<p><strong>ಎಚ್.ಡಿ.ಕೋಟೆ:</strong> ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ತೆರಳಲು ಇರುವ ರಸ್ತೆ ಜಾಗವನ್ನು ಬಿಡಿಸಿಕೊಡಬೇಕು ಎಂದು ಆಗ್ರಹಿಸಿ ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ 85 ವರ್ಷದ ದೇವಮ್ಮ ತಹಶೀಲ್ದಾರ್ ಕಚೇರಿ ಮುಂಭಾಗ ಅನಿರ್ದಿಷ್ಟ ಅವಧಿ ಧರಣಿ ನಡೆಸಿದರು</p>.<p>‘ತಾಲ್ಲೂಕಿನ ಕೊಡಸೀಗೆ ಗ್ರಾಮದಲ್ಲಿ 5 ಎಕರೆ ಜಮೀನು ಸರ್ಕಾರದಿಂದ 1970ರಲ್ಲಿ ಮಂಜೂರಾಗಿದ್ದು, ಅಂದಿನಿಂದಲೂ ಜಮೀನಿಗೆ ಹೋಗುವ ರಸ್ತೆಗೆ ಪಕ್ಕದ ಜಮೀನಿನ ವ್ಯಕ್ತಿ ತೊಂದರೆ ನೀಡುತ್ತಿದ್ದು, ಈ ಕುರಿತು ತಹಶೀಲ್ದಾರ್ ಅವರಿಗೆ ದೂರು ನೀಡಿದ ಬಳಿಕ ಎರಡು ತಿಂಗಳ ಹಿಂದೆ ಪೊಲೀಸರ ಸಮ್ಮುಖದಲ್ಲಿ ರಸ್ತೆ ಬಿಡಿಸಿ ಕೊಟ್ಟಿದ್ದರು. ಆ ಸಂದರ್ಭದಲ್ಲಿ ಸ್ಥಳದಲ್ಲಿ ಮಾಲೀಕರೂ ಸಮ್ಮತಿದರೂ ರಸ್ತೆ ಬಿಡದೆ ತೊಂದರೆ ಕೊಡುತ್ತಿದ್ದಾರೆ’ ಎಂದು ದೂರಿದರು.</p>.<p>‘ ವಿಚಾರವಾಗಿ ಪೊಲೀಸ್ ಠಾಣೆಗೆ ದೂರು ನೀಡಿದರೂ ನನಗೆ ನ್ಯಾಯ ಸಿಕ್ಕಿಲ್ಲ, ಹಾಗಾಗಿ ನನಗೆ ನ್ಯಾಯ ಸಿಗುವವರೆಗೆ ಇಲ್ಲಿಂದ ಹೋಗುವುದಿಲ್ಲ’ ಎಂದು ಪಟ್ಟು ಹಿಡಿದರು.</p>.<p>ವಿಚಾರ ತಿಳಿದು ಸ್ಥಳಕ್ಕೆ ಬಂದ ತಹಶೀಲ್ದಾರ್ ಶ್ರೀನಿವಾಸ್ ‘ಎರಡು ದಿನಗಳಲ್ಲಿ ಪೊಲೀಸರ ಸಮ್ಮುಖದಲ್ಲಿ ಜಮೀನಿನ ರಸ್ತೆಗೆ ತೊಂದರೆ ನೀಡುತ್ತಿರುವ ವ್ಯಕ್ತಿಯನ್ನು ಕರೆಸಿ ತಿಳಿವಳಿಕೆ ನೀಡಿ ಸರ್ಕಾರಿ ರಸ್ತೆ ತೆರವು ಮಾಡಲು ಸೂಚನೆ ನೀಡುತ್ತೇನೆ. ಪ್ರತಿಭಟನೆ ಕೈಬಿಡಬೇಕು’ ಎಂದು ಮನವಿ ಮಾಡಿದರು. ಬಳಿಕ ಧರಣಿ ಕೈಬಿಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-38-727193181</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ತೆರಳಲು ಇರುವ ರಸ್ತೆ ಜಾಗವನ್ನು ಬಿಡಿಸಿಕೊಡಬೇಕು ಎಂದು ಆಗ್ರಹಿಸಿ ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ 85 ವರ್ಷದ ದೇವಮ್ಮ ತಹಶೀಲ್ದಾರ್ ಕಚೇರಿ ಮುಂಭಾಗ ಅನಿರ್ದಿಷ್ಟ ಅವಧಿ ಧರಣಿ ನಡೆಸಿದರು</p>.<p>‘ತಾಲ್ಲೂಕಿನ ಕೊಡಸೀಗೆ ಗ್ರಾಮದಲ್ಲಿ 5 ಎಕರೆ ಜಮೀನು ಸರ್ಕಾರದಿಂದ 1970ರಲ್ಲಿ ಮಂಜೂರಾಗಿದ್ದು, ಅಂದಿನಿಂದಲೂ ಜಮೀನಿಗೆ ಹೋಗುವ ರಸ್ತೆಗೆ ಪಕ್ಕದ ಜಮೀನಿನ ವ್ಯಕ್ತಿ ತೊಂದರೆ ನೀಡುತ್ತಿದ್ದು, ಈ ಕುರಿತು ತಹಶೀಲ್ದಾರ್ ಅವರಿಗೆ ದೂರು ನೀಡಿದ ಬಳಿಕ ಎರಡು ತಿಂಗಳ ಹಿಂದೆ ಪೊಲೀಸರ ಸಮ್ಮುಖದಲ್ಲಿ ರಸ್ತೆ ಬಿಡಿಸಿ ಕೊಟ್ಟಿದ್ದರು. ಆ ಸಂದರ್ಭದಲ್ಲಿ ಸ್ಥಳದಲ್ಲಿ ಮಾಲೀಕರೂ ಸಮ್ಮತಿದರೂ ರಸ್ತೆ ಬಿಡದೆ ತೊಂದರೆ ಕೊಡುತ್ತಿದ್ದಾರೆ’ ಎಂದು ದೂರಿದರು.</p>.<p>‘ ವಿಚಾರವಾಗಿ ಪೊಲೀಸ್ ಠಾಣೆಗೆ ದೂರು ನೀಡಿದರೂ ನನಗೆ ನ್ಯಾಯ ಸಿಕ್ಕಿಲ್ಲ, ಹಾಗಾಗಿ ನನಗೆ ನ್ಯಾಯ ಸಿಗುವವರೆಗೆ ಇಲ್ಲಿಂದ ಹೋಗುವುದಿಲ್ಲ’ ಎಂದು ಪಟ್ಟು ಹಿಡಿದರು.</p>.<p>ವಿಚಾರ ತಿಳಿದು ಸ್ಥಳಕ್ಕೆ ಬಂದ ತಹಶೀಲ್ದಾರ್ ಶ್ರೀನಿವಾಸ್ ‘ಎರಡು ದಿನಗಳಲ್ಲಿ ಪೊಲೀಸರ ಸಮ್ಮುಖದಲ್ಲಿ ಜಮೀನಿನ ರಸ್ತೆಗೆ ತೊಂದರೆ ನೀಡುತ್ತಿರುವ ವ್ಯಕ್ತಿಯನ್ನು ಕರೆಸಿ ತಿಳಿವಳಿಕೆ ನೀಡಿ ಸರ್ಕಾರಿ ರಸ್ತೆ ತೆರವು ಮಾಡಲು ಸೂಚನೆ ನೀಡುತ್ತೇನೆ. ಪ್ರತಿಭಟನೆ ಕೈಬಿಡಬೇಕು’ ಎಂದು ಮನವಿ ಮಾಡಿದರು. ಬಳಿಕ ಧರಣಿ ಕೈಬಿಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-38-727193181</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>