<p><strong>ಮೈಸೂರು:</strong> ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ನೌಕರರು ಅಭಿನಯಿಸಿದ, ಪಿ.ಲಂಕೇಶ್ ಕಥೆ ಆಧರಿಸಿದ ‘ಮುಟ್ಟಿಸಿಕೊಂಡವನು’ ನಾಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.</p><p>ಇಲ್ಲಿನ ಕಲಾಮಂದಿರದಲ್ಲಿ ಸೋಮವಾರ ಸಂಜೆ ವಿಶೇಷ ಪ್ರದರ್ಶನ ನಡೆಯಿತು. </p><p>ಬಳಿಕ ಮಾತನಾಡಿದ ಸಚಿವರು, ‘ಧರ್ಮ ಮತ್ತು ಜಾತಿ ದೇಶದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಮಾರಕವಾಗುತ್ತದೆ ಮತ್ತು ಸೇವೆಗೆ ಹೇಗೆ ನಿರ್ಬಂಧಿಸುತ್ತದೆ? ಜಾತಿ ವ್ಯವಸ್ಥೆಯಲ್ಲಿ ಜನರನ್ನು ಈ ಸಮಾಜ ಹೇಗೆ ನೋಡಿಕೊಳ್ಳುತ್ತದೆ ಎಂಬುದನ್ನು ಈ ನಾಟಕ ತಿಳಿಸುತ್ತದೆ. ಜಾತಿ ವ್ಯವಸ್ಥೆಯಿಂದ ಹೊರಬರಬೇಕು</p><p>ಎಂವ ಸಾಮಾಜಿಕ ಸಂದೇಶಗಳನ್ನು ಅಭಿವ್ಯಕ್ತಗೊಳಿಸುತ್ತದೆ’ ಎಂದರು.</p><p>‘ಯುವಜನರು ಜಾತಿ, ಲಿಂಗ ತಾರತಮ್ಯ ನಿವಾರಣೆಗೆ ಮುಂದಾಗಬೇಕು. ಬಸವಣ್ಣನವರು ಅಂತರ್ಜಾತಿ ವಿವಾಹದ ಮೂಲಕ ಜಾತಿ ವಿನಾಶಕ್ಕೆ ಪ್ರಯತ್ನಿಸಿದರು. ಅಂಬೇಡ್ಕರ್ ಅವರು ಜಾತಿ ವಿನಾಶವಾಗದ ಹೊರತು ದೇಶದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ ಎಂಬ ಸಂದೇಶವನ್ನು ಕೊಟ್ಟಿದ್ದಾರೆ. ಜಾತಿರಹಿತ ಸಮಾಜದ ನಿರ್ಮಾಣದತ್ತ ನಮ್ಮ ಹೋರಾಟ ಇರಬೇಕು’ ಎಂದರು.</p><p>‘ಮಾನವರಾದ ನಾವೆಲ್ಲರೂ ಒಂದೇ. ಇದಕ್ಕಾಗಿ ಪಂಪ, ನಾಲ್ವಡಿ ಕೃಷ್ಣರಾಜ ಒಡೆಯರ್, ನಾರಾಯಣಗುರು, ಕನಕದಾಸರು, ಬುದ್ಧ, ಬಸವ, ಅಂಬೇಡ್ಕರ್ ಮೊದಲಾದವರ ಆದರ್ಶಗಳನ್ನು ಪಾಲಿಸಬೇಕು. ಅವರ ಸಂದೇಶಗಳು ದೇಶಕ್ಕೆ ಪ್ರಸ್ತುತವಾಗಿವೆ’ ಎಂದು ಹೇಳಿದರು.</p><p>ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಸಮಾಜ ಕಲ್ಯಾಣ ಸಚಿವರ ವಿಶೇಷ ಕರ್ತವ್ಯಾಧಿಕಾರಿ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ, ಸಹಾಯಕ ನಿರ್ದೇಶಕ ಜನಾರ್ಧನ್, ಮುನಿರಾಜು, ಇಲಾಖೆಯ ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ಸಲಹೆಗಾರ ಬಸವರಾಜ ದೇವನೂರು ಹಾಗೂ ಚಿಂತಕ ಎಸ್.ತುಕಾರಾಂ ಉಪಸ್ಥಿತರಿದ್ದರು.</p><p>ನಾಟಕದ ಬಗ್ಗೆ ವಿಶೇಷ ವರದಿ ಪ್ರಕಟಿಸಿದ್ದ ‘ಪ್ರಜಾವಾಣಿ’ಯನ್ನು ಅಭಿನಂದಿಸಿದ ಸಚಿವರು, ಒಳ್ಳೆಯ ಲೇಖನ ಬಂದಿದೆ ಎಂದು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ನೌಕರರು ಅಭಿನಯಿಸಿದ, ಪಿ.ಲಂಕೇಶ್ ಕಥೆ ಆಧರಿಸಿದ ‘ಮುಟ್ಟಿಸಿಕೊಂಡವನು’ ನಾಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.</p><p>ಇಲ್ಲಿನ ಕಲಾಮಂದಿರದಲ್ಲಿ ಸೋಮವಾರ ಸಂಜೆ ವಿಶೇಷ ಪ್ರದರ್ಶನ ನಡೆಯಿತು. </p><p>ಬಳಿಕ ಮಾತನಾಡಿದ ಸಚಿವರು, ‘ಧರ್ಮ ಮತ್ತು ಜಾತಿ ದೇಶದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಮಾರಕವಾಗುತ್ತದೆ ಮತ್ತು ಸೇವೆಗೆ ಹೇಗೆ ನಿರ್ಬಂಧಿಸುತ್ತದೆ? ಜಾತಿ ವ್ಯವಸ್ಥೆಯಲ್ಲಿ ಜನರನ್ನು ಈ ಸಮಾಜ ಹೇಗೆ ನೋಡಿಕೊಳ್ಳುತ್ತದೆ ಎಂಬುದನ್ನು ಈ ನಾಟಕ ತಿಳಿಸುತ್ತದೆ. ಜಾತಿ ವ್ಯವಸ್ಥೆಯಿಂದ ಹೊರಬರಬೇಕು</p><p>ಎಂವ ಸಾಮಾಜಿಕ ಸಂದೇಶಗಳನ್ನು ಅಭಿವ್ಯಕ್ತಗೊಳಿಸುತ್ತದೆ’ ಎಂದರು.</p><p>‘ಯುವಜನರು ಜಾತಿ, ಲಿಂಗ ತಾರತಮ್ಯ ನಿವಾರಣೆಗೆ ಮುಂದಾಗಬೇಕು. ಬಸವಣ್ಣನವರು ಅಂತರ್ಜಾತಿ ವಿವಾಹದ ಮೂಲಕ ಜಾತಿ ವಿನಾಶಕ್ಕೆ ಪ್ರಯತ್ನಿಸಿದರು. ಅಂಬೇಡ್ಕರ್ ಅವರು ಜಾತಿ ವಿನಾಶವಾಗದ ಹೊರತು ದೇಶದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ ಎಂಬ ಸಂದೇಶವನ್ನು ಕೊಟ್ಟಿದ್ದಾರೆ. ಜಾತಿರಹಿತ ಸಮಾಜದ ನಿರ್ಮಾಣದತ್ತ ನಮ್ಮ ಹೋರಾಟ ಇರಬೇಕು’ ಎಂದರು.</p><p>‘ಮಾನವರಾದ ನಾವೆಲ್ಲರೂ ಒಂದೇ. ಇದಕ್ಕಾಗಿ ಪಂಪ, ನಾಲ್ವಡಿ ಕೃಷ್ಣರಾಜ ಒಡೆಯರ್, ನಾರಾಯಣಗುರು, ಕನಕದಾಸರು, ಬುದ್ಧ, ಬಸವ, ಅಂಬೇಡ್ಕರ್ ಮೊದಲಾದವರ ಆದರ್ಶಗಳನ್ನು ಪಾಲಿಸಬೇಕು. ಅವರ ಸಂದೇಶಗಳು ದೇಶಕ್ಕೆ ಪ್ರಸ್ತುತವಾಗಿವೆ’ ಎಂದು ಹೇಳಿದರು.</p><p>ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಸಮಾಜ ಕಲ್ಯಾಣ ಸಚಿವರ ವಿಶೇಷ ಕರ್ತವ್ಯಾಧಿಕಾರಿ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ, ಸಹಾಯಕ ನಿರ್ದೇಶಕ ಜನಾರ್ಧನ್, ಮುನಿರಾಜು, ಇಲಾಖೆಯ ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ಸಲಹೆಗಾರ ಬಸವರಾಜ ದೇವನೂರು ಹಾಗೂ ಚಿಂತಕ ಎಸ್.ತುಕಾರಾಂ ಉಪಸ್ಥಿತರಿದ್ದರು.</p><p>ನಾಟಕದ ಬಗ್ಗೆ ವಿಶೇಷ ವರದಿ ಪ್ರಕಟಿಸಿದ್ದ ‘ಪ್ರಜಾವಾಣಿ’ಯನ್ನು ಅಭಿನಂದಿಸಿದ ಸಚಿವರು, ಒಳ್ಳೆಯ ಲೇಖನ ಬಂದಿದೆ ಎಂದು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>