<p><strong>ಮೈಸೂರು:</strong> ‘ಅರಮನೆ ಮಂಡಳಿ ಸರ್ಕಾರಿ ಸಂಸ್ಥೆಯಾಗಿದ್ದು, ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ಸರ್ಕಾರವು ಕೂಡಲೇ ನಿಯೋಜಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆಗ್ರಹಿಸಿದರು. </p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮೈಸೂರು ಅರಮನೆ ಕಾಯ್ದೆ–1998ರ ಪ್ರಕಾರ ಅರಮನೆ ನಿರ್ವಹಣೆಗೆ ಆಡಳಿತ ಮಂಡಳಿಯನ್ನು ಸರ್ಕಾರ ರಚಿಸಿದೆ. ಉಪನಿರ್ದೇಶಕ ಹಾಗೂ 113 ಸಿಬ್ಬಂದಿ ನೇಮಿಸಿದೆ. ಆದರೆ, ಆಡಳಿತಾಧಿಕಾರಿಯನ್ನು ಇದುವರೆಗೂ ನೇಮಿಸಿಲ್ಲ’ ಎಂದು ದೂರಿದರು. </p>.<p>‘ಮಾಹಿತಿ ಹಕ್ಕು ಅಧಿನಿಯಮ–2005ರ ವ್ಯಾಪ್ತಿಗೆ ಮಂಡಳಿಯು ಬರುತ್ತದೆ. ಆದರೂ, ಆಡಳಿತ ಮಂಡಳಿಯು ಸ್ವಾಯತ್ತ ಸಂಸ್ಥೆಯೆಂದು ಅಲ್ಲಿನ ಅಧಿಕಾರಿಗಳು ಕಳೆದ 14 ವರ್ಷದಿಂದ ಪ್ರತಿಪಾದಿಸುತ್ತಾ ಬಂದಿದ್ದಾರೆ. ಅಲ್ಲಿನ ಅವ್ಯವಹಾರ, ಅಕ್ರಮದ ಬಗ್ಗೆ ತನಿಖೆ ಆಗುತ್ತಿಲ್ಲ. ಲೂಟಿಯಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ’ ಎಂದು ಆರೋಪಿಸಿದರು. </p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಎಲ್ಲೆಡೆ ತಮಗೆ ಬೇಕಾದವರನ್ನೇ ತುಂಬಲಾಗಿದೆ. ಅರಮನೆಯನ್ನು ಅಡವಿಟ್ಟರೂ ಅವರಿಗೆ ಚಿಂತೆಯಿಲ್ಲ’ ಎಂದರು. </p>.<p>‘ಜೂನ್ 26ರಂದು ದಸರಾ ಉನ್ನತ ಮಟ್ಟದ ಸಭೆ ಇದ್ದು, ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನೇ ಗಣನೆಗೆ ತೆಗೆದುಕೊಳ್ಳುವುದಿಲ್ಲ. ಪ್ರವಾಸಿಗರ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಅರಮನೆ ಕಡೆಗೆ ಗಮನ ಹರಿಸಬೇಕು. ಇಲ್ಲವೇ ರಾಜವಂಶಸ್ಥರಿಗೆ ವಹಿಸಿಬಿಡಲಿ’ ಎಂದು ಹೇಳಿದರು. </p>.<p><strong>‘ಜಿಟಿಡಿ ಪ್ರಾಬಲ್ಯ ತಗ್ಗಿಸುವ ಉದ್ದೇಶ’</strong> </p><p>‘ಶಾಸಕರಾದ ಜಿ.ಟಿ. ದೇವೇಗೌಡ ಜಿ.ಡಿ.ಹರೀಶ್ ಗೌಡ ಸಹಕಾರ ಕ್ಷೇತ್ರದಲ್ಲಿ ಮೊದಲಿನಿಂದಲೂ ಇದ್ದಾರೆ. ಸಹಕಾರ ಕ್ಷೇತ್ರದಲ್ಲಿ ಅವರ ಹಿಡಿತ ತಪ್ಪಿಸುವುದಕ್ಕಾಗಿ ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಗೆ ಕೆಲ ಶಾಸಕರು ಸ್ಪರ್ಧಿಸುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ವಿಶ್ವನಾಥ್ ಉತ್ತರಿಸಿದರು. </p><p>‘ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರದ ಬಗ್ಗೆ ಶಾಸಕ ಬಿ.ಆರ್.