<p><strong>ಹಂಪಾಪುರ</strong>: ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಬೆಳಗನಹಳ್ಳಿಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ.</p>.<p>ಗ್ರಾಮದ ದಿಲೀಪ್ ಅವರ ಎರಡು ಎಕರೆ ಪ್ರದೇಶದ ಮುಸುಕಿನ ಜೋಳ ನೆಲಕಚ್ಚಿದೆ. ಭುಜಂಗಪ್ಪ ಅವರ ಬಾಳೆ ಬೆಳೆ ಹಾನಿಯಾಗಿದೆ.</p>.<p>‘ಉತ್ತಮ ಇಳುವರಿ ನಿರೀಕ್ಷಿಸಿದ್ದೆ. ಒಂದು ತಿಂಗಳಲ್ಲಿ ಕಟಾವಿಗೆ ಬರುತ್ತಿತ್ತು. ಬಿರುಗಾಳಿಗೆ ಬಾಳೆ ಸಂಪೂರ್ಣ ನೆಲಕ್ಕುರುಳಿದೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ’ ಎಂದು ಭುಜಂಗಪ್ಪ ನೊಂದು ನುಡಿದರು.</p>.<p>ಸಂಬಂದಪಟ್ಟ ಅಧಿಕಾರಿಗಳು ಮಳೆಯಿಂದ ಆಗಿರುವ ಬೆಳೆ ಹಾನಿ ಪ್ರದೇಶಗಳ ಪರಿಶೀಲನೆ ನಡೆಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರಾಮಾರಾಧ್ಯ ಅವರ ಕೊಟ್ಟಿಗೆ ಕುಸಿದಿದೆ. ಮಳೆಯಿಂದಾಗಿ ಚರಂಡಿ ನೀರು ಶಾಲೆ ರಸ್ತೆಯ ಪಕ್ಕದ ರಸ್ತೆ ಮೇಲೆ ಹರಿದಿದ್ದು, ಡಾಂಬರ್ ಕಿತ್ತು ಹೋಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಡಕ್ ನಿರ್ಮಿಸಬೇಕು ಎಂದು ಗ್ರಾಮದ ಪ್ರಭು ಮನವಿ ಮಾಡಿದ್ದಾರೆ.</p>.<p>ಬಿರುಗಾಳಿಗೆ ಹೊಸ ತೊರವಳ್ಳಿಯಲ್ಲಿ ವಿದ್ಯುತ್ ಕಂಬ ಮುರಿದಿದ್ದು, ವಿದ್ಯುತ್ ಸ್ಥಗಿತಗೊಂಡಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-38-1875930193</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂಪಾಪುರ</strong>: ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಬೆಳಗನಹಳ್ಳಿಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ.</p>.<p>ಗ್ರಾಮದ ದಿಲೀಪ್ ಅವರ ಎರಡು ಎಕರೆ ಪ್ರದೇಶದ ಮುಸುಕಿನ ಜೋಳ ನೆಲಕಚ್ಚಿದೆ. ಭುಜಂಗಪ್ಪ ಅವರ ಬಾಳೆ ಬೆಳೆ ಹಾನಿಯಾಗಿದೆ.</p>.<p>‘ಉತ್ತಮ ಇಳುವರಿ ನಿರೀಕ್ಷಿಸಿದ್ದೆ. ಒಂದು ತಿಂಗಳಲ್ಲಿ ಕಟಾವಿಗೆ ಬರುತ್ತಿತ್ತು. ಬಿರುಗಾಳಿಗೆ ಬಾಳೆ ಸಂಪೂರ್ಣ ನೆಲಕ್ಕುರುಳಿದೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ’ ಎಂದು ಭುಜಂಗಪ್ಪ ನೊಂದು ನುಡಿದರು.</p>.<p>ಸಂಬಂದಪಟ್ಟ ಅಧಿಕಾರಿಗಳು ಮಳೆಯಿಂದ ಆಗಿರುವ ಬೆಳೆ ಹಾನಿ ಪ್ರದೇಶಗಳ ಪರಿಶೀಲನೆ ನಡೆಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರಾಮಾರಾಧ್ಯ ಅವರ ಕೊಟ್ಟಿಗೆ ಕುಸಿದಿದೆ. ಮಳೆಯಿಂದಾಗಿ ಚರಂಡಿ ನೀರು ಶಾಲೆ ರಸ್ತೆಯ ಪಕ್ಕದ ರಸ್ತೆ ಮೇಲೆ ಹರಿದಿದ್ದು, ಡಾಂಬರ್ ಕಿತ್ತು ಹೋಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಡಕ್ ನಿರ್ಮಿಸಬೇಕು ಎಂದು ಗ್ರಾಮದ ಪ್ರಭು ಮನವಿ ಮಾಡಿದ್ದಾರೆ.</p>.<p>ಬಿರುಗಾಳಿಗೆ ಹೊಸ ತೊರವಳ್ಳಿಯಲ್ಲಿ ವಿದ್ಯುತ್ ಕಂಬ ಮುರಿದಿದ್ದು, ವಿದ್ಯುತ್ ಸ್ಥಗಿತಗೊಂಡಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-38-1875930193</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>