<p><strong>ಮೈಸೂರು</strong>: 'ಬಿಜೆಪಿ ಆಡಳಿತದಲ್ಲಿ ಬಳ್ಳಾರಿ ಹೇಗೆ ರಿಪಬ್ಲಿಕ್ ಆಗಿತ್ತು. ಸಂಪತ್ತು ಯಾರ ಕೈಯಲ್ಲಿ ಇತ್ತು ಎಂಬುದು ಗೊತ್ತಿದೆ. ಆರೋಪಿಗಳೇ ಪಾದಯಾತ್ರೆ- ಸಮಾವೇಶ ಮಾಡುತ್ತೇವೆ ಎನ್ನುವುದು ಹಾಸ್ಯಾಸ್ಪದ' ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಟೀಕಿಸಿದರು.</p><p>ಬಳ್ಳಾರಿ ಘಟನೆ ಖಂಡಿಸಿ ಬಿಜೆಪಿಯು ಪಾದಯಾತ್ರೆಗೆ ಸಿದ್ಧತೆ ನಡೆಸಿರುವ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು 'ರಾಜಕೀಯ ಉದ್ದೇಶಕ್ಕೆ ನಡೆಯುವ ಯಾತ್ರೆಯಿಂದ ಪ್ರಯೋಜನವಿಲ್ಲ' ಎಂದರು. </p><p>ಖಾಸಗಿ ಕ್ಷೇತ್ರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಜಾರಿಗೆ ಕಿರಣ್ ಮಜುಂದಾರ್ ಸೇರಿದಂತೆ ಹಲವರು ವಿರೋಧಿಸುತ್ತಿರುವ ಪ್ರತಿಕ್ರಿಯಿಸಿ, 'ರಾಜ್ಯದಲ್ಲಿನ ಕಂಪನಿಗಳಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗಬೇಕು. ಇಲ್ಲವಾದರೆ ನಾವು ಏನು ಮಾಡಬೇಕೋ ಮಾಡುತ್ತೇವೆ' ಎಂದರು.</p><p>'ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ವಿಚಾರದಲ್ಲಿ ಯಾರು ಬಂದರೂ ಚರ್ಚೆಗೆ ಸಿದ್ಧರಿದ್ದೇವೆ. ಇದೊಂದು ಸಂವಿಧಾನ ವಿರೋಧಿ ನಡೆ. ಅದಕ್ಕಾಗಿಯೇ ಕಾಂಗ್ರೆಸ್ ನರೇಗಾ ಬಚಾವೊ ಆಂದೋಲನ ಹಮ್ಮಿಕೊಳ್ಳುತ್ತಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: 'ಬಿಜೆಪಿ ಆಡಳಿತದಲ್ಲಿ ಬಳ್ಳಾರಿ ಹೇಗೆ ರಿಪಬ್ಲಿಕ್ ಆಗಿತ್ತು. ಸಂಪತ್ತು ಯಾರ ಕೈಯಲ್ಲಿ ಇತ್ತು ಎಂಬುದು ಗೊತ್ತಿದೆ. ಆರೋಪಿಗಳೇ ಪಾದಯಾತ್ರೆ- ಸಮಾವೇಶ ಮಾಡುತ್ತೇವೆ ಎನ್ನುವುದು ಹಾಸ್ಯಾಸ್ಪದ' ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಟೀಕಿಸಿದರು.</p><p>ಬಳ್ಳಾರಿ ಘಟನೆ ಖಂಡಿಸಿ ಬಿಜೆಪಿಯು ಪಾದಯಾತ್ರೆಗೆ ಸಿದ್ಧತೆ ನಡೆಸಿರುವ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು 'ರಾಜಕೀಯ ಉದ್ದೇಶಕ್ಕೆ ನಡೆಯುವ ಯಾತ್ರೆಯಿಂದ ಪ್ರಯೋಜನವಿಲ್ಲ' ಎಂದರು. </p><p>ಖಾಸಗಿ ಕ್ಷೇತ್ರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಜಾರಿಗೆ ಕಿರಣ್ ಮಜುಂದಾರ್ ಸೇರಿದಂತೆ ಹಲವರು ವಿರೋಧಿಸುತ್ತಿರುವ ಪ್ರತಿಕ್ರಿಯಿಸಿ, 'ರಾಜ್ಯದಲ್ಲಿನ ಕಂಪನಿಗಳಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗಬೇಕು. ಇಲ್ಲವಾದರೆ ನಾವು ಏನು ಮಾಡಬೇಕೋ ಮಾಡುತ್ತೇವೆ' ಎಂದರು.</p><p>'ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ವಿಚಾರದಲ್ಲಿ ಯಾರು ಬಂದರೂ ಚರ್ಚೆಗೆ ಸಿದ್ಧರಿದ್ದೇವೆ. ಇದೊಂದು ಸಂವಿಧಾನ ವಿರೋಧಿ ನಡೆ. ಅದಕ್ಕಾಗಿಯೇ ಕಾಂಗ್ರೆಸ್ ನರೇಗಾ ಬಚಾವೊ ಆಂದೋಲನ ಹಮ್ಮಿಕೊಳ್ಳುತ್ತಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>