<p><strong>ಮೈಸೂರು: </strong>‘ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಕರ್ನಾಟಕದಲ್ಲಿ ಮುಂಬರುವ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಗುಜರಾತ್ ಚುನಾವಣೆ ಫಲಿತಾಂಶದ ಬಗ್ಗೆ ಇಲ್ಲಿ ಗುರುವಾರ ಪ್ರತಿಕ್ರಿಯಿಸಿದ ಅವರು, 'ಅಲ್ಲಿ ಬಿಜೆಪಿ ಅಧಿಕಾರಕ್ಕೆ<br />ಬರುತ್ತದೆ ಎಂಬ ನಿರೀಕ್ಷೆ ಇತ್ತು. ಆಮ್ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ ಕಾಂಗ್ರೆಸ್ ಮತಗಳನ್ನು ತಿಂದರು. ಆ ಪಕ್ಷದವರು ಪಡೆದ ಮತಗಳೆಲ್ಲ ಕಾಂಗ್ರೆಸ್ನದ್ದೇ' ಎಂದು ಹೇಳಿದರು.</p>.<p>'ಒಂದು ರಾಜ್ಯದ ಚುನಾವಣಾ ಫಲಿತಾಂಶದ ಗಾಳಿ ಇನ್ನೊಂದು ರಾಜ್ಯಕ್ಕೆ ಬೀಸುವುದಿಲ್ಲ' ಎಂದರು.</p>.<p>'ಇಲ್ಲಿನ ಬಿಜೆಪಿ ಸರ್ಕಾರ ಅತಿ ಭ್ರಷ್ಟ ಸರ್ಕಾರ. ಕಾಂಗ್ರೆಸ್ ಸಂಘಟನೆ ಇಲ್ಲಿ ಶಕ್ತಿಯುತವಾಗಿದೆ. ಗುಜರಾತ್ಗೆ ಹೋಲಿಸಬಾರದು. ಕರ್ನಾಟಕದಲ್ಲಿ ಸೋಲುತ್ತೇವೆ ಎಂಬುದು ಬಿಜೆಪಿಯವರಿಗೂ ಗೊತ್ತಿದೆ' ಎಂದರು.</p>.<p>'ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಕಾಂಗ್ರೆಸ್ಗೆ ಪ್ಲಸ್ ಆಗಿದೆ' ಎಂದು ಹೇಳಿದರು.</p>.<p>'ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷ ಬಹಳ ಹಣ ಖರ್ಚು ಮಾಡಿತು. ಬಿಜೆಪಿಯವರೇ ಆ ಪಕ್ಷಕ್ಕೆ ಫಂಡ್ ಮಾಡಿದ್ದಾರೆ (ಹಣ ಒದಗಿಸಿದ್ದಾರೆ). ಕಾಂಗ್ರೆಸ್ ಮತ ವಿಭಜನೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿ ಫಂಡ್ ಮಾಡಿತು' ಎಂದು ಆರೋಪಿಸಿದರು.</p>.<p>'ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಇಲ್ಲಿ ಬಿಜೆಪಿ ತಂತ್ರಗಾರಿಕೆ ಮಾಡಬಹುದು. ಆದರೆ, ಅದು ನಡೆಯುವುದಿಲ್ಲ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ' ಎಂದರು.</p>.<p>'ಅಷ್ಟು ದುಡ್ಡು ಖರ್ಚು ಮಾಡಿದರೂ ಆಮ್ ಆದ್ಮಿ ಪಕ್ಷ 6 ಸ್ಥಾನ ಪಡೆದಿದೆ. ಅವರಿಂದ ಮತ ವಿಭಜನೆಯಾಗಿದೆ' ಎಂದು ಆರೋಪಿಸಿದರು.</p>.<p>'ಕರ್ನಾಟಕದಲ್ಲಿ ಕಾಂಗ್ರೆಸ್ ಸುಮ್ಮನೆ ಇದ್ದರೂ ಗೆಲ್ಲುತ್ತದೆ. ನಾವು ಯಾವುದೇ ತಂತ್ರಗಾರಿಕೆ ಮಾಡುವುದೇ ಬೇಡ. ಮೋದಿ ಹವಾ ಎಲ್ಲೂ ಇಲ್ಲ. ಹವಾ ಇದ್ದಿದ್ದರೆ ದೆಹಲಿಯಲ್ಲೇ ಸೋಲುತ್ತಿದ್ದರೇಕೆ. ಎಲ್ಲಿ ಹೋಯಿತು ಮೋದಿ ಹವಾ?' ಎಂದು ವ್ಯಂಗ್ಯವಾಗಿ ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಕರ್ನಾಟಕದಲ್ಲಿ ಮುಂಬರುವ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಗುಜರಾತ್ ಚುನಾವಣೆ ಫಲಿತಾಂಶದ ಬಗ್ಗೆ ಇಲ್ಲಿ ಗುರುವಾರ ಪ್ರತಿಕ್ರಿಯಿಸಿದ ಅವರು, 'ಅಲ್ಲಿ ಬಿಜೆಪಿ ಅಧಿಕಾರಕ್ಕೆ<br />ಬರುತ್ತದೆ ಎಂಬ ನಿರೀಕ್ಷೆ ಇತ್ತು. ಆಮ್ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ ಕಾಂಗ್ರೆಸ್ ಮತಗಳನ್ನು ತಿಂದರು. ಆ ಪಕ್ಷದವರು ಪಡೆದ ಮತಗಳೆಲ್ಲ ಕಾಂಗ್ರೆಸ್ನದ್ದೇ' ಎಂದು ಹೇಳಿದರು.</p>.<p>'ಒಂದು ರಾಜ್ಯದ ಚುನಾವಣಾ ಫಲಿತಾಂಶದ ಗಾಳಿ ಇನ್ನೊಂದು ರಾಜ್ಯಕ್ಕೆ ಬೀಸುವುದಿಲ್ಲ' ಎಂದರು.</p>.<p>'ಇಲ್ಲಿನ ಬಿಜೆಪಿ ಸರ್ಕಾರ ಅತಿ ಭ್ರಷ್ಟ ಸರ್ಕಾರ. ಕಾಂಗ್ರೆಸ್ ಸಂಘಟನೆ ಇಲ್ಲಿ ಶಕ್ತಿಯುತವಾಗಿದೆ. ಗುಜರಾತ್ಗೆ ಹೋಲಿಸಬಾರದು. ಕರ್ನಾಟಕದಲ್ಲಿ ಸೋಲುತ್ತೇವೆ ಎಂಬುದು ಬಿಜೆಪಿಯವರಿಗೂ ಗೊತ್ತಿದೆ' ಎಂದರು.</p>.<p>'ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಕಾಂಗ್ರೆಸ್ಗೆ ಪ್ಲಸ್ ಆಗಿದೆ' ಎಂದು ಹೇಳಿದರು.</p>.<p>'ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷ ಬಹಳ ಹಣ ಖರ್ಚು ಮಾಡಿತು. ಬಿಜೆಪಿಯವರೇ ಆ ಪಕ್ಷಕ್ಕೆ ಫಂಡ್ ಮಾಡಿದ್ದಾರೆ (ಹಣ ಒದಗಿಸಿದ್ದಾರೆ). ಕಾಂಗ್ರೆಸ್ ಮತ ವಿಭಜನೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿ ಫಂಡ್ ಮಾಡಿತು' ಎಂದು ಆರೋಪಿಸಿದರು.</p>.<p>'ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಇಲ್ಲಿ ಬಿಜೆಪಿ ತಂತ್ರಗಾರಿಕೆ ಮಾಡಬಹುದು. ಆದರೆ, ಅದು ನಡೆಯುವುದಿಲ್ಲ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ' ಎಂದರು.</p>.<p>'ಅಷ್ಟು ದುಡ್ಡು ಖರ್ಚು ಮಾಡಿದರೂ ಆಮ್ ಆದ್ಮಿ ಪಕ್ಷ 6 ಸ್ಥಾನ ಪಡೆದಿದೆ. ಅವರಿಂದ ಮತ ವಿಭಜನೆಯಾಗಿದೆ' ಎಂದು ಆರೋಪಿಸಿದರು.</p>.<p>'ಕರ್ನಾಟಕದಲ್ಲಿ ಕಾಂಗ್ರೆಸ್ ಸುಮ್ಮನೆ ಇದ್ದರೂ ಗೆಲ್ಲುತ್ತದೆ. ನಾವು ಯಾವುದೇ ತಂತ್ರಗಾರಿಕೆ ಮಾಡುವುದೇ ಬೇಡ. ಮೋದಿ ಹವಾ ಎಲ್ಲೂ ಇಲ್ಲ. ಹವಾ ಇದ್ದಿದ್ದರೆ ದೆಹಲಿಯಲ್ಲೇ ಸೋಲುತ್ತಿದ್ದರೇಕೆ. ಎಲ್ಲಿ ಹೋಯಿತು ಮೋದಿ ಹವಾ?' ಎಂದು ವ್ಯಂಗ್ಯವಾಗಿ ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>