<p><strong>ಮೈಸೂರು:</strong> ‘ದಸರಾ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಬಾರದು’ ಎಂದು ಆಗ್ರಹಿಸಿ ಅಹಿಂದ ಸಂಘಟನೆಗಳು ಮತ್ತು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಸದಸ್ಯರು ರಾಮಸ್ವಾಮಿ ವೃತ್ತದಲ್ಲಿ ‘ಗೋ ಬ್ಯಾಕ್ ಗವರ್ನರ್’ ಫಲಕ ಹಿಡಿದು ಪ್ರತಿಭಟಿಸಿದರು.</p>.<p>‘ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಮರೆತು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ದಲ್ಲಾಳಿಯಂತೆ ಕೆಲಸ ಮಾಡಿರುವುದು ಖಂಡನೀಯ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಕರ್ನಾಟಕದ ಕರಾಳ ರಾಜಕೀಯದ ಕೇಂದ್ರಬಿಂದುವಾಗಿ ಅವರು ಗುರುತಿಸಿಕೊಂಡಿದ್ದಾರೆ’ ಎಂದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು ಆರೋಪಿಸಿದರು.</p>.<p>‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ವಿರೋಧ ಪಕ್ಷಗಳಿಂದ ಸುಪಾರಿ ಪಡೆದು ಕಾನೂನು ಬಾಹಿರವಾಗಿ ತನಿಖೆಗೆ ಅನುಮತಿ ನೀಡಿದ್ದಾರೆ. ಇಂತಹ ಸಂವಿಧಾನ ವಿರೋಧಿ ರಾಜ್ಯಪಾಲ ಮೈಸೂರು ದಸರಾದಲ್ಲಿ ಭಾಗವಹಿಸಬಾರದು’ ಎಂದು ಒತ್ತಾಯಿಸಿದರು.</p>.<p>‘ಅವರು ಭಾಗವಹಿಸಿದ ಬಳಿಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದರೆ ರಾಜ್ಯಪಾಲರೇ ಹೊಣೆ’ ಎಂದು ಎಚ್ಚರಿಕೆ ನೀಡಿದರು.</p>.<p>ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ದೇವಗಳ್ಳಿ ಸೋಮಶೇಖರ್, ಎಸ್ಸಿ, ಎಸ್ಟಿ ವಕೀಲರ ಸಂಘದ ಕಾರ್ಯದರ್ಶಿ ಎ.ಆರ್.ಕಾಂತರಾಜು, ಕುಂಬಾರರ ಸಂಘದ ಅಧ್ಯಕ್ಷ ಎಚ್.ಎಸ್.ಪ್ರಕಾಶ್, ಉಪ್ಪಾರರ ಸಂಘದ ಅಧ್ಯಕ್ಷ ಯೋಗೇಶ ಉಪ್ಪಾರ, ಮಡಿವಾಳರ ಸಂಘದ ಅಧ್ಯಕ್ಷ ರವಿನಂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ದಸರಾ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಬಾರದು’ ಎಂದು ಆಗ್ರಹಿಸಿ ಅಹಿಂದ ಸಂಘಟನೆಗಳು ಮತ್ತು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಸದಸ್ಯರು ರಾಮಸ್ವಾಮಿ ವೃತ್ತದಲ್ಲಿ ‘ಗೋ ಬ್ಯಾಕ್ ಗವರ್ನರ್’ ಫಲಕ ಹಿಡಿದು ಪ್ರತಿಭಟಿಸಿದರು.</p>.<p>‘ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಮರೆತು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ದಲ್ಲಾಳಿಯಂತೆ ಕೆಲಸ ಮಾಡಿರುವುದು ಖಂಡನೀಯ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಕರ್ನಾಟಕದ ಕರಾಳ ರಾಜಕೀಯದ ಕೇಂದ್ರಬಿಂದುವಾಗಿ ಅವರು ಗುರುತಿಸಿಕೊಂಡಿದ್ದಾರೆ’ ಎಂದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು ಆರೋಪಿಸಿದರು.</p>.<p>‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ವಿರೋಧ ಪಕ್ಷಗಳಿಂದ ಸುಪಾರಿ ಪಡೆದು ಕಾನೂನು ಬಾಹಿರವಾಗಿ ತನಿಖೆಗೆ ಅನುಮತಿ ನೀಡಿದ್ದಾರೆ. ಇಂತಹ ಸಂವಿಧಾನ ವಿರೋಧಿ ರಾಜ್ಯಪಾಲ ಮೈಸೂರು ದಸರಾದಲ್ಲಿ ಭಾಗವಹಿಸಬಾರದು’ ಎಂದು ಒತ್ತಾಯಿಸಿದರು.</p>.<p>‘ಅವರು ಭಾಗವಹಿಸಿದ ಬಳಿಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದರೆ ರಾಜ್ಯಪಾಲರೇ ಹೊಣೆ’ ಎಂದು ಎಚ್ಚರಿಕೆ ನೀಡಿದರು.</p>.<p>ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ದೇವಗಳ್ಳಿ ಸೋಮಶೇಖರ್, ಎಸ್ಸಿ, ಎಸ್ಟಿ ವಕೀಲರ ಸಂಘದ ಕಾರ್ಯದರ್ಶಿ ಎ.ಆರ್.ಕಾಂತರಾಜು, ಕುಂಬಾರರ ಸಂಘದ ಅಧ್ಯಕ್ಷ ಎಚ್.ಎಸ್.ಪ್ರಕಾಶ್, ಉಪ್ಪಾರರ ಸಂಘದ ಅಧ್ಯಕ್ಷ ಯೋಗೇಶ ಉಪ್ಪಾರ, ಮಡಿವಾಳರ ಸಂಘದ ಅಧ್ಯಕ್ಷ ರವಿನಂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>