<p>ಹಂಪಾಪುರ: ಬಡವರು, ಅಸಹಾಯಕರಿಗೆ ವಾತ್ಸಲ್ಯ ಯೋಜನೆಯಡಿ ಮನೆ ಮತ್ತು ಮಾಸಾಶನ ನೀಡುವ ಮೂಲಕ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹಲವು ಕುಟುಂಬಗಳಿಗೆ ನೆರವಾಗುತ್ತಿದ್ದಾರೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಜಯಕುಮಾರ ನಾಗನಾಳ ತಿಳಿಸಿದರು.</p>.<p>ಸಮೀಪದ ಹೊಸಹೊಳಲು ಗ್ರಾಮದಲ್ಲಿ ವಾತ್ಸಲ್ಯ ಯೋಜನೆಯಲ್ಲಿ ನಿರ್ಮಿಸಿರುವ ಮನೆಯನ್ನು ಈಚೆಗೆ ಫಲಾನುಭವಿಗಳಾದ ರತ್ನಮ್ಮ, ಪುಟ್ಟಯ್ಯ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.</p>.<p>‘ಎಚ್.ಡಿ. ಕೋಟೆ ತಾಲ್ಲೂಕಿನಲ್ಲಿ 136 ಜನರಿಗೆ ಮಾಸಾಶನ ನೀಡಲಾಗುತ್ತಿದೆ. ಅದೇ ರೀತಿ ಅಸಹಾಯಕ ಕುಟುಂಬಗಳಿಗೆ ವಾತ್ಸಲ್ಯ ಯೋಜನೆಯಲ್ಲಿ ರಾಜ್ಯದಲ್ಲಿ 1100ಕ್ಕೂ ಹೆಚ್ಚು ಮನೆಗಳು ಹಾಗೂ ತಾಲ್ಲೂಕಿನಲ್ಲಿ 8 ಮನೆಗಳನ್ನು ಕಟ್ಟಿಸಿಕೊಡಲಾಗಿದೆ’ ಎಂದು ತಿಳಿಸಿದರು.</p>.<p>ಹೇಮಾವತಿ ವಿ. ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ ಮಾಸಾಶನ ಫಲಾನುಭವಿಗಳ ಮನೆಗಳಿಗೆ ಹಣ್ಣು ವಿತರಿಸಲಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದರು.</p>.<p>ತಾಲ್ಲೂಕಿನ ಅಂತರಸಂತೆ ವಲಯದ ಮಹಿಳೆಯರು ಯೋಜನೆಯಡಿ ಪಡೆದಸಾಲವನ್ನು ಸಮರ್ಪಕವಾಗಿ ಬಳಸಿಕೊಂಡು, ಮರುಪಾವತಿ ಮಾಡುವಲ್ಲಿ ಮುಂದಾಗಿದ್ದಾರೆ ಎಂದು ಹೇಳಿದರು.</p>.<p>ಒಕ್ಕೂಟದ ಅಧ್ಯಕ್ಷ ಟಿ. ಮಂಜು, ‘ಧರ್ಮಸ್ಥಳ ಸಂಸ್ಥೆಯಿಂದ ಜನಪರ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಗ್ರಾಮದಲ್ಲಿ ನಮ್ಮ ಊರು ನಮ್ಮ ಕೆರೆ ಯೋಜನೆಯಲ್ಲಿ ಕೆರೆ ಹೂಳು ತೆಗೆದು ಅಭಿವೃದ್ಧಿ ಮಾಡಿರುವುದರಿಂದ ರೈತರಿಗೆ ಅನುಕೂಲವಾಗಿದೆ’ ಎಂದರು.</p>.<p>ಧರ್ಮಸ್ಥಳ ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ಭಾಸ್ಕರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕನ್ನಡ ಪ್ರಮೋದ, ಮುಖಂಡರಾದ ಬೈರೇಗೌಡ, ಶಿವಪ್ರಕಾಶ್, ಪದ್ಮರಾಜು, ಮಹದೇವು, ಅಂತರಸಂತೆ ವಲಯ ಮೇಲ್ವಿಚಾರಕಿ ಶಾಂತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-38-526956637</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಂಪಾಪುರ: ಬಡವರು, ಅಸಹಾಯಕರಿಗೆ ವಾತ್ಸಲ್ಯ ಯೋಜನೆಯಡಿ ಮನೆ ಮತ್ತು ಮಾಸಾಶನ ನೀಡುವ ಮೂಲಕ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹಲವು ಕುಟುಂಬಗಳಿಗೆ ನೆರವಾಗುತ್ತಿದ್ದಾರೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಜಯಕುಮಾರ ನಾಗನಾಳ ತಿಳಿಸಿದರು.</p>.<p>ಸಮೀಪದ ಹೊಸಹೊಳಲು ಗ್ರಾಮದಲ್ಲಿ ವಾತ್ಸಲ್ಯ ಯೋಜನೆಯಲ್ಲಿ ನಿರ್ಮಿಸಿರುವ ಮನೆಯನ್ನು ಈಚೆಗೆ ಫಲಾನುಭವಿಗಳಾದ ರತ್ನಮ್ಮ, ಪುಟ್ಟಯ್ಯ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.</p>.<p>‘ಎಚ್.ಡಿ. ಕೋಟೆ ತಾಲ್ಲೂಕಿನಲ್ಲಿ 136 ಜನರಿಗೆ ಮಾಸಾಶನ ನೀಡಲಾಗುತ್ತಿದೆ. ಅದೇ ರೀತಿ ಅಸಹಾಯಕ ಕುಟುಂಬಗಳಿಗೆ ವಾತ್ಸಲ್ಯ ಯೋಜನೆಯಲ್ಲಿ ರಾಜ್ಯದಲ್ಲಿ 1100ಕ್ಕೂ ಹೆಚ್ಚು ಮನೆಗಳು ಹಾಗೂ ತಾಲ್ಲೂಕಿನಲ್ಲಿ 8 ಮನೆಗಳನ್ನು ಕಟ್ಟಿಸಿಕೊಡಲಾಗಿದೆ’ ಎಂದು ತಿಳಿಸಿದರು.</p>.<p>ಹೇಮಾವತಿ ವಿ. ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ ಮಾಸಾಶನ ಫಲಾನುಭವಿಗಳ ಮನೆಗಳಿಗೆ ಹಣ್ಣು ವಿತರಿಸಲಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದರು.</p>.<p>ತಾಲ್ಲೂಕಿನ ಅಂತರಸಂತೆ ವಲಯದ ಮಹಿಳೆಯರು ಯೋಜನೆಯಡಿ ಪಡೆದಸಾಲವನ್ನು ಸಮರ್ಪಕವಾಗಿ ಬಳಸಿಕೊಂಡು, ಮರುಪಾವತಿ ಮಾಡುವಲ್ಲಿ ಮುಂದಾಗಿದ್ದಾರೆ ಎಂದು ಹೇಳಿದರು.</p>.<p>ಒಕ್ಕೂಟದ ಅಧ್ಯಕ್ಷ ಟಿ. ಮಂಜು, ‘ಧರ್ಮಸ್ಥಳ ಸಂಸ್ಥೆಯಿಂದ ಜನಪರ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಗ್ರಾಮದಲ್ಲಿ ನಮ್ಮ ಊರು ನಮ್ಮ ಕೆರೆ ಯೋಜನೆಯಲ್ಲಿ ಕೆರೆ ಹೂಳು ತೆಗೆದು ಅಭಿವೃದ್ಧಿ ಮಾಡಿರುವುದರಿಂದ ರೈತರಿಗೆ ಅನುಕೂಲವಾಗಿದೆ’ ಎಂದರು.</p>.<p>ಧರ್ಮಸ್ಥಳ ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ಭಾಸ್ಕರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕನ್ನಡ ಪ್ರಮೋದ, ಮುಖಂಡರಾದ ಬೈರೇಗೌಡ, ಶಿವಪ್ರಕಾಶ್, ಪದ್ಮರಾಜು, ಮಹದೇವು, ಅಂತರಸಂತೆ ವಲಯ ಮೇಲ್ವಿಚಾರಕಿ ಶಾಂತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-38-526956637</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>