ಹನುಮ ಜಯಂತಿ ಪ್ರಯುಕ್ತ ಆಶ್ರಮದ ಆವರಣದಲ್ಲಿರುವ ಕಾರ್ಯಸಿದ್ಧಿ ಹನುಮಾನ್ ದೇವಸ್ಥಾನವನ್ನು ಮಾವಿನ ತೋರಣ, ಬಾಳೆಕಂದು ಹಾಗೂ ಪುಷ್ಪಮಾಲೆಗಳಿಂದ ಅಲಂಕರಿಸಲಾಗಿತ್ತು. ದೇವರ ಮೂರ್ತಿಗೆ ವಿವಿಧ ಅಭಿಷೇಕ, ಪೂಜಾ ಕಾರ್ಯಗಳು ನೆರವೇರಿದವು. ಹನುಮ ಮೂರ್ತಿಯನ್ನು ಬಾಳೆ ಹಣ್ಣುಗಳಿಂದ ಅಲಂಕರಿಸಿದ್ದು ಗಮನಸೆಳೆಯಿತು. ಗಣಪತಿ ಸಚ್ಚಿದಾನಂದ ಸ್ವಾಮೀಜಿ ದತ್ತಾತ್ರೇಯ ಸ್ವಾಮಿಗೆ ಪೂಜೆ ನೆರವೇರಿಸಿದರು. ಪ್ರಾರ್ಥನಾ ಮಂದಿರದಿಂದ ನಡೆದ ಮೆರವಣಿಗೆಯಲ್ಲಿ ಶ್ರೀಗಳು ಪಾಲ್ಗೊಂಡಿದ್ದರು. ವಿದೇಶಿ ಭಕ್ತರು ಸೇರಿದಂತೆ ನೂರಾರು ಮಂದಿ ಕೇಸರಿ ಬಾವುಟ ಹಿಡಿದು ಸಾಗಿದ್ದು ಗಮನಸೆಳೆಯಿತು.