<p><strong>ಮೈಸೂರು</strong>: ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಶ್ರೀಗಳ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಯಜ್ಞ ಕಾರ್ಯಕ್ರಮ ನಡೆಯಿತು.</p><p>ಬೆಳಿಗ್ಗೆ 10.50ಕ್ಕೆ ಪಾರಾಯಣಕ್ಕೆ ಶ್ರೀಗಳು ಚಾಲನೆ ನೀಡಿದರು.ನಂತರದಲ್ಲಿ ಸಾವಿರಾರು ಮಂದಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಣ ಮಾಡಿದರು. ಎಲ್ಲೆಡೆ ಕೇಸರಿ ಧ್ವಜಗಳು ಹಾರಿದವು. </p><p>ಆಶೀರ್ವಚನ ನೀಡಿದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ' ಸುಂದರಕಾಂಡ ಅಧ್ಯಾಯದ ಕುರಿತು ತುಳಸಿದಾಸರು 40 ಶ್ಲೋಕಗಳನ್ನು ರಚಿಸಿದ್ದು, ಅದರ ಪಾರಾಯಣದಿಂದ ಪುಣ್ಯ ಲಭಿಸುತ್ತದೆ. ಹನುಮನನ್ನು ಭಜಿಸಿದರೆ ಭಯ ದೂರವಾಗಿ ಶಕ್ತಿ ಸಿಗುತ್ತದೆ' ಎಂದರು.</p><p>ಅವಧೂತ ದತ್ತ ಪೀಠದ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿ ಮಾತನಾಡಿ ' </p><p>ಸುಂದರಕಾಂಡದಲ್ಲಿ ಹನುಮಂತನೇ ಹೇಳುವಂತೆ ಸ್ವಾಮಿಯ ದರ್ಶನದಿಂದ ಎಲ್ಲ ಕಷ್ಟಗಳು ದೂರ ಆಗುತ್ತವೆ. ಭಕ್ತರನ್ನು ಧರ್ಮ ಮಾರ್ಗದಲ್ಲಿ ಕೊಂಡೊಯ್ಯಲು ಗಣಪತಿ ಸಚ್ಚಿದಾನಂದ ಶ್ರೀಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ' ಎಂದರು.</p><p>ಎಲ್ಲ ಭಕ್ತರಿಗೆ ಹನುಮ ರಕ್ಷೆಯನ್ನು ವಿತರಿಸಲಾಯಿತು. </p><p>ವೇದಿಕೆಯಲ್ಲಿ ಆಂಜನೇಯಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಬೆಳಿಗ್ಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಶ್ರೀಗಳ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಯಜ್ಞ ಕಾರ್ಯಕ್ರಮ ನಡೆಯಿತು.</p><p>ಬೆಳಿಗ್ಗೆ 10.50ಕ್ಕೆ ಪಾರಾಯಣಕ್ಕೆ ಶ್ರೀಗಳು ಚಾಲನೆ ನೀಡಿದರು.ನಂತರದಲ್ಲಿ ಸಾವಿರಾರು ಮಂದಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಣ ಮಾಡಿದರು. ಎಲ್ಲೆಡೆ ಕೇಸರಿ ಧ್ವಜಗಳು ಹಾರಿದವು. </p><p>ಆಶೀರ್ವಚನ ನೀಡಿದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ' ಸುಂದರಕಾಂಡ ಅಧ್ಯಾಯದ ಕುರಿತು ತುಳಸಿದಾಸರು 40 ಶ್ಲೋಕಗಳನ್ನು ರಚಿಸಿದ್ದು, ಅದರ ಪಾರಾಯಣದಿಂದ ಪುಣ್ಯ ಲಭಿಸುತ್ತದೆ. ಹನುಮನನ್ನು ಭಜಿಸಿದರೆ ಭಯ ದೂರವಾಗಿ ಶಕ್ತಿ ಸಿಗುತ್ತದೆ' ಎಂದರು.</p><p>ಅವಧೂತ ದತ್ತ ಪೀಠದ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿ ಮಾತನಾಡಿ ' </p><p>ಸುಂದರಕಾಂಡದಲ್ಲಿ ಹನುಮಂತನೇ ಹೇಳುವಂತೆ ಸ್ವಾಮಿಯ ದರ್ಶನದಿಂದ ಎಲ್ಲ ಕಷ್ಟಗಳು ದೂರ ಆಗುತ್ತವೆ. ಭಕ್ತರನ್ನು ಧರ್ಮ ಮಾರ್ಗದಲ್ಲಿ ಕೊಂಡೊಯ್ಯಲು ಗಣಪತಿ ಸಚ್ಚಿದಾನಂದ ಶ್ರೀಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ' ಎಂದರು.</p><p>ಎಲ್ಲ ಭಕ್ತರಿಗೆ ಹನುಮ ರಕ್ಷೆಯನ್ನು ವಿತರಿಸಲಾಯಿತು. </p><p>ವೇದಿಕೆಯಲ್ಲಿ ಆಂಜನೇಯಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಬೆಳಿಗ್ಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>