<p><strong>ಮೈಸೂರು:</strong> ‘ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕ ದಿವಾಳಿಯಾಗಿದೆ. ಕೂಡಲೇ ಶ್ವೇತಪತ್ರ ಹೊರಡಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆಗ್ರಹಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾದ ಹಣ ಎಷ್ಟು ಎಂಬುದನ್ನು ಜನತೆಯ ಮುಂದಿಡಬೇಕು’ ಎಂದರು.</p>.<p>‘ಆರ್ಥಿಕ ನೀತಿ ದುರ್ಬಲವಾಗಿದೆ. ಮಹಿಳೆಯರಿಗೆ ಉಚಿತ್ರ ಪ್ರಯಾಣ ಸೌಲಭ್ಯ ಕಲ್ಪಿಸಿದರೂ ಕೆಎಸ್ಆರ್ಟಿಸಿ ಲಾಭದಲ್ಲಿದೆ ಎನ್ನುತ್ತಾರೆ. ಜನರಿಗೆ ಟೋಪಿ ಹಾಕಲಾಗುತ್ತಿದೆ. ಹಣವಿಲ್ಲದೇ ಸರ್ಕಾರಿ ಕಟ್ಟಡಗಳನ್ನು ಅಡವಿಡಲಾಗುತ್ತಿದೆ. ನೀರು, ವಿದ್ಯುತ್, ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ’ ಎಂದು ಆರೋಪಿಸಿದರು. </p>.<p>‘ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿತ್ತು. ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಪೋಷಕರು ಖಾಸಗಿ ಶಾಲೆಗಳಿಗೆ ದುಬಾರಿ ಶುಲ್ಕ ಕಟ್ಟಿ ಸುಸ್ತಾಗಿದ್ದಾರೆ. 1ರಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಜನ ಸಾಲ ಮಾಡಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ. ಯಶಸ್ವಿನಿ ಯೋಜನೆಯನ್ನು ಸ್ಥಗಿತಗೊಳಿಸಿರುವ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ’ ಎಂದು ವ್ಯಂಗ್ಯವಾಡಿದರು.</p>.<p>‘2014ರ ಲೋಕಸಭಾ ಚುನಾವಣೆ ವೇಳೆ ನಟ ದರ್ಶನ್ ನನ್ನ ಪರ ಪ್ರಚಾರ ಮಾಡಿದ್ದರು. ಆಗ ಅವರ ತಾಯಿ ಕಾಂಗ್ರೆಸ್ನಲ್ಲಿದ್ದರು. ದರ್ಶನ್ ಬಗ್ಗೆ ಮಾತನಾಡಿ ನಾನೇಕೆ ಸಾಕ್ಷಿ ಹೇಳಲು ಹೋಗಿ ನಿಲ್ಲಬೇಕು. ನಮ್ಮ ನಟರಿಗೆ ರಾಜ್ಕುಮಾರ್ ಮಾದರಿಯಾಗಬೇಕಿತ್ತು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕ ದಿವಾಳಿಯಾಗಿದೆ. ಕೂಡಲೇ ಶ್ವೇತಪತ್ರ ಹೊರಡಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆಗ್ರಹಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾದ ಹಣ ಎಷ್ಟು ಎಂಬುದನ್ನು ಜನತೆಯ ಮುಂದಿಡಬೇಕು’ ಎಂದರು.</p>.<p>‘ಆರ್ಥಿಕ ನೀತಿ ದುರ್ಬಲವಾಗಿದೆ. ಮಹಿಳೆಯರಿಗೆ ಉಚಿತ್ರ ಪ್ರಯಾಣ ಸೌಲಭ್ಯ ಕಲ್ಪಿಸಿದರೂ ಕೆಎಸ್ಆರ್ಟಿಸಿ ಲಾಭದಲ್ಲಿದೆ ಎನ್ನುತ್ತಾರೆ. ಜನರಿಗೆ ಟೋಪಿ ಹಾಕಲಾಗುತ್ತಿದೆ. ಹಣವಿಲ್ಲದೇ ಸರ್ಕಾರಿ ಕಟ್ಟಡಗಳನ್ನು ಅಡವಿಡಲಾಗುತ್ತಿದೆ. ನೀರು, ವಿದ್ಯುತ್, ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ’ ಎಂದು ಆರೋಪಿಸಿದರು. </p>.<p>‘ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿತ್ತು. ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಪೋಷಕರು ಖಾಸಗಿ ಶಾಲೆಗಳಿಗೆ ದುಬಾರಿ ಶುಲ್ಕ ಕಟ್ಟಿ ಸುಸ್ತಾಗಿದ್ದಾರೆ. 1ರಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಜನ ಸಾಲ ಮಾಡಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ. ಯಶಸ್ವಿನಿ ಯೋಜನೆಯನ್ನು ಸ್ಥಗಿತಗೊಳಿಸಿರುವ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ’ ಎಂದು ವ್ಯಂಗ್ಯವಾಡಿದರು.</p>.<p>‘2014ರ ಲೋಕಸಭಾ ಚುನಾವಣೆ ವೇಳೆ ನಟ ದರ್ಶನ್ ನನ್ನ ಪರ ಪ್ರಚಾರ ಮಾಡಿದ್ದರು. ಆಗ ಅವರ ತಾಯಿ ಕಾಂಗ್ರೆಸ್ನಲ್ಲಿದ್ದರು. ದರ್ಶನ್ ಬಗ್ಗೆ ಮಾತನಾಡಿ ನಾನೇಕೆ ಸಾಕ್ಷಿ ಹೇಳಲು ಹೋಗಿ ನಿಲ್ಲಬೇಕು. ನಮ್ಮ ನಟರಿಗೆ ರಾಜ್ಕುಮಾರ್ ಮಾದರಿಯಾಗಬೇಕಿತ್ತು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>