ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಕನಿಷ್ಠ ₹ 40 ಕೋಟಿಯಿಂದ ₹ 1,700 ಕೋಟಿಯವರೆಗೆ ಆಸ್ತಿ ಘೋಷಿಸಿಕೊಂಡವರಿಗೆ ಟಿಕೆಟ್ ನೀಡಿರುವ ಮುಖಂಡರಿಗೆ ಚುನಾವಣೆ ದಿಕ್ಕೆಡಿಸುತ್ತಿದ್ದೇವೆ ಎಂದು ಅನ್ನಿಸುವುದಿಲ್ಲವೆ? ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಜನರಿಗೆ ನೀಡುತ್ತಿರುವ ಸಂದೇಶವಾದರೂ ಏನು’ ಎಂದು ಪ್ರಶ್ನಿಸಿದರು.