<p><strong>ಮೈಸೂರು: </strong>‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ನ್ಯಾಯ ಕೊಡಿಸುವಂತೆ ಕೋರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಗೆ ಮನವಿ ಮಾಡಿರುವುದು ಸರಿಯಲ್ಲ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಆಯ್ಕೆ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದರಿಂದಲೇ ಸುಪ್ರೀಂಕೋರ್ಟ್ ನೇಮಕಾತಿಯನ್ನು ರದ್ದುಗೊಳಿಸಿದೆ. 362 ಮಂದಿ ಈ ತೀರ್ಪಿನ ವಿರುದ್ಧ ಒಬ್ಬ ರಾಜಕಾರಣಿಗೆ ಮೇಲ್ಮನವಿ ಸಲ್ಲಿಸುತ್ತಾರೆ. ಆ ರಾಜಕಾರಣಿ ಮುಖ್ಯಮಂತ್ರಿಗೆ ಪತ್ರ ಬರೆಯುತ್ತಾರೆ. ಅವರ ಪತ್ರ ಆಧರಿಸಿ ಕ್ರಮ ತೆಗೆದುಕೊಳ್ಳಲು ಕಡತ ಮಂಡಿಸುವಂತೆ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ (ಸಿಎಸ್) ಸೂಚಿಸುತ್ತಾರೆ. ಈ ದೇಶದಲ್ಲಿ ನ್ಯಾಯ ವ್ಯವಸ್ಥೆ ಎಲ್ಲಿಗೆ ತಲುಪಿದೆ’ ಎಂದು ಪ್ರಶ್ನಿಸಿದರು.</p>.<p>‘ಬಸವರಾಜ ಬೊಮ್ಮಾಯಿ ಅವರೇ, ಇಂತಹ ಮನವಿಗಳಿಗೆ ಸೊಪ್ಪು ಹಾಕಬೇಡಿ. ನ್ಯಾಯಾಲಯದಲ್ಲಿ ರಾಜ್ಯಕ್ಕೆ ಮತ್ತೆ ಫಜೀತಿ ಎದುರಾಗಬಹುದು. ಅದಕ್ಕೆ ಅವಕಾಶ ನೀಡಬೇಡಿ. ಅಸಾಂವಿಧಾನಿಕವಾಗಿ ಅಯ್ಕೆಯಾದವರಿಗೆ ನ್ಯಾಯ ಒದಗಿಸಲು ಮುಂದಾದರೆ, ಅದು ಈ ರಾಜ್ಯಕ್ಕೆ ಮಾಡುವ ದ್ರೋಹ’ ಎಂದರು.</p>.<p>‘ಪ್ರಧಾನಿ ಆಗಿದ್ದಂತಹ ದೇವೇಗೌಡ ಅವರ ಮೇಲೆ ನನಗೆ ಅಪಾರ ಗೌರವ ಇದೆ. ಆದರೆ ಅಸಾಂವಿಧಾನಿಕವಾಗಿ ಆಯ್ಕೆಯಾದವರ ಪರ ನಿಂತದ್ದು ಸರಿಯಲ್ಲ. ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪಿಗೆ ಬೆಲೆಯಿಲ್ಲವೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ನ್ಯಾಯ ಕೊಡಿಸುವಂತೆ ಕೋರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಗೆ ಮನವಿ ಮಾಡಿರುವುದು ಸರಿಯಲ್ಲ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಆಯ್ಕೆ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದರಿಂದಲೇ ಸುಪ್ರೀಂಕೋರ್ಟ್ ನೇಮಕಾತಿಯನ್ನು ರದ್ದುಗೊಳಿಸಿದೆ. 362 ಮಂದಿ ಈ ತೀರ್ಪಿನ ವಿರುದ್ಧ ಒಬ್ಬ ರಾಜಕಾರಣಿಗೆ ಮೇಲ್ಮನವಿ ಸಲ್ಲಿಸುತ್ತಾರೆ. ಆ ರಾಜಕಾರಣಿ ಮುಖ್ಯಮಂತ್ರಿಗೆ ಪತ್ರ ಬರೆಯುತ್ತಾರೆ. ಅವರ ಪತ್ರ ಆಧರಿಸಿ ಕ್ರಮ ತೆಗೆದುಕೊಳ್ಳಲು ಕಡತ ಮಂಡಿಸುವಂತೆ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ (ಸಿಎಸ್) ಸೂಚಿಸುತ್ತಾರೆ. ಈ ದೇಶದಲ್ಲಿ ನ್ಯಾಯ ವ್ಯವಸ್ಥೆ ಎಲ್ಲಿಗೆ ತಲುಪಿದೆ’ ಎಂದು ಪ್ರಶ್ನಿಸಿದರು.</p>.<p>‘ಬಸವರಾಜ ಬೊಮ್ಮಾಯಿ ಅವರೇ, ಇಂತಹ ಮನವಿಗಳಿಗೆ ಸೊಪ್ಪು ಹಾಕಬೇಡಿ. ನ್ಯಾಯಾಲಯದಲ್ಲಿ ರಾಜ್ಯಕ್ಕೆ ಮತ್ತೆ ಫಜೀತಿ ಎದುರಾಗಬಹುದು. ಅದಕ್ಕೆ ಅವಕಾಶ ನೀಡಬೇಡಿ. ಅಸಾಂವಿಧಾನಿಕವಾಗಿ ಅಯ್ಕೆಯಾದವರಿಗೆ ನ್ಯಾಯ ಒದಗಿಸಲು ಮುಂದಾದರೆ, ಅದು ಈ ರಾಜ್ಯಕ್ಕೆ ಮಾಡುವ ದ್ರೋಹ’ ಎಂದರು.</p>.<p>‘ಪ್ರಧಾನಿ ಆಗಿದ್ದಂತಹ ದೇವೇಗೌಡ ಅವರ ಮೇಲೆ ನನಗೆ ಅಪಾರ ಗೌರವ ಇದೆ. ಆದರೆ ಅಸಾಂವಿಧಾನಿಕವಾಗಿ ಆಯ್ಕೆಯಾದವರ ಪರ ನಿಂತದ್ದು ಸರಿಯಲ್ಲ. ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪಿಗೆ ಬೆಲೆಯಿಲ್ಲವೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>