, ಬಡವರ ವಿರುದ್ಧವಾಗಿಯೇ ನಡೆದುಕೊಳ್ಳುತ್ತಾರೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಕಳೆದ ಎರಡು ವರ್ಷಗಳಿಂದ ನೀಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ದೂರಿದರು.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,‘ಸದನದಲ್ಲೂ ಈ ಬಗ್ಗೆ ಪ್ರಶ್ನೆ ಎತ್ತಿದ್ದರೂ ಬಿಡುಗಡೆಗೆ ಮುಂದಾಗಿಲ್ಲ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮವಹಿಸಿಲ್ಲ. ಜನರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.</p>.<p>‘ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಜನರ ಮತದಾನದ ಹಕ್ಕನ್ನು ಕಸಿಯಲು ಬಿಜೆಪಿ ಮುಂದಾಗಿದೆ. 224 ಕ್ಷೇತ್ರದಲ್ಲೂ ಕಾಂಗ್ರೆಸ್ ಮತಗಟ್ಟೆ ಏಜೆಂಟ್ ನೇಮಕ ಮಾಡಿದ್ದು, ಮತದಾರರಲ್ಲಿ ಜಾಗೃತಿ ಹಾಗೂ ಪಟ್ಟಿಯಲ್ಲಿ ಕೈಬಿಡಲಾಗಿರುವ ಹೆಸರುಗಳ ಪತ್ತೆ ಕೆಲಸವನ್ನು ಕಾರ್ಯಕರ್ತರು ಮಾಡುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಬೆಂಗಳೂರಿನಲ್ಲಿ ಬಿಜೆಪಿ ಮತಗಳಿಗೆ ಕನ್ನ ಹಾಕಿದ್ದರಿಂದ ಚುನಾವಣಾ ಆಯೋಗ ಕ್ರಮ ತೆಗೆದುಕೊಂಡಿದೆ. ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಮಾಡಿದೆ. ಹಲವರು ಜೈಲಿನಲ್ಲಿದ್ದಾರೆ’ ಎಂದು ತಿಳಿಸಿದರು.</p>.<p>‘ಭಾರತ್ ಜೋಡೊ, ಮೇಕೆದಾಟು ಪಾದಯಾತ್ರೆ, ಸಿದ್ದರಾಮಯ್ಯ ಜನ್ಮದಿನೋತ್ಸವದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ. ಅದೇ ಮಾದರಿಯಲ್ಲಿ 2023ರಲ್ಲೂ ಜನರು ಕಾಂಗ್ರೆಸ್ ಬೆಂಬಲಿಸಲಿದ್ದಾರೆ. ಪಕ್ಷ ಸಂಘಟನೆ ಸಂಬಂಧ ಜನವರಿ ಮೊದಲ ವಾರಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿರಥಯಾತ್ರೆ ಆರಂಭವಾಗಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>