‘ಮೈಸೂರು, ಚಿತ್ರದುರ್ಗ, ವಿಜಯಪುರ, ತುಮಕೂರು, ಧಾರವಾಡ ಮೊದಲಾದ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಬೆಳೆಗಳು ಅದರಲ್ಲೂ ತೋಟಗಾರಿಕೆ ಬೆಳೆಗೆ ಹೆಚ್ಚು ಹಾನಿಯಾಗಿದೆ. ಮೈಸೂರು, ಬೆಂಗಳೂರು ಮೊದಲಾದ ನಗರ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆಯಾಗಿದೆ. ಆದರೆ, ಸರ್ಕಾರ ಕೇವಲ ಹೇಳಿಕೆಗಳಿಗೆ ಸೀಮಿತವಾಗಿದೆ. ಮಳೆಗಾಲಕ್ಕೆ ಬೇಕಾದ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ’ ಎಂದು ಆರೋಪಿಸಿದರು.