<p><strong>ಹುಣಸೂರು:</strong> ಸರ್ಕಾರಿ ಶಾಲೆಗಳ ಗುಣಮಟ್ಟ ಕಾಯ್ದುಕೊಳ್ಳುವ ದೃಷ್ಟಿಯಿಂದ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಿಕ್ಷಕರನ್ನು ಹುದ್ದೆಗೆ ನಿಯೋಜಿಸುತ್ತಿದ್ದು, ಗ್ರಾಮೀಣ ಪ್ರದೇಶದ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಮರಳಯ್ಯನಕೊಪ್ಪಲು ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ್ ಮನವಿ ಮಾಡಿದರು.</p>.<p>ಮರಳಯ್ಯನಕೊಪ್ಪಲು ಗ್ರಾಮದ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬನ್ನಿಕುಪ್ಪೆ ಕ್ಲಸ್ಟರ್ ಮಟ್ಟದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯ ಸೇರಿದಂತೆ ಉತ್ತಮ ಶಿಕ್ಷಕರನ್ನು ನಿಯೋಜಿಸಿ ಪಾಠ ಮತ್ತು ಪಠ್ಯೇತರ ಚಟುವಟಿಕೆಗೆ ಆದ್ಯತೆ ನೀಡಿ ಕಲಿಕೆಯಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುತ್ತಿದ್ದು, ಇಂಗ್ಲಿಷ್ ವ್ಯಾಮೋಹದಿಂದ ಖಾಸಗಿ ಶಾಲೆಗೆ ಪೋಷಕರು ಮಕ್ಕಳನ್ನು ದಾಖಲಿಸುತ್ತಿರುವುದು ವಿಷಾದನೀಯ’ ಎಂದರು.</p>.<p>‘ಮಕ್ಕಳ ಕಲಿಕೆಗೆ ಪೋಷಕರ ಪಾತ್ರ ಹೆಚ್ಚಾಗಿದ್ದು, ಮಕ್ಕಳು ಓದುವ ಸಮಯದಲ್ಲಿ ಟಿವಿ ಅಥವಾ ಮೊಬೈಲ್ನಲ್ಲಿ ತೊಡಗಿಸಿಕೊಳ್ಳದೆ ಮಕ್ಕಳೊಂದಿಗೆ ಕುಳಿತು ಅವರನ್ನು ಓದಿಸುವ ಕೆಲಸ ಆಗಬೇಕು. ಶಾಲೆಯಲ್ಲಿ ಕಲಿಸುವ ಪಠ್ಯವನ್ನು ಮನೆಯಲ್ಲಿ ಕಟ್ಟು ನಿಟ್ಟಿನಿಂದ ಅಭ್ಯಾಸಿಸುವ ಕೆಲಸ ಆಗಬೇಕಾಗಿದೆ’ ಎಂದರು.</p>.<p>ಕಲಿಕಾ ಹಬ್ಬದಲ್ಲಿ 11 ಶಾಲೆಗಳ ವಿದ್ಯಾರ್ಥಿಗಳಿಗೆ ಕ್ರೀಡೆ, ರಸಪ್ರಶ್ನೆ ಓದುವ ಕೌಶಲ ಒಳಗೊಂಡಂತೆ ಹಲವು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಿದರು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜು, ಶಿಕ್ಷಣ ಇಲಾಖೆ ಅಧಿಕಾರಿ ಕವಿತಾ, ಮುಖ್ಯ ಶಿಕ್ಷಕ ವೆಂಕಟೇಶಪ್ಪ, ಫ್ಯಾಕ್ಸ್ ನಿರ್ದೇಶಕ ಚೆಲುವರಾಜು, ಯೋಗೇಶ್, ಶಿವನಗೌಡ, ಶಿವಣ್ಣ, ಬಸವಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ಸರ್ಕಾರಿ ಶಾಲೆಗಳ ಗುಣಮಟ್ಟ ಕಾಯ್ದುಕೊಳ್ಳುವ ದೃಷ್ಟಿಯಿಂದ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಿಕ್ಷಕರನ್ನು ಹುದ್ದೆಗೆ ನಿಯೋಜಿಸುತ್ತಿದ್ದು, ಗ್ರಾಮೀಣ ಪ್ರದೇಶದ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಮರಳಯ್ಯನಕೊಪ್ಪಲು ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ್ ಮನವಿ ಮಾಡಿದರು.</p>.<p>ಮರಳಯ್ಯನಕೊಪ್ಪಲು ಗ್ರಾಮದ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬನ್ನಿಕುಪ್ಪೆ ಕ್ಲಸ್ಟರ್ ಮಟ್ಟದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯ ಸೇರಿದಂತೆ ಉತ್ತಮ ಶಿಕ್ಷಕರನ್ನು ನಿಯೋಜಿಸಿ ಪಾಠ ಮತ್ತು ಪಠ್ಯೇತರ ಚಟುವಟಿಕೆಗೆ ಆದ್ಯತೆ ನೀಡಿ ಕಲಿಕೆಯಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುತ್ತಿದ್ದು, ಇಂಗ್ಲಿಷ್ ವ್ಯಾಮೋಹದಿಂದ ಖಾಸಗಿ ಶಾಲೆಗೆ ಪೋಷಕರು ಮಕ್ಕಳನ್ನು ದಾಖಲಿಸುತ್ತಿರುವುದು ವಿಷಾದನೀಯ’ ಎಂದರು.</p>.<p>‘ಮಕ್ಕಳ ಕಲಿಕೆಗೆ ಪೋಷಕರ ಪಾತ್ರ ಹೆಚ್ಚಾಗಿದ್ದು, ಮಕ್ಕಳು ಓದುವ ಸಮಯದಲ್ಲಿ ಟಿವಿ ಅಥವಾ ಮೊಬೈಲ್ನಲ್ಲಿ ತೊಡಗಿಸಿಕೊಳ್ಳದೆ ಮಕ್ಕಳೊಂದಿಗೆ ಕುಳಿತು ಅವರನ್ನು ಓದಿಸುವ ಕೆಲಸ ಆಗಬೇಕು. ಶಾಲೆಯಲ್ಲಿ ಕಲಿಸುವ ಪಠ್ಯವನ್ನು ಮನೆಯಲ್ಲಿ ಕಟ್ಟು ನಿಟ್ಟಿನಿಂದ ಅಭ್ಯಾಸಿಸುವ ಕೆಲಸ ಆಗಬೇಕಾಗಿದೆ’ ಎಂದರು.</p>.<p>ಕಲಿಕಾ ಹಬ್ಬದಲ್ಲಿ 11 ಶಾಲೆಗಳ ವಿದ್ಯಾರ್ಥಿಗಳಿಗೆ ಕ್ರೀಡೆ, ರಸಪ್ರಶ್ನೆ ಓದುವ ಕೌಶಲ ಒಳಗೊಂಡಂತೆ ಹಲವು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಿದರು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜು, ಶಿಕ್ಷಣ ಇಲಾಖೆ ಅಧಿಕಾರಿ ಕವಿತಾ, ಮುಖ್ಯ ಶಿಕ್ಷಕ ವೆಂಕಟೇಶಪ್ಪ, ಫ್ಯಾಕ್ಸ್ ನಿರ್ದೇಶಕ ಚೆಲುವರಾಜು, ಯೋಗೇಶ್, ಶಿವನಗೌಡ, ಶಿವಣ್ಣ, ಬಸವಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>