<p><strong>ಮೈಸೂರು: </strong>ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾ ವತಿಯಿಂದ ಭಾನುವಾರ ಗುರುವಂದನಾ ಕಾರ್ಯಕ್ರಮದ ಏರ್ಪಡಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯದ ಹಲವರನ್ನು ಇದೇ ವೇಳೆ ಸನ್ಮಾನಿಸಲಾಯಿತು.</p>.<p>ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಕರಾದ ಅನಿಲ್ ಕುಮಾರ್ ರಾಂಪೊರೆ, ಸುಮನ್ ಟಿಕಾರೆ, ದಿವ್ಯಾ ಲೋಕರೆ, ಭವಾನಿ ರಾಂಪೊರೆ, ನಾಗಲಕ್ಷ್ಮಿ ವಾದೋನೆ, ಮಮತಾ ವಾದೋನೆ, ದೇವರಾಜು ಪಿಸ್ಸೆ, ಜಿ.ಸುಮತಿ, ವಿನಕ ಕೃಷ್ಣ, ವಿನಾಯಕ ಅವರನ್ನು ಗೌರವಿಸಲಾಯಿತು.</p>.<p>ಶಾಸಕ ಎಲ್.ನಾಗೇಂದ್ರ ಮಾತನಾಡಿ, ಬದುಕಿಗೆ ದಾರಿ ತೋರುವವರೆಲ್ಲರೂ ಗುರುಗಳೇ ಆಗಿದ್ದಾರೆ. ಇಂತಹ ಹಲವರು ನಮ್ಮ ಸುತ್ತುಮುತ್ತ ಇದ್ದಾರೆ. ಅವರನ್ನು ಗೌರವಿಸುವುದು ನಮ್ಮ ಕರ್ತವ್ಯ. ಭಾವಸಾರ ಕ್ಷತ್ರಿಯ ಸಮಾಜ ಈ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾದ ಯುವ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಡಾ.ಯೋಗೇಂದ್ರ ವರ್ಣಿ, ಭಾವಸಾರ ಕ್ಷತ್ರಿಯ ಸಮುದಾಯದಲ್ಲಿ ಒಗ್ಗಟ್ಟು ಪ್ರದರ್ಶನ ಆಗುತ್ತಿಲ್ಲ. ಜಾತಿ ಹೆಸರನ್ನು ಬಳಸಿಕೊಂಡು ಉನ್ನತ ಹುದ್ದೆಗಳನ್ನು ಅಲಂಕರಿಸುವರೇ ಹೊರತು, ಆ ಬಳಿಕ ಸಮುದಾಯದ ಏಳಿಗೆಗಾಗಿ ಯಾರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.</p>.<p>ರಾಜಸ್ತಾನ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಸಮುದಾಯದವರು ತಮ್ಮ ಹೆಸರಿನ ಮುಂದೆ ಭಾವಸಾರ ಎಂದು ಸೇರಿಸಿಕೊಂಡು ಒಗ್ಗಟ್ಟು ಪ್ರದರ್ಶಿಸುವರು. ಆದರೆ ಕರ್ನಾಟಕದಲ್ಲಿ ಹಲವರು ಹೆಸರಿನ ಮುಂದೆ ಸಮುದಾಯದ ಹೆಸರು ಸೇರಿಸಲು ಮುಜುಗರಪಡುವರು ಎಂದರು.</p>.<p><strong>ಒತ್ತಾಯ:</strong> ಭಾವಸಾರ ಕ್ಷತ್ರಿಯ ಸಮುದಾಯದ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಟೈಲರ್ಸ್ ಫೆಡರೇಷನ್ ಸ್ಥಾಪಿಸುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದ್ದರು. ಅದನ್ನು ಈಡೇರಿಸಲು ಸರ್ಕಾರ ಮುಂದಾಗಬೇಕು ಎಂದು ಶಾಸಕ ಎಲ್.ನಾಗೇಂದ್ರ ಮೂಲಕ ಒತ್ತಾಯಿಸಿದರು.</p>.<p>ಭಾವಸಾರ ಕ್ಷತ್ರಿಯ ಮಂಡಳಿಯ ಮೈಸೂರು ವಿಭಾಗದ ಅಧ್ಯಕ್ಷ ಆರ್.ವಿ.ಶಿವಾಜಿರಾವ್ ರಾಂಪೊರೆ, ಭಾವಸಾರ ಕ್ಷತ್ರಿಯ ಮಂಡಳಿಯ ನಿರ್ದೇಶಕ ರಮೇಶ್ ರಾಂಪೊರೆ, ದಿ.ಭಾವಸಾರ ಕ್ಷತ್ರಿಯ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಸತ್ಯನಾರಾಯಣ್ ಸುಲಾಖೆ,ಎಐಬಿಕೆ ಮಹಾಸಭಾದ ಯುವಪರಿಷತ್ನ ರಾಜ್ಯಾಧ್ಯಕ್ಷ ಎನ್.ಗಣೇಶ್ ಲಾಳಿಗೆ, ನಗರಪಾಲಿಕೆ ಸದಸ್ಯರಾದ ಶೋಭಾ ಸುನಿಲ್, ರಂಗಸ್ವಾಮಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾ ವತಿಯಿಂದ ಭಾನುವಾರ ಗುರುವಂದನಾ ಕಾರ್ಯಕ್ರಮದ ಏರ್ಪಡಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯದ ಹಲವರನ್ನು ಇದೇ ವೇಳೆ ಸನ್ಮಾನಿಸಲಾಯಿತು.</p>.<p>ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಕರಾದ ಅನಿಲ್ ಕುಮಾರ್ ರಾಂಪೊರೆ, ಸುಮನ್ ಟಿಕಾರೆ, ದಿವ್ಯಾ ಲೋಕರೆ, ಭವಾನಿ ರಾಂಪೊರೆ, ನಾಗಲಕ್ಷ್ಮಿ ವಾದೋನೆ, ಮಮತಾ ವಾದೋನೆ, ದೇವರಾಜು ಪಿಸ್ಸೆ, ಜಿ.ಸುಮತಿ, ವಿನಕ ಕೃಷ್ಣ, ವಿನಾಯಕ ಅವರನ್ನು ಗೌರವಿಸಲಾಯಿತು.</p>.<p>ಶಾಸಕ ಎಲ್.ನಾಗೇಂದ್ರ ಮಾತನಾಡಿ, ಬದುಕಿಗೆ ದಾರಿ ತೋರುವವರೆಲ್ಲರೂ ಗುರುಗಳೇ ಆಗಿದ್ದಾರೆ. ಇಂತಹ ಹಲವರು ನಮ್ಮ ಸುತ್ತುಮುತ್ತ ಇದ್ದಾರೆ. ಅವರನ್ನು ಗೌರವಿಸುವುದು ನಮ್ಮ ಕರ್ತವ್ಯ. ಭಾವಸಾರ ಕ್ಷತ್ರಿಯ ಸಮಾಜ ಈ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾದ ಯುವ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಡಾ.ಯೋಗೇಂದ್ರ ವರ್ಣಿ, ಭಾವಸಾರ ಕ್ಷತ್ರಿಯ ಸಮುದಾಯದಲ್ಲಿ ಒಗ್ಗಟ್ಟು ಪ್ರದರ್ಶನ ಆಗುತ್ತಿಲ್ಲ. ಜಾತಿ ಹೆಸರನ್ನು ಬಳಸಿಕೊಂಡು ಉನ್ನತ ಹುದ್ದೆಗಳನ್ನು ಅಲಂಕರಿಸುವರೇ ಹೊರತು, ಆ ಬಳಿಕ ಸಮುದಾಯದ ಏಳಿಗೆಗಾಗಿ ಯಾರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.</p>.<p>ರಾಜಸ್ತಾನ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಸಮುದಾಯದವರು ತಮ್ಮ ಹೆಸರಿನ ಮುಂದೆ ಭಾವಸಾರ ಎಂದು ಸೇರಿಸಿಕೊಂಡು ಒಗ್ಗಟ್ಟು ಪ್ರದರ್ಶಿಸುವರು. ಆದರೆ ಕರ್ನಾಟಕದಲ್ಲಿ ಹಲವರು ಹೆಸರಿನ ಮುಂದೆ ಸಮುದಾಯದ ಹೆಸರು ಸೇರಿಸಲು ಮುಜುಗರಪಡುವರು ಎಂದರು.</p>.<p><strong>ಒತ್ತಾಯ:</strong> ಭಾವಸಾರ ಕ್ಷತ್ರಿಯ ಸಮುದಾಯದ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಟೈಲರ್ಸ್ ಫೆಡರೇಷನ್ ಸ್ಥಾಪಿಸುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದ್ದರು. ಅದನ್ನು ಈಡೇರಿಸಲು ಸರ್ಕಾರ ಮುಂದಾಗಬೇಕು ಎಂದು ಶಾಸಕ ಎಲ್.ನಾಗೇಂದ್ರ ಮೂಲಕ ಒತ್ತಾಯಿಸಿದರು.</p>.<p>ಭಾವಸಾರ ಕ್ಷತ್ರಿಯ ಮಂಡಳಿಯ ಮೈಸೂರು ವಿಭಾಗದ ಅಧ್ಯಕ್ಷ ಆರ್.ವಿ.ಶಿವಾಜಿರಾವ್ ರಾಂಪೊರೆ, ಭಾವಸಾರ ಕ್ಷತ್ರಿಯ ಮಂಡಳಿಯ ನಿರ್ದೇಶಕ ರಮೇಶ್ ರಾಂಪೊರೆ, ದಿ.ಭಾವಸಾರ ಕ್ಷತ್ರಿಯ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಸತ್ಯನಾರಾಯಣ್ ಸುಲಾಖೆ,ಎಐಬಿಕೆ ಮಹಾಸಭಾದ ಯುವಪರಿಷತ್ನ ರಾಜ್ಯಾಧ್ಯಕ್ಷ ಎನ್.ಗಣೇಶ್ ಲಾಳಿಗೆ, ನಗರಪಾಲಿಕೆ ಸದಸ್ಯರಾದ ಶೋಭಾ ಸುನಿಲ್, ರಂಗಸ್ವಾಮಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>