<p><strong>ಮೈಸೂರು</strong>: ‘ರೈಲುಗಳ ಸಂಚಾರದ ಸಮಯ ಪಾಲನೆಯನ್ನು ಸುಧಾರಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆಯು ಹಾಸನ – ಸೋಲಾಪುರ ಎಕ್ಸ್ಪ್ರೆಸ್ ರೈಲಿನ (ರೈಲು ಸಂಖ್ಯೆ 11312) ವೇಳಾಪಟ್ಟಿಯನ್ನು ಪರಿಷ್ಕರಿಸಲು ನಿರ್ಧರಿಸಿದೆ. ಈ ಹೊಸ ವೇಳಾಪಟ್ಟಿಯು ಏ.1ರಿಂದ ಜಾರಿಗೆ ಬರಲಿದೆ’ ಎಂದು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.</p><p>‘ಪರಿಷ್ಕೃತ ವೇಳಾಪಟ್ಟಿಯಂತೆ, ಈ ರೈಲು ಹಾಸನ ನಿಲ್ದಾಣದಿಂದ ಸಂಜೆ 4.45ರ ಬದಲಿಗೆ 4.15ಕ್ಕೆ ನಿರ್ಗಮಿಸಲಿದೆ. ಮಾರ್ಗಮಧ್ಯದ ನಿಲ್ದಾಣಗಳಾದ ಶ್ರವಣಬೆಳಗೊಳ (4.53/4.54), ಬಿ.ಜಿ. ನಗರ (5.23/5.24), ಎಡೆಯೂರು (5.37/5.38), ಕುಣಿಗಲ್ (5.53/5.54) ಮತ್ತು ನೆಲಮಂಗಲ (6.25/6.26) ನಿಲ್ದಾಣಗಳಿಗೂ ಪರಿಷ್ಕೃತ ಸಮಯದ ಅನ್ವಯ ಆಗಮಿಸಿ, ನಿರ್ಗಮಿಸಲಿದೆ’ ಎಂದು ಮಾಹಿತಿ ನೀಡಿದ್ದಾರೆ.</p><p>‘ಯಶವಂತಪುರ ಮತ್ತು ಸೋಲಾಪುರ ನಿಲ್ದಾಣಗಳ ನಡುವಿನ ರೈಲು ಸಂಚಾರದ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಬದಲಾವಣೆ ಗಮನಿಸಬೇಕು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ರೈಲುಗಳ ಸಂಚಾರದ ಸಮಯ ಪಾಲನೆಯನ್ನು ಸುಧಾರಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆಯು ಹಾಸನ – ಸೋಲಾಪುರ ಎಕ್ಸ್ಪ್ರೆಸ್ ರೈಲಿನ (ರೈಲು ಸಂಖ್ಯೆ 11312) ವೇಳಾಪಟ್ಟಿಯನ್ನು ಪರಿಷ್ಕರಿಸಲು ನಿರ್ಧರಿಸಿದೆ. ಈ ಹೊಸ ವೇಳಾಪಟ್ಟಿಯು ಏ.1ರಿಂದ ಜಾರಿಗೆ ಬರಲಿದೆ’ ಎಂದು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.</p><p>‘ಪರಿಷ್ಕೃತ ವೇಳಾಪಟ್ಟಿಯಂತೆ, ಈ ರೈಲು ಹಾಸನ ನಿಲ್ದಾಣದಿಂದ ಸಂಜೆ 4.45ರ ಬದಲಿಗೆ 4.15ಕ್ಕೆ ನಿರ್ಗಮಿಸಲಿದೆ. ಮಾರ್ಗಮಧ್ಯದ ನಿಲ್ದಾಣಗಳಾದ ಶ್ರವಣಬೆಳಗೊಳ (4.53/4.54), ಬಿ.ಜಿ. ನಗರ (5.23/5.24), ಎಡೆಯೂರು (5.37/5.38), ಕುಣಿಗಲ್ (5.53/5.54) ಮತ್ತು ನೆಲಮಂಗಲ (6.25/6.26) ನಿಲ್ದಾಣಗಳಿಗೂ ಪರಿಷ್ಕೃತ ಸಮಯದ ಅನ್ವಯ ಆಗಮಿಸಿ, ನಿರ್ಗಮಿಸಲಿದೆ’ ಎಂದು ಮಾಹಿತಿ ನೀಡಿದ್ದಾರೆ.</p><p>‘ಯಶವಂತಪುರ ಮತ್ತು ಸೋಲಾಪುರ ನಿಲ್ದಾಣಗಳ ನಡುವಿನ ರೈಲು ಸಂಚಾರದ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಬದಲಾವಣೆ ಗಮನಿಸಬೇಕು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>