ಪಾಟೀಲ್ ಧ್ವನಿ ಎತ್ತಿದ್ದಾರೆ. ಶಾಸಕ ರಾಜು ಕಾಗೆ ಕೂಡ ಮಾತನಾಡಿದ್ದಾರೆ. ಆಶ್ರಯ ಸಮಿತಿಗೆ ಗ್ರಾಮಸಭೆ ಮೂಲಕ ಆಯ್ಕೆ ಆಗಬೇಕು. ಶಾಸಕರ ಹಂತದಲ್ಲೇ ಮನೆಗಳು ಮಾರಾಟ ಆಗುತ್ತಿವೆ’ ಎಂದು ವಿಶ್ವನಾಥ್ ಆರೋಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಅರಮನೆ ಮಂಡಳಿ ಸರ್ಕಾರಿ ಸಂಸ್ಥೆಯಾಗಿದ್ದು, ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ಸರ್ಕಾರವು ಕೂಡಲೇ ನಿಯೋಜಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆಗ್ರಹಿಸಿದರು. </p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮೈಸೂರು ಅರಮನೆ ಕಾಯ್ದೆ–1998ರ ಪ್ರಕಾರ ಅರಮನೆ ನಿರ್ವಹಣೆಗೆ ಆಡಳಿತ ಮಂಡಳಿಯನ್ನು ಸರ್ಕಾರ ರಚಿಸಿದೆ. ಉಪನಿರ್ದೇಶಕ ಹಾಗೂ 113 ಸಿಬ್ಬಂದಿ ನೇಮಿಸಿದೆ. ಆದರೆ, ಆಡಳಿತಾಧಿಕಾರಿಯನ್ನು ಇದುವರೆಗೂ ನೇಮಿಸಿಲ್ಲ’ ಎಂದು ದೂರಿದರು. </p>.<p>‘ಮಾಹಿತಿ ಹಕ್ಕು ಅಧಿನಿಯಮ–2005ರ ವ್ಯಾಪ್ತಿಗೆ ಮಂಡಳಿಯು ಬರುತ್ತದೆ. ಆದರೂ, ಆಡಳಿತ ಮಂಡಳಿಯು ಸ್ವಾಯತ್ತ ಸಂಸ್ಥೆಯೆಂದು ಅಲ್ಲಿನ ಅಧಿಕಾರಿಗಳು ಕಳೆದ 14 ವರ್ಷದಿಂದ ಪ್ರತಿಪಾದಿಸುತ್ತಾ ಬಂದಿದ್ದಾರೆ. ಅಲ್ಲಿನ ಅವ್ಯವಹಾರ, ಅಕ್ರಮದ ಬಗ್ಗೆ ತನಿಖೆ ಆಗುತ್ತಿಲ್ಲ. ಲೂಟಿಯಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ’ ಎಂದು ಆರೋಪಿಸಿದರು. </p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಎಲ್ಲೆಡೆ ತಮಗೆ ಬೇಕಾದವರನ್ನೇ ತುಂಬಲಾಗಿದೆ. ಅರಮನೆಯನ್ನು ಅಡವಿಟ್ಟರೂ ಅವರಿಗೆ ಚಿಂತೆಯಿಲ್ಲ’ ಎಂದರು. </p>.<p>‘ಜೂನ್ 26ರಂದು ದಸರಾ ಉನ್ನತ ಮಟ್ಟದ ಸಭೆ ಇದ್ದು, ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನೇ ಗಣನೆಗೆ ತೆಗೆದುಕೊಳ್ಳುವುದಿಲ್ಲ. ಪ್ರವಾಸಿಗರ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಅರಮನೆ ಕಡೆಗೆ ಗಮನ ಹರಿಸಬೇಕು. ಇಲ್ಲವೇ ರಾಜವಂಶಸ್ಥರಿಗೆ ವಹಿಸಿಬಿಡಲಿ’ ಎಂದು ಹೇಳಿದರು. </p>.<p><strong>‘ಜಿಟಿಡಿ ಪ್ರಾಬಲ್ಯ ತಗ್ಗಿಸುವ ಉದ್ದೇಶ’</strong> </p><p>‘ಶಾಸಕರಾದ ಜಿ.ಟಿ. ದೇವೇಗೌಡ ಜಿ.ಡಿ.ಹರೀಶ್ ಗೌಡ ಸಹಕಾರ ಕ್ಷೇತ್ರದಲ್ಲಿ ಮೊದಲಿನಿಂದಲೂ ಇದ್ದಾರೆ. ಸಹಕಾರ ಕ್ಷೇತ್ರದಲ್ಲಿ ಅವರ ಹಿಡಿತ ತಪ್ಪಿಸುವುದಕ್ಕಾಗಿ ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಗೆ ಕೆಲ ಶಾಸಕರು ಸ್ಪರ್ಧಿಸುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ವಿಶ್ವನಾಥ್ ಉತ್ತರಿಸಿದರು. </p><p>‘ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರದ ಬಗ್ಗೆ ಶಾಸಕ ಬಿ.ಆರ್.ಪಾಟೀಲ್ ಧ್ವನಿ ಎತ್ತಿದ್ದಾರೆ. ಶಾಸಕ ರಾಜು ಕಾಗೆ ಕೂಡ ಮಾತನಾಡಿದ್ದಾರೆ. ಆಶ್ರಯ ಸಮಿತಿಗೆ ಗ್ರಾಮಸಭೆ ಮೂಲಕ ಆಯ್ಕೆ ಆಗಬೇಕು. ಶಾಸಕರ ಹಂತದಲ್ಲೇ ಮನೆಗಳು ಮಾರಾಟ ಆಗುತ್ತಿವೆ’ ಎಂದು ವಿಶ್ವನಾಥ್ ಆರೋಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